ಬರಿದಾದ ಮಲಪ್ರಭೆ

•ಹಡಗಲಿ ಬ್ಯಾರೇಜ್‌ ಖಾಲಿ•ಸಂಕಷ್ಟದಲ್ಲಿ 23 ಗ್ರಾಮಗಳ ಜನರು

Team Udayavani, Apr 28, 2019, 12:41 PM IST

bagalkotte-2..

ಹುನಗುಂದ: ಸಂಪೂರ್ಣ ಬತ್ತಿರುವ ಮಲಪ್ರಭಾ ನದಿ ಪಾತ್ರದ ಹಡಗಲಿ ಬ್ಯಾರೇಜ್‌.

ಹುನಗುಂದ: ಕೃಷ್ಣೆ, ಮಲಪ್ರಭೆ, ಘಟಪ್ರಭೆ ನದಿಗಳ ಸಂಗಮವಾದರೂ ತಾಲೂಕಿನಲ್ಲಿ ಕುಡಿಯುವ ನೀರಿಗಾಗಿ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಿಜ, ಹುನಗುಂದ ತಾಲೂಕಿನಲ್ಲಿ ಎರಡು ನದಿಗಳು ಹರಿದಿವೆ. ತಾಲೂಕಿನ ಗಡಿಗುಂಟ ಕೃಷ್ಣೆ ಹರಿದರೆ, ಹತ್ತಾರು ಹಳ್ಳಿಗಳಲ್ಲಿ ಹಾಯ್ದು ಕೂಡಲಸಂಗಮದಲ್ಲಿ ಕೃಷ್ಣೆಯೊಂದಿಗೆ ಮಲಪ್ರಭೆ ಲೀನವಾಗುತ್ತಾಳೆ. ಇನ್ನು ಬೀಳಗಿ ತಾಲೂಕಿನ ಚಿಕ್ಕಸಂಗಮದಲ್ಲೇ, ಕೃಷ್ಣೆಯೊಂದಿಗೆ ಘಟಪ್ರಭೆ ಕೂಡಿ, ಕೂಡಲಸಂಗಮಕ್ಕೆ ಬಂದು, ಮೂರು ನದಿಗಳು ಕೃಷ್ಣೆಯಾಗಿ ಮುಂದೆ ಸಾಗುತ್ತವೆ. ತ್ರಿವೇಣಿ ಸಂಗಮ ಎಂಬ ಖ್ಯಾತಿ ತಾಲೂಕಿಗಿದ್ದರೂ ಇಲ್ಲಿನ ಕುಡಿಯುವ ನೀರಿನ ಸಮಸ್ಯೆ ನೀಗಿಲ್ಲ.

ತಾಲೂಕಿನ ಹಡಗಲಿ ಬಳಿ ಮಲಪ್ರಭಾ ನದಿಯ ಒಡಲಲ್ಲಿ ಇರುವ ಹಡಗಲಿ ಬ್ಯಾರೇಜ್‌, ಹತ್ತಾರು ಹಳ್ಳಿಯ ಜನ-ಜಾನುವಾರುಗಳ ಕುಡಿಯುವ ನೀರಿನ ದಾಹ ನೀಗಿಸುವ ಜೀವಜಲ. ಆದರೆ, ಈ ಬ್ಯಾರೇಜ್‌ ಕಳೆದ ಹಲವು ತಿಂಗಳಿಂದ ಬರಿದಾಗಿದ್ದು, ಜನ-ಜಾನುವಾರುಗಳು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಬಂದೋದಗಿದೆ.

ತಾಲೂಕಿನಲ್ಲಿ ಸತತ ಮೂರು ನಾಲ್ಕು ವರ್ಷಗಳಿಂದ ಸರಿಯಾಗಿ ಮಳೆಯಾಗದೇ ಬರಗಾಲ ಆವರಿಸಿದ್ದು. ಬರದ ಛಾಯೆ ಈ ವರ್ಷವೂ ಮುಂದುವರಿದಿದೆ. ಇದರಿಂದ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

ಪ್ರತಿ ವರ್ಷ ಮಾರ್ಚ್‌ ತಿಂಗಳವರೆಗೆ ನದಿಯ ನೀರು ರೈತರಿಗೆ ಲಭ್ಯವಿರುತ್ತಿತ್ತು. ಆದರೆ ಕಳೆದ ಮೂರು ವರ್ಷಗಳಿಂದ ನದಿಯ ನೀರು ಜನವರಿ ತಿಂಗಳಲ್ಲಿಯೇ ಬರಿದಾಗುತ್ತಿರುವುದರಿಂದ ನದಿ ಪಾತ್ರದ ಜನ ಜಾನುವಾರುಗಳಿಗೆ ಕುಡಿಯಲು ಒಂದು ತೊಟ್ಟು ನೀರು ಸಿಗದೇ ನೀರಿಗಾಗಿ ಹಲವಾರು ಬಾರಿ ಈ ನದಿಯ ಎಡದಂಡೆ ಮತ್ತು ಬಲದಂಡೆಯ ರೈತರು ನವಿಲು ತೀರ್ಥ ಜಲಾಶಯದಿಂದ ನೀರು ಬಿಡುವಂತೆ ಒತ್ತಾಯಿಸಿ ತಾಲೂಕಾಡಳಿತ ಮತ್ತು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಒಂದು ಹನಿ ನೀರು ಬಿಡುತ್ತಿಲ್ಲ ಎಂಬ ಆಕ್ರೋಶ ಜನರಿಂದ ಕೇಳಿ ಬರುತ್ತಿದೆ.

