ನಾಗರಾಳದಲ್ಲಿ ಖಾಲಿ ಕೊಡಗಳ ಪ್ರದರ್ಶನ


Team Udayavani, Apr 14, 2019, 1:05 PM IST

bag-3
ಬೀಳಗಿ: ಗ್ರಾಮದಲ್ಲಿ ಕುಡಿವ ನೀರಿಗಾಗಿ ಪರದಾಡುವ ಪರಿಸ್ಥಿತಿ ಬಂದಿದೆ. ಕುಡಿವ ನೀರು ಒದಗಿಸುವಲ್ಲಿಯೂ ತಾರತಮ್ಯ ಮಾಡಲಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಕುಡಿವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ತಾಲೂಕಿನ ನಾಗರಾಳ ಗ್ರಾಮಸ್ಥರು ಶನಿವಾರ ಸ್ಥಳೀಯ ಗ್ರಾಪಂ ಕಚೇರಿ ಎದುರು ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.
ಗ್ರಾಪಂ ಕಾರ್ಯಾಲಯ ಮುಂದೆ ಜಮಾಯಿಸಿದ ನೂರಾರು ಜನರು ಗ್ರಾಪಂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕುಡಿವ ನೀರು ಸರಬರಾಜಿಗೆ ಗ್ರಾಮದ ಒಂದು ಭಾಗದಲ್ಲಿ 5 ಇಂಚಿನ ಕೊಳವೆಮಾರ್ಗ ಮಾಡಲಾಗಿದೆ.
ಇದೇ ಗ್ರಾಮದ ಇನ್ನೊಂದು ಪ್ರದೇಶದಲ್ಲಿ ಕೇವಲ 2 ಇಂಚಿನ ಕೊಳವೆಮಾರ್ಗ ಅಳವಡಿಸಿದ್ದಾರೆ. ಐದಿಂಚಿನ ಕೊಳವೆ
ಮಾರ್ಗದ ಮೂಲಕ ಸಮರ್ಪಕ ನೀರು ಸರಬರಾಜಾಗುತ್ತಿದೆ. ಆದರೆ, ಎರಡಂಚಿನ ಕೊಳವೆ ಮಾರ್ಗ ಚಿಕ್ಕದಾಗಿದ್ದರಿಂದ ನೀರು ಸರಿಯಾಗಿ ಹರಿದು ಬರುತ್ತಿಲ್ಲ. ಗ್ರಾಮದ ಒಂದು ಪ್ರದೇಶದಲ್ಲಿ ಎರಡು ಇಂಚಿನ ಕೊಳವೆ ಮಾರ್ಗ ಮಾಡಿರುವುದರ ಹಿಂದೆ ದುರುದ್ದೇಶ ಅಡಗಿದೆ. ಗ್ರಾಮದಲ್ಲಿ ಕುಡಿವ ನೀರಲ್ಲಿಯೂ ರಾಜಕೀಯವಿದೆ ಎಂದು ಸಾರ್ವಜನಿಕರು ಗಂಭೀರ ಆರೋಪ ಮಾಡಿದರು. ಕುಡಿವ ನೀರಲ್ಲೂ ತಾರತಮ್ಯ ಮಾಡುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ ಗ್ರಾಮಸ್ಥರು, ವ್ಯವಸ್ಥೆಯ ವಿರುದ್ಧ ಕಿಡಿಕಾರಿದರು. ನೀರಿನ ವಿಷಯದಲ್ಲೂ ರಾಜಕಾರಣ ಬೆರೆಸುವುದು ಎಷ್ಟು ಸರಿ? ತಾರತಮ್ಯ ಮಾಡುತ್ತಿರುವ
ಕ್ರಮ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 ನೀರು ಕೊಡುವುದು ಅದು ಎರಡು ದಿನಕ್ಕೊಮ್ಮೆ. ಸಣ್ಣಕೊಳವೆ ಮಾರ್ಗದಲ್ಲಿ ನೀರು ಬಿಡುತ್ತಿರುವುದರಿಂದ ಸಮರ್ಪಕವಾಗಿ
ಬರುತ್ತಿಲ್ಲ. ಸರಕಾರ ಕುಡಿವ ನೀರಿಗಾಗಿ ಸಾಕಷ್ಟು ಅನುದಾನ ನೀಡುತ್ತದೆ. ಆದರೆ, ಇಲ್ಲಿ ನೀರಿನ ಸಮಸ್ಯೆ ಇನ್ನು ಬಗೆಹರಿದಂತಿಲ್ಲ. ಈ ಕುರಿತು ಈಗಾಗಲೇ ಗ್ರಾಪಂ ಪಿಡಿಒ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.
ಊರಿನ ಜಾತ್ರೆ, ಉತ್ಸವದಲ್ಲಂತೂ ನೀರಿಗಾಗಿ ಪಡುತ್ತಿರುವ ಗೋಳು ದೇವರಿಗೆ ಪ್ರೀತಿ. ಕುಡಿವ ನೀರಿನ ತಾರತಮ್ಯ ತೊಲಗಬೇಕು. ಗ್ರಾಮದ ಸಮಸ್ತ ಜನರಿಗೂ ಸಮರ್ಪಕ ಕುಡಿಯುವ ನೀರು ಸರಬರಾಜು ಮಾಡಬೇಕು. ಇಲ್ಲದಿದ್ದರೆ
ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ದಾನಪ್ಪ ಮುಂಡಗನೂರ, ಶ್ರೀಶೈಲ ಸೀಪರಮಟ್ಟಿ, ವೀರಣ್ಣ ಮುಂಡಗನೂರ, ಪಡಿಯಪ್ಪ ಸೀಪರಮಟ್ಟಿ, ಪಡಿಯಪ್ಪ
ಬಾಡಗಂಡಿ, ಪ್ರಶಾಂತ ಕುಂಬಾರ, ನಾಗವ್ವ ಕರಿಗಾರ, ಶ್ರೀದೇವಿ ಮುಂಡಗನೂರ, ಲಕ್ಕವ್ವ ಸೀಪರಮಟ್ಟಿ, ಗೌರವ್ವ ತೆಕ್ಕೆಣ್ಣವರ, ಶಾಂಯವ್ವ ಸೀಪರಮಟ್ಟಿ, ಮಲ್ಲವ್ವ ಕರಬಾಣಿ, ಬಾಳವ್ವ ಕೆಳಗಿನಮನಿ ಸೇರಿದಂತೆ ಅನೇಕ ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.  ಕೆಲ ಕುಟುಂಬಗಳಿಗೆ ನೀರು ಸರಿಯಾಗಿ ತಲುಪುತ್ತಿಲ್ಲ. ಗ್ರಾಮದ ಎಲ್ಲ ಕಡೆಗೆ ಸ್ಥಗಿತಗೊಳಿಸಿ ಈ ಭಾಗಕ್ಕೆ ನೀರು ಬಿಟ್ಟಾಗ ಮಾತ್ರ ಅವರಿಗೆ ನೀರು ಸಿಗುತ್ತವೆ. ನೂತನ ಕೊಳವೆ ಮಾರ್ಗ ಅಳವಡಿಸುವುದು ಅಗತ್ಯವಿದೆ. ಇದೀಗ ತಾತ್ಕಾಲಿಕ ನೀರು ಸರಬರಾಜಿಗೆ ಕ್ರಮ ಕೈಗೊಳ್ಳಲಾಗಿದೆ.
  ಎಂ.ಎನ್‌.ಬೋರಡ್ಡಿ, ಪಿಡಿಒ, ಗ್ರಾಪಂ ನಾಗರಾಳ

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.