ಕಾರ್ಖಾನೆ ಮಾಲೀಕರ ತಾರತಮ್ಯ-ಆಕ್ರೋಶ


Team Udayavani, Nov 20, 2019, 12:38 PM IST

bk-tdy-02

ಜಮಖಂಡಿ: ಜಿಲ್ಲೆಯ ಎಲ್ಲ ಸಕ್ಕರೆ ಕಾರಖಾನೆಗಳ ಮಾಲೀಕರು ಎಫ್‌ಆರ್‌ಪಿ ಆಧಾರದ ಮೇಲೆ ಕಬ್ಬಿಗೆ ದರ ನೀಡುವಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಿದ್ದು, ರೈತರಲ್ಲಿ ಆಕ್ರೋಶ ಭಾವನೆಗಳು ಹೆಚ್ಚಾಗುತ್ತಿವೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತ ಕಾಂಬಳೆ ಹೇಳಿದರು.

ನಗರದ ಮಿನಿ ವಿಧಾನಸೌಧ ಕಚೇರಿ ಎದುರು ಮಂಗಳವಾರ ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ತಾಲೂಕು ಕಬ್ಬು ಬೆಳೆಗಾರರ ಸಂಘ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜಿಲ್ಲೆಯ ಕಾರಖಾನೆ ಮಾಲೀಕರು ಎಫ್‌ಆರ್‌ಪಿ ದರ ನಿಗದಿ ಮಾಡಿ ಒಂದು ಟನ್‌ ಕಬ್ಬಿಗೆ ಎಚ್‌ಎನ್‌ಟಿ ಎಂದು 700 ಕಡಿತಗೊಳಿಸಿ ರೈತರಿಗೆ ಕೇವಲ 2300 ರಿಂದ 2500 ರೂ. ನೀಡುವುದಕ್ಕೆ ರೈತ ಸಂಘ ಒಪ್ಪಿಗೆ ಸೂಚಿಸಿಲ್ಲ. ಕನಿಷ್ಠ ಟನ್‌ ಕಬ್ಬಿಗೆ 3500 ದರ ನಿಗದಿಗೊಳಿಸಿ ರೈತರ ಖಾತೆಗೆ ನೇರವಾಗಿ ಜಮೆ ಮಾಡಬೇಕೆಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಎಸ್‌ಎಪಿ ಕಮೀಟಿ ರಚನೆಯಾಗಬೇಕು. ಎಸ್‌ ಎಪಿ ಕಾಯ್ದೆ ಪ್ರಕಾರ ಸಕ್ಕರೆ ಕಾರಖಾನೆಯಲ್ಲಿ ಉತ್ಪಾದನೆಗೊಳ್ಳುವ ಉಪಉತ್ಪನ್ನಗಳ ಲಾಭದಲ್ಲಿ ಶೇ. 70 ರೈತರಿಗೆ ಮತ್ತು ಶೇ. 30 ಆದಾಯ ಲಭಿಸಬೇಕು. ಎಸ್‌ಎಪಿ ಕಾಯ್ದೆ ರೈತರಿಗೆ ಲಭ್ಯವಿರುವ ಎಲ್ಲ ಸೌಲಭ್ಯಗಳನ್ನು ಕಾರಖಾನೆ ನೀಡಬೇಕು. ರೈತರು ಹೋರಾಟ ಮಾಡಿ ಹಕ್ಕುಗಳನ್ನು ಪಡೆಯುವ ಬದಲಾಗಿ, ಕಾಯ್ದೆಯಲ್ಲಿರುವ ಸೌಲಭ್ಯಗಳನ್ನು ರೈತರಿಗೆ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕಾಧ್ಯಕ್ಷ ಕಲ್ಲಪ್ಪ ಬಿರಾದಾರ, ಬಾಬು ಹಸರಡ್ಡಿ, ರಾಜು ನದಾಫ, ಈಶ್ವರಯ್ಯಪೂಜಾರಿ, ಸಿದ್ದು ಬನಜನವರ, ಸಿದ್ದು ಉಳ್ಳಾಗಡ್ಡಿ, ಶಿವಲಿಂಗಪ್ಪ ತುಬಚಿ, ಕಲ್ಲಪ್ಪ ಬಳಗಾರ, ಬಸು ಮಲೋಡಿ, ಅವಧೂತ ಒಡೆಯರ, ಮಾಯಪ್ಪ ತರಾದಿ, ಭೀಮಸಿ ಬೆಳಗಲಿ, ಕಾಡಪ್ಪ ದೇಸಾಯಿ, ಶ್ರೀಶೈಲ ಭೂಮಾರ, ಶಿವಾನಂದ ಮಲೋಡಿ ಪಾಲ್ಗೊಂಡಿದ್ದರು. ನಗರದ ಎ.ಜಿ.ದೇಸಾಯಿ ವೃತ್ತದಲ್ಲಿ ರೈತ ಸಂಘದಿಂದ ಪ್ತತಿಭಟನೆ ನಡೆದು ಮಿನಿ ವಿಧಾನಸೌಧ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಯಿತು. ಬಳಿಕ ರೈತರು ತಹಶೀಲ್ದಾರ್‌ ಸಂಜಯ ಇಂಗಳೆ ಅವರಿಗೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.