ಮಲಪ್ರಭೆ ನದಿಗೆ ಶಾಶ್ವತ ಪರಿಹಾರಕ್ಕಾಗಿ ಮಹದಾಯಿ ನದಿಯ ನೀರು ಕಳಸಾ ಬಂಡೂರಿ ನಾಲೆಯ ಮೂಲಕ ಮಲಪ್ರಭೆ ನದಿಗೆ ಜೋಡಿಸಿದರೆ ಉತ್ತರ ಕರ್ನಾಟಕದ 4 ಜಿಲ್ಲೆಯ 11 ತಾಲೂಕಿನ ಜನರು ನೀರಿನ ಬರ ಇಲ್ಲದಂತಾಗುತ್ತದೆ. ಇಲ್ಲಿನ ರೈತರು ಹತ್ತು ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಯಾವದೇ ಸರ್ಕಾರ ಮತ್ತು ಜನಪ್ರತಿನಿಧಿಗಳು ಕಣ್ಣು ತೆರೆಯದಿರುವುದು ದುರಂತದ ಸಂಗತಿ ಎಂದು ಜನ ಬೇಸರದಿಂದ ನುಡಿಯುತ್ತಾರೆ.

ಹಡಗಲಿ ಬ್ಯಾರೇಜ್‌ ಖಾಲಿ ಖಾಲಿ: ಬೇಸಿಗೆ ಆರಂಭವಾಗುತ್ತಿದ್ದಂತೆ ನೆತ್ತಿ ಸುಡುವ ಬಿಸಿಲಿನ ತಾಪ ಒಂದೆಡೆಯಾದರೇ ಇನ್ನೊಂದೆಡೆ ನೀರಿನ ಮೂಲಗಳಾದ ನದಿ, ಹಳ್ಳ, ಕೊಳ್ಳಗಳು ಬತ್ತಿ ಬರಿದಾಗಿ ಜಲಮೂಲ ಹುಡುಕುವ ಸ್ಥಿತಿ ಎದುರಾಗಿದೆ. ಮಲಪ್ರಭಾ ನದಿ ಪಾತ್ರದಲ್ಲಿ ಸುಮಾರು 25 ಬ್ಯಾರೇಜ್‌ಗಳಿದ್ದು, ಹುನಗುಂದ ತಾಲೂಕಿನಲ್ಲೇ 6 ಬ್ಯಾರೇಜ್‌ಗಳಿವೆ. ಅದರಲ್ಲಿ ಹಡಗಲಿ ಬ್ಯಾರೇಜ್‌ ಪ್ರಮುಖವಾಗಿದೆ.

ಈ ಬ್ಯಾರೇಜ್‌ಗೆ ನೀರು ತುಂಬಿದರೇ ಇಲ್ಲಿನ ಹತ್ತಕ್ಕೂ ಹೆಚ್ಚು ಗ್ರಾಮದ ಜನರ ಕುಡಿಯುವ ನೀರಿಗೆ ಅನೂಕೂಲವಾಗುತ್ತ್ತದೆ. ಆದರೆ ಈ ಬ್ಯಾರೇಜ್‌ ಖಾಲಿಯಾಗಿ ನಾಲ್ಕೈದು ತಿಂಗಳು ಗತಿಸಿದರೂ ಒಂದು ತೊಟ್ಟು ನೀರು ಬಂದಿಲ್ಲ. ಕಳೆದ ಜನವರಿ ತಿಂಗಳಲ್ಲಿ ಮಾಜಿ ಸಿ.ಎಂ ಸಿದ್ದರಾಮಯ್ಯನವರ ಹೇಳಿದಾಗ 0.75 ಟಿಎಂಸಿ ನೀರನ್ನು ಮಲಪ್ರಭೆಗೆ ಹರಿಸಲಾಯಿತು. ಆದರೆ ಆ ನೀರು, ಬಾದಾಮಿ ತಾಲೂಕಿನ ಎಲ್ಲ ಬ್ಯಾರೇಜ್‌ಗಳು ತುಂಬಿದ ನಂತರ ತಡೆ ಹಿಡಿಯಲಾಯಿತು. ಇದರಿಂದ ಹನಿ ನೀರು ಸಹ ಹುನಗುಂದ ತಾಲೂಕಿಗೆ ತಲುಪಲಿಲ್ಲ. ಇದರಿಂದ ತಾಲೂಕಿನ 6 ಬ್ಯಾರೇಜ್‌ಗಳು ನೀರು ಇಲ್ಲದೇ ಖಾಲಿ ಖಾಲಿಯಾಗಿವೆ. ಇದರಿಂದ ಈ ಭಾಗದ 23 ಗ್ರಾಮಗಳ ಜನರು ನೀರಿಗಾಗಿ ಪರಿತಪಿಸುವ ಪರಿಸ್ಥಿತಿ ಇದೆ. ಇದು ಬಾದಾಮಿ ತಾಲೂಕಿಗೆ ಪ್ರಾಶಸ್ತ್ಯ ನೀಡಿ ಹುನಗುಂದ ತಾಲೂಕನ್ನು ಕಡೆಗಣಿಸಲಾಗಿದೆ ಆರೋಪ ಕೇಳಿ ಬರುತ್ತಿದೆ.

•ಮಲ್ಲಿಕಾರ್ಜುನ ಬಂಡರಗಲ್ಲ

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.