![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
ವಿನಾಶಕಾಲೇ ವಿಪರೀತ ಬುದ್ಧಿ: ಯತ್ನಾಳ
Team Udayavani, May 13, 2019, 12:34 PM IST
![bag-2](https://www.udayavani.com/wp-content/uploads/2019/05/bag-2-5-620x328.jpg)
ಬನಹಟ್ಟಿ: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ ಸರ್ವಾಧಿಕಾರ ಧೋರಣೆ ತೋರುತ್ತಿರುವುದು ಇಂದು ನಿನ್ನೆಯದಲ್ಲ. ರಾಜ್ಯವನ್ನೇ ಕೊಳ್ಳೆ ಹೊಡೆದು ಅಕ್ರಮ ಆಸ್ತಿ ಮಾಡುವ ಮೂಲಕ ರಾಜ್ಯದಲ್ಲಿ ದುರಹಂಕಾರದಿಂದ ಮೆರೆಯುತ್ತಿದ್ದಾರೆ. ಸದ್ಯ ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ, ಶಾಸಕ ಬಸನಗೌಡ ಯತ್ನಾಳ ಡಿಕೆಶಿ ವಿರುದ್ಧ ಟಾಂಗ್ ಕೊಟ್ಟರು.
ಶನಿವಾರ ರಾತ್ರಿ ನಗರದಲ್ಲಿ ಸಿದ್ಧಸಿರಿ ಮಾರುಕಟ್ಟೆ ಉದ್ಘಾಟನೆ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದೀಪ ಆರುವ ಮುನ್ನ ಎಣ್ಣೆಯಿಲ್ಲದೆ ಹೇಗೆ ದೊಡ್ಡದಾಗಿ ಉರಿಯುತ್ತದೆಯೋ. ಸದ್ಯದಲ್ಲಿಯೇ ಕಾಂಗ್ರೆಸ್ ಅಧೋಗತಿಯತ್ತ ಸಾಗಿ, ಅಧಿಕಾರ ಕಳೆದುಕೊಳ್ಳುವ ಎಲ್ಲ ಲಕ್ಷಣಗಳನ್ನೂ ಅರಿತಿರುವ ಡಿಕೆಶಿ ಹತಾಶೆ ಭಾವನೆಯಲ್ಲಿ ಏನೇಲ್ಲ ಹೇಳಿಕೆ ನೀಡುತ್ತಿದ್ದಾರೆಂದು ಯತ್ನಾಳ ಹೇಳಿದರು.
ಈ ಭೂಮಿಯಲ್ಲಿ ನಿಜಾಮ, ಸುಲ್ತಾನರೇ ಮಣ್ಣು ಮುಕ್ಕಿ ಹೋಗಿದ್ದಾರೆ. ಅಹ: ಭಾವನೆಯಿಂದ ನಡೆಯುತ್ತಿರುವ ಇಂಥವರಿಗೆ ಸದ್ಯವೇ ಕೊನೆಗಾಲವಿದೆ ಎಂದರು. ರಾಜ್ಯದಲ್ಲಿ ಮೈತ್ರಿ ಸರ್ಕಾರದಿಂದ ಬೃಹತ್ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರರು ಕಮಿಶನ್ ಹಾವಳಿಯಿಂದ ಕೆಲಸವನ್ನೇ ಪಡೆಯುತ್ತಿಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿರುವಾಗ ಸರ್ಕಾರ ನಡೆಸುತ್ತಿರುವ ಅಪವಿತ್ರ ಮೈತ್ರಿ ಸರ್ಕಾರ ಕಮಿಷನ್ ಎಂಬ ಭೂತದ ಸುಳಿಯಲ್ಲಿ ಗುತ್ತಿಗೆದಾರರ ಮೇಲೆ ಗದಾಪ್ರಹಾರ ನಡೆಸುತ್ತಿದ್ದಾರೆಂದು ಯತ್ನಾಳ ಆರೋಪಿಸಿದರು.
ಜನರ ಸೇವೆಗೆ ಮಾರುಕಟ್ಟೆ: ರಬಕವಿ-ಬನಹಟ್ಟಿ ತಾಲೂಕಿನ ಜನತೆಗೆ ಅಗ್ಗದ ದರದಲ್ಲಿ ಗುಣಮಟ್ಟದ ವಸ್ತುಗಳು ದೊರಕುವ ಮೂಲಕ ಹಾಗು ಕಲಬೆರಕೆ ರಹಿತವಾಗಿ ಸಾವಯವ ವಸ್ತುಗಳ ಬಳಕೆಯಿಂದ ದೀರ್ಘಾಯುಷ್ಯದ ದೃಷ್ಟಿಯಿಂದ ಮಾರುಕಟ್ಟೆಯನ್ನು ನಿರ್ಮಿಸಲು ಸನ್ನದ್ದರಾಗಿದ್ದೇವೆ ಎಂದು ಯತ್ನಾಳ ಹೇಳಿದರು.
ಶಾಸಕ ಸಿದ್ದು ಸವದಿ ಸಿದ್ಧಸಿರಿ ಮಾರುಕಟ್ಟೆಯನ್ನು ಉದ್ಘಾಟಿಸಿದರು. ಹಿರೇಮಠದ ಶರಣಬಸವ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು. ಮಲ್ಲಿಕಾರ್ಜುನ ಬಾಣಕಾರ, ನಿರಾಣಿ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಸಂಗಮೇಶ ನಿರಾಣಿ, ಬಸವರಾಜ ದಲಾಲ, ಭೀಮಶಿ ಮಗದುಮ್, ಶೇಖರ ಕೊಟ್ರಶೆಟ್ಟಿ, ರಾಜು ಅಂಬಲಿ, ಶಿವಾನಂದ ಗಾಯಕವಾಡ, ಸುರೇಶ ಅಕ್ಕಿವಾಟ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.