ಖಾಸಗೀಕರಣದಿಂದ ಉದ್ಯೋಗ ಹಾನಿ: ಜಬ್ಟಾರ್
ಬೆಲೆ ಹೆಚ್ಚಿಸಿ ಜನರನ್ನು ಸಂಕಷ್ಟಕ್ಕೆ ತಳ್ಳುತ್ತಿದೆ ಸರ್ಕಾರ | ಬಿಜೆಪಿ-ಜೆಡಿಎಸ್ನಿಂದ ಹೊಂದಾಣಿಕೆ ರಾಜಕಾರಣ
Team Udayavani, Oct 10, 2021, 7:24 PM IST
ಕಲಾದಗಿ: ಕಳೆದ 70 ವರ್ಷದಲ್ಲಿ ಕಾಂಗ್ರೆಸ್ ಮಾಡಿದ ಸರ್ಕಾರಿ ಆಸ್ತಿ ಬಿಜೆಪಿ ಸರ್ಕಾರ ಖಾಸಗಿಯವರಿಗೆ ಮಾರುತ್ತಿದೆ. ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಸಿ ಜನರನ್ನು ಸಂಕಷ್ಟದ ತಳ್ಳುತ್ತಿದೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ರಾಜ್ಯಾಧ್ಯಕ್ಷ ಕೆ.ಅಬ್ದುಲ್ ಜಬ್ಟಾರ್ ಹೇಳಿದರು.
ಸಿಂದಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಮಾರ್ಗಮಧ್ಯೆ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಬಿ. ಸೌದಾಗರ್ ಮನೆಗೆ ಭೇಟಿ ನೀಡಿ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಖಾಸಗೀಕರಣ ಮಾಡುವುದರಿಂದ ಅದೆಷ್ಟೋ ಉದ್ಯೋಗಿಗಳು ನಿರುದ್ಯೋಗಿಗಳಾಗುತ್ತಾರೆ. ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಬಡ ಜನರಿಗೆ ಉದ್ಯೋಗ ಇಲ್ಲದಂತಾಗುತ್ತದೆ. ಖಾಸಗೀಕರಣದಿಂದ ಖಾಸಗಿವರು ತಮಗೆ ಬೇಕಾದವರನ್ನು ಮಾತ್ರ ಉದ್ಯೋಗಕ್ಕೆ ಭರ್ತಿ ಮಾಡಿಕೊಳ್ಳುತ್ತಾರೆ ಎಂದರು.
ಸಿಂದಗಿ, ಹಾನಗಲ್ಲ ಉಪ ಚುನಾವಣೆಯಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ ಕಣಕ್ಕಿಳಿಸಿದೆ. ಏಕಾಏಕಿ ಮುಸ್ಲಿಮರ ಮೇಲೆ ಪ್ರೀತಿ ಹೆಚ್ಚಾಗಿದ್ದೇ ಆಶ್ಚರ್ಯ. ಜೆಡಿಎಸ್ಗೆ ಅಲ್ಪಸಂಖ್ಯಾತರ ಮೇಲೆ ಅಷ್ಟೊಂದು ಪ್ರೀತಿ ಇದ್ದರೆ ಮಂಡ್ಯ, ಹಾಸನ, ಬೆಂಗಳೂರು, ಮೈಸೂರು ಭಾಗದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ಕೊಟ್ಟು ಗೆಲ್ಲಿಸಲಿ. ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಯಾರನ್ನು ಗೆಲ್ಲಿಸಬೇಕೆಂದು ಲೆಕ್ಕಾಚಾರ ಮಾಡಿಕೊಂಡಿವೆ. ಆದರೆ ಮತದಾರರು ಇವರ ತಂತ್ರಗಾರಿಕೆ ತಿಳಿಯದಷ್ಟು ಮೂರ್ಖರಲ್ಲ. ಜಾತ್ಯತೀತ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಬೇಕು. ರಾಜ್ಯ ಅಲ್ಪಸಂಖ್ಯಾತರನ್ನು ಒಗ್ಗಟ್ಟಿನಿಂದ ಸಂಘಟನೆ ಮಾಡುತ್ತೇವೆ. ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಉಳಿದರೆ ಮಾತ್ರ ದೇಶ ಉಳಿಯುತ್ತದೆ ಎಂದರು.
ಈ ವೇಳೆ ಕೆಪಿಸಿಸಿ ಯೂತ್ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ನಾಸೀರಖಾನ್ ಪಠಾಣ, ಗ್ರಾಪಂ ಅಧ್ಯಕ್ಷ ಜಮೀರ ಅಹಮದ್ ಜಮಾದಾರ, ಬ್ಲಾಕ್ ಅಧ್ಯಕ್ಷ ಬಸುರಾಜ ಸಂಶಿ, ಸಂಗಣ್ಣ ಮುಧೋಳ, ಸಲೀಂ ಶೇಕ್, ಹಸನಮ್ಮದ್ ರೋಣ, ರೈಮಾನಸಾಬ ಬಾರುದಾಲೆ, ಮೈನುದ್ದೀನ ತೇಲಿ, ಹುಸೇನಸಾಬ ನದಾಫ್, ಸೈಪುದ್ದೀನ್ ಸೌದಾಗಾರ, ಹುಸ್ಮಾನ್ ರೋಣ, ಅಕ್ರಮ ಸೌದಾಗಾರ, ರಿಯಾಜ್ ಪಿರಜಾದೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR