ಮಕ್ಕಳನ್ನು ಪ್ರೋತ್ಸಾಹಿಸಿ ಉತ್ತಮ ಪಾಲಕರಾಗಿ: ಬದಾಮಿ

ಮಕ್ಕಳಲ್ಲೂ ಸೂಪ್ತ ಪ್ರತಿಭೆ ಇದೆ. ಮಕ್ಕಳು ಹಾಡುತ್ತಾರೆ, ಚಿತ್ರ ಬರೆಯುತ್ತಾರೆ, ಕವನ ಬರೆಯುತ್ತಾರೆ.

Team Udayavani, Feb 28, 2022, 5:57 PM IST

ಮಕ್ಕಳನ್ನು ಪ್ರೋತ್ಸಾಹಿಸಿ ಉತ್ತಮ ಪಾಲಕರಾಗಿ: ಬದಾಮಿ

ರಬಕವಿ-ಬನಹಟ್ಟಿ (ದು.ನಿಂ ಬೆಳಗಲಿ ಸಭಾ ಮಂಟಪ): ಮನೆಯಲ್ಲಿ ಪಾಲಕರು ಮಕ್ಕಳಿಗೆ ಮೌಲ್ಯಯುತ ಮಾತುಗಳನ್ನು ಹೇಳಿ ಸುಸಂಸ್ಕೃತರನ್ನಾಗಿ ಬೆಳೆಸಬೇಕು. ಮಕ್ಕಳನ್ನು ಪ್ರೋತ್ಸಾಹಿಸುವ ಮೂಲಕ ಉತ್ತಮ ಪಾಲಕರಾಗಿ. ಮಕ್ಕಳ ಮೇಲೆ ಒತ್ತಡ ಹೇರಿ ಮಕ್ಕಳ ಕಣ್ಣಿಗೆ ಪೊಲೀಸರಾಗಿ ಕಾಣಬೇಡಿ ಎಂದು ನಿವೃತ್ತ ಅರ್ಥಶಾಸ್ತ್ರ ಉಪನ್ಯಾಸಕ ಎಂ.ಎಸ್‌.ಬದಾಮಿ ಹೇಳಿದರು.

ಹೊಸೂರ ರಬಕವಿಯ ಪದ್ಮಾವತಿ ಇಂಟರ್‌ನ್ಯಾಷನಲ್‌ ಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ರಬಕವಿ-ಬನಹಟ್ಟಿ ತಾಲೂಕು ಕಸಾಪ ಅಧ್ಯಕ್ಷ ಮ.ಕೃ. ಮೇಗಾಡಿ ಮಾತನಾಡಿ, ಮಕ್ಕಳಲ್ಲೂ ಸೂಪ್ತ ಪ್ರತಿಭೆ ಇದೆ. ಮಕ್ಕಳು ಹಾಡುತ್ತಾರೆ, ಚಿತ್ರ ಬರೆಯುತ್ತಾರೆ, ಕವನ ಬರೆಯುತ್ತಾರೆ. ಭಾಷಣ ಮಾಡುವ ಕೌಶಲ್ಯವನ್ನೂ ಹೊಂದಿರುತ್ತಾರೆ. ಮನೆಗಳಲ್ಲಿ, ಶಾಲೆಗಳಲ್ಲಿ ಪ್ರೋತ್ಸಾಹಿಸುವ ಮೂಲಕ ಆ ಪ್ರತಿಭೆ ಹೊರಬರುವಂತೆ ಮಾಡುವುದು ಅವಶ್ಯವಾಗಿದೆ. ಮಕ್ಕಳ ಸಾಹಿತ್ಯ ಸಮ್ಮೇಳನ, ವಿವಿಧ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಮಕ್ಕಳಿಗೆ ಸೂಕ್ತ ವೇದಿಕೆಯಾಗುತ್ತವೆ ಎಂದರು.

ಡಾ| ಎ.ಎ. ಯಂಡೋಳಿಯವರು ಆರೋಗ್ಯ ಮತ್ತು ಶುಚಿತ್ವ ಕುರಿತು ಮಾತನಾಡಿದರು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಹನಗಂಡಿ, ಬನಹಟ್ಟಿ ಟೀಚರ್ ಸೊಸೈಟಿ ಅಧ್ಯಕ್ಷ ಅನಿಲ ಕಡ್ಲಿ, ಪತ್ರಕರ್ತ ಕಿರಣ ಆಳಗಿ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಈರಣ್ಣ ಲಟ್ಟಿ, ಶ್ರೀಶೈಲ ಕುಂಬಾರ, ನಚಿಕೇತ ಉಮದಿ ವೇದಿಕೆಯಲ್ಲಿದ್ದರು.

ಸಮ್ಮೇಳನಾಧ್ಯಕ್ಷೆ ಭಾಗ್ಯಶ್ರೀ ಉಳ್ಳಾಗಡ್ಡಿ ಅಧ್ಯಕ್ಷತೆ ವಹಿಸಿದ್ದರು. ವಿಜಯಲಕ್ಷ್ಮೀ ಶೀಲವಂತ ಸಹಅಧ್ಯಕ್ಷತೆ ವಹಿಸಿದ್ದರು. ಮಕ್ಕಳು ಕಿರು ನಾಟಕ, ಸಾಮೂಹಿಕ ನೃತ್ಯ ಪ್ರಸ್ತುತಪಡಿಸಿದರು. ಪರಿಷತ್‌ ತಾಲೂಕು ಉಪಾಧ್ಯಕ್ಷೆ ಶೈಲಾ ಬುರ್ಲಿ, ಮಲ್ಲಿಕಾರ್ಜುನ ಮನಿ¾, ಕಾರ್ಯದರ್ಶಿ ಕಿರಣ ಕರಲಟ್ಟಿ ಇನ್ನಿತರರು ಉಪಸ್ತಿತರಿದ್ದರು. ಶ್ರೀಶೈಲ ಕುಂಬಾರ ಸ್ವಾಗತಿಸಿದರು. ಶ್ರೇಯಾಂಕ ಜೀರಗಾಳ, ಸಂಗಮೇಶ ಬಡಿಗೇರ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಣ ಸಂಯೋಜಕ ಶ್ರೀಶೈಲ ಬುರ್ಲಿ ವಂದಿಸಿದರು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.