ಗ್ರಾಮಸ್ಥರ ಕುಂದುಕೊರತೆ ಆಲಿಸಿದ ಸಿದ್ದರಾಮಯ್ಯ
Team Udayavani, May 29, 2021, 5:22 PM IST
ಕುಳಗೇರಿ ಕ್ರಾಸ್: ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯ ಖಾನಾಪುರ ಎಸ್ಕೆ ಗ್ರಾಮ ಸೇರಿದಂತೆ ಹಲವು ಗ್ರಾಮಸ್ಥರ ಕುಂದು ಕೊರತೆ ಆಲಿಸಿದರು.
ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆ ಖಂಡಿಸಿ ಗ್ರಾಮಸ್ಥರ ಜತೆಗೂಡಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಖಾನಾಪುರ ಎಸ್ಕೆ ಗ್ರಾಮದ ಗ್ರಾಪಂ ಸದಸ್ಯ ಶೇಖಪ್ಪ ಪವಾಡಿನಾಯ್ಕರ್ ಮನವಿ ಸಲ್ಲಿಸಿ ಸಮಸ್ಯೆ ವಿವರಿಸಿದರು. ಮನವಿಗೆ ಸ್ಪಂದಿಸಿದ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಯುಷ್ ವೈದ್ಯಾಧಿಕಾರಿ ಡಾ| ವೈ.ಜೆ. ಮನಿಯಾರ ಅವರನ್ನು ಕರೆದು ಸಮಸ್ಯೆಗಳ ಕುರಿತು ವಿಚಾರಿಸಿದರು.
ಸುಮಾರು ಏಳೆಂಟು ವರ್ಷಗಳಿಂದ ಆರೋಗ್ಯ ಕೇಂದ್ರದಲ್ಲಿ ಎಂಬಿಬಿಎಸ್ ವೈದ್ಯರಿಲ್ಲ ಎಂಬ ಸುದ್ದಿ ತಿಳಿದು ಶಾಸಕರು ಗರಂ ಆದರು. ನಂತರ ಮಾಹಿತಿ ಕಲೆಹಾಕಿದರು. ಕಾಯಂ ವೈದ್ಯರ ನೇಮಕ ಮಾಡಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ಕೊಟ್ಟು, ಸದ್ಯದಲ್ಲೇ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಿ ಗ್ರಾಮೀಣ ಜನರ ಆರೋಗ್ಯ ಸಮಸ್ಯೆ ಸೇರಿದಂತೆ ಎಲ್ಲ ಸಮಸ್ಯೆ ಬಗೆಹರಿಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.
ಗ್ರಾಮದ ಎಪಿಎಂಸಿ ಆವರಣದಲ್ಲಿ ವಾಸವಾಗಿರುವ 80ಕ್ಕೂ ಹೆಚ್ಚು ಸುಡುಗಾಡ ಸಿದ್ದರ ಕುಟುಂಬದವರು ಶಾಸಕರ ಎದುರು ತಮ್ಮ ಅಳಲು ತೋಡಿಕೊಂಡರು. ಮನವಿ ಆಲಿಸಿದ ಶಾಸಕ ಸಿದ್ದರಾಮಯ್ಯ ಅಲೆಮಾರಿ ಜನಾಂಗಕ್ಕೂ ನೆರವಿನ ಭರವಸೆ ನೀಡಿದರು. ಮುಖಂಡರಾದ ಸಣ್ಣಬೀರಪ್ಪ ಪೂಜಾರ, ನಾಗಪ್ಪ ಅಡಪಟ್ಟಿ, ಹನಮಂತ ಯಕ್ಕಪ್ಪನವರ, ಗ್ರಾಪಂ ಅಧ್ಯಕ್ಷ ಬಸು ಕಟ್ಟಿಕಾರ, ಸದಸ್ಯರಾದ ಶೇಖಪ್ಪ ಪವಾಡಿನಾಯ್ಕರ, ಲಕ್ಷ್ಮಣ್ಣ ದಾದನಟ್ಟಿ, ವೆಂಕಣ್ಣ ಹೊರಕೇರಿ, ಹನಮಂತ ನರಗುಂದ, ಮಾರುತಿ ತಳವಾರ, ಬೀರಪ್ಪ ಪೆಂಟಿ, ಶಿವಾನಂದ ಚೋಳನ್ನವರ, ರಾಮನಗೌಡ ದ್ಯಾವನಗೌಡ್ರ, ಯಮನಪ್ಪ ಪೂಜಾರ, ಶ್ರೀಕಾಂತ ಪೂಜಾರ, ಅಡಿವೆಪ್ಪ ಹಿರಗನ್ನವರ, ಬಸಪ್ಪ ಪೂಜಾರ, ಕರಿಗೌಡ ಮುಷ್ಟಿಗೇರಿ, ಹನಮಂತ ಹುಳ್ಳಿ, ಪುಂಡಲಿಕ ಪಾಟೀಲ ಇತರರು ಇದ್ದರು.’
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