ಕಲೆ-ಸಾಹಿತ್ಯ ಉಳಿವಿಗೆ ಪ್ರೋತ್ಸಾಹ ಅಗತ್ಯ

ಮುತ್ತಪ್ಪ ರೈ ಮತ್ತು ಪುನೀತ್‌ ರಾಜಕುಮಾರ ಗೋಶಾಲೆಗೆ ಗೋದಾನ ನೀಡಿದ ದಾನಿಗಳನ್ನು ಸನ್ಮಾನಿಸಲಾಯಿತು.

Team Udayavani, Nov 18, 2021, 6:02 PM IST

ಕಲೆ-ಸಾಹಿತ್ಯ ಉಳಿವಿಗೆ ಪ್ರೋತ್ಸಾಹ ಅಗತ್ಯ

ಲೋಕಾಪುರ: ಕಲಾವಿದರಿಗೆ ಪ್ರೋತ್ಸಾಹಿಸಿದರೆ ಮಾತ್ರ ಜನಪದ ಕಲೆ, ಸಾಹಿತ್ಯ ಉಳಿಯಲು ಸಾಧ್ಯ ಎಂದು ಹಿರೇಮಠದ ಶ್ರೀ ಡಾ| ಚಂದ್ರಶೇಖರ ಸ್ವಾಮಿಗಳು ಹೇಳಿದರು. ಪಟ್ಟಣದ ಶ್ರೀನಿವಾಸ ಚಿತ್ರಮಂದಿರದಲ್ಲಿ ಸರ್ವಶ್ರೇಷ್ಠ ಕ್ರಿಯೇಷನ್ಸ್‌ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ನಡೆದ ಜನಪದ ರಸಮಂಜರಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಪೂರ್ವಜರಿಂದ ಬಳುವಳಿಯಾಗಿ ಬಂದ ಗ್ರಾಮೀಣ ಸೊಗಡು, ನಮ್ಮ ನೆಲಮೂಲದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸ ಎಲ್ಲರೂ ಮಾಡಬೇಕಿದೆ.

ಗ್ರಾಮೀಣ ಭಾಗದ ಕಲೆ, ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜಾನಪದ ಕಲಾವಿದರ ಕೊಡುಗೆ ಅಪಾರ. ಈ ನಿಟ್ಟಿನಲಿ ಕಲಾವಿದರಿಗೆ ಇರುವ ಎಲ್ಲ ಸೌಲಭ್ಯಗಳನ್ನು ಅರ್ಹರಿಗೆ ಮುಟ್ಟಿಸುವ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಬಾಗಲಕೋಟೆಯ ಆರ್‌.ಡಿ. ಬಾಬು (ಜ್ಯೂ. ಉಪೇಂದ್ರ) ಮಾತನಾಡಿ, ಜನಪದ ಕಲೆಯನ್ನು ಉಳಿಸಿ ಬೆಳೆಸುತ್ತಿರುವ ಎಷ್ಟೋ ಕಲಾವಿದರು ಗೌರವ ಸಿಗದೇ ಹಿಂದೆ ಉಳಿದಿದ್ದಾರೆ. ಅಂತವರನ್ನು ಗುರುತಿಸಿ ಸರಕಾರ ಪ್ರಶಸ್ತಿ ನೀಡಿದರೆ ಪ್ರಶಸ್ತಿಯ ಗೌರವವೂ ಹೆಚ್ಚುತ್ತದೆ. ಕಲಾವಿದರನ್ನು ಪ್ರೋತ್ಸಾಹಿಸಿದಂತಾಗುತ್ತದೆ ಎಂದರು.

ಜನಪದ ರಸಮಂಜರಿ ಕಾರ್ಯಕ್ರಮದಲ್ಲಿ ಮಜಾಭಾರತ ಖ್ಯಾತಿಯ ರಾಘವೇಂದ್ರ, ಜೂ. ಗುರುಕಿರಣ, ಜೂ. ಪ್ರಭಾಕರ, ಜೂ. ಎಸ್‌.ಪಿ. ಮತ್ತು ಜೂ. ಪುನೀತ್‌ ರಾಜಕುಮಾರ ಕಲಾವಿದರ ನಟನೆಯು ಜನರ ಮನ ಸೆಳೆಯಿತು. ಅಕಾಲಿಕ ಮರಣ ಹೊಂದಿದ ಖ್ಯಾತ ಚಿತ್ರನಟ ಪುನೀತ್‌ ರಾಜಕುಮಾರ ಅವರಿಗೆ ಪುಷ್ಪ ಅರ್ಪಿಸಿ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸನ್ಮಾನ: ರಾಷ್ಟ್ರೀಯ ಪತ್ರಿಕಾ ದಿನ ನಿಮಿತ್ತ ಸ್ಥಳೀಯ ಪತ್ರಕರ್ತರನ್ನು ಹಾಗೂ ಬಾಗಲಕೋಟೆಯ ಮುತ್ತಪ್ಪ ರೈ ಮತ್ತು ಪುನೀತ್‌ ರಾಜಕುಮಾರ ಗೋಶಾಲೆಗೆ ಗೋದಾನ ನೀಡಿದ ದಾನಿಗಳನ್ನು ಸನ್ಮಾನಿಸಲಾಯಿತು.

ಕರ್ನಾಟಕ ಕಾರ್ಮಿಕರ ವೇದಿಕೆ ರಾಜ್ಯ ಉಪಾಧ್ಯಕ್ಷ ಹುಸೇನಸಾಬ್‌ ಕೆರೂರ, ನ್ಯಾಯವಾದಿ ರಾಜು ಮನ್ನಿಕೇರಿ, ಗಣಿ ಉದ್ಯಮಿ ಗುರುರಾಜ ಉದಪುಡಿ, ಸುಭಾಸ ಗಸ್ತಿ, ಲಕ್ಷ¾ಣ ಮಾಲಗಿ, ಮಾರುತಿ ರಂಗಣ್ಣವರ, ಕುಮಾರ ಕಾಳಮ್ಮನವರ, ಗುಣಕರ ಶೆಟ್ಟಿ, ನಿಗರಾಜ ಜಂಬಗಿ, ಕೃಷ್ಣಾ ಹೂಗಾರ , ಕಲ್ಯಾಣ ಕರ್ನಾಟಕ ವೇದಿಕೆ ಜಿಲ್ಲಾಧ್ಯಕ್ಷ ದುರಗೇಶ ಮಾದರ, ರಂಗಪ್ಪ ವಡ್ಡರ, ಕೃಷ್ಣಾ ಭಜಂತ್ರಿ, ಸಂಸ್ಥೆ ಅಧ್ಯಕ್ಷ ಜ್ಯೂ. ಉಪೇಂದ್ರ ಎಂಬ ಹೆಸರಾಂತ ಕಲಾವಿದ ಆರ್‌.ಡಿ. ಬಾಬು, ಮುತ್ತು ತುಂಗಳ ಹಾಗೂ ಕೆ.ಪಿ. ಯಾದವಾಡ ನಿರೂಪಿಸಿದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.