ವಾರದೊಳಗೆ ಬೀಳಗಿ ಕೆರೆಗೆ ನೀರು

•ಜು.27ರಿಂದ ಕಾಲುವೆಗೆ ನೀರು ಬೀಡಲು ಸೂಚನೆ •60 ದಿನದಲ್ಲಿ ಕೆರೆ ಪೂರ್ತಿ

Team Udayavani, Jul 23, 2019, 9:56 AM IST

bk-tdy-2

ಬೀಳಗಿ: ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಸೋಮವಾರ ನೀರಾವರಿ ಇಲಾಖಾಧಿಕಾರಿಗಳ ಸಭೆ ನಡೆಯಿತು.

ಬೀಳಗಿ: ನಗರದ ಕೆರೆ ತುಂಬುವ ಕೊಳವೆ ಮಾರ್ಗದಲ್ಲಿ ಕೆಲವಡೆ ಸೋರಿಕೆ ಕಂಡು ಬಂದಿದೆ. ಈಗಾಗಲೆ ಕೊಳವೆ ಮಾರ್ಗ ಸೋರಿಕೆಯ ರಿಪೇರಿ ಕಾಮಗಾರಿ ಭರದಿಂದ ಸಾಗಿದ್ದು, ಒಂದು ವಾರದಲ್ಲಿ ಬೀಳಗಿ ನಗರದ ಕೆರೆ ತುಂಬುವ ಕೆಲಸ ಆರಂಭವಾಗಲಿದೆ ಎಂದು ಸಣ್ಣ ನೀರಾವರಿ ಇಲಾಖೆ ಎಇಇ ಎಚ್.ಡಿ. ಆಲೂರ ಭರವಸೆ ನಿಡಿದರು.

ಶಾಸ್ವತ ನೀರಾವರಿ ಯೋಜನೆಗೆ ಹಾಗೂ ತಾಲೂಕಿನ ವಿವಿಧ ಕೆರೆ ತುಂಬಲು ಆಗ್ರಹಿಸಿ ಸ್ಥಳೀಯ ರೈತರು ಇತ್ತೀಚೆಗೆ ಪ್ರತಿಭಟಿಸುವ ಮೂಲಕ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಕಚೇರಿಯಲ್ಲಿ ಸೋಮವಾರ ಕರೆಯಲಾಗಿದ್ದ ನೀರಾವರಿಗೆ ಸಂಬಂಧಿಸಿದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ತಾಲೂಕಿನ ಸೊನ್ನ ಗ್ರಾಮದ ಬಳಿ ಕೃಷ್ಣಾ ನದಿಯಿಂದ ಕೆರೆಗೆ ನೀರು ತುಂಬುವ ಯೋಜನೆ ಇದಾಗಿದೆ. 2011-12ನೇ ಸಾಲಿನಲ್ಲಿ ಯೋಜನೆ ಆರಂಭವಾಗಿದ್ದು, ಅಂದಾಜು 1.80 ಕೋಟಿ ರೂ. ವೆಚ್ಚ ತಗುಲಿದೆ. ಜಾಕವೆಲ್, ಪಂಪ್‌, ಮೋಟಾರ್‌ ಹಾಗೂ ವಿದ್ಯುತ್‌ ಸರಬರಾಜು ಸೇರಿದಂತೆ ನೀರು ಸರಬರಾಜಿಗೆ ಬೇಕಾದ ಎಲ್ಲ ಅಗತ್ಯ ಕೆಲಸಗಳು ಈಗಾಗಲೇ ಪೂರ್ಣಗೊಂಡಿವೆ. ಒಂದು ವಾರದೊಳಗೆ ಕೆರೆಯ ಅಂಗಳಕ್ಕೆ ನೀರು ಬಿಡಲಾಗುವುದು. 400 ಎಂಎಂ ವ್ಯಾಸದ ಕೊಳವೆ ಮಾರ್ಗ ಇದ್ದು, ಪ್ರತಿ ಸೆಕೆಂಡ್‌ಗೆ 4 ಕ್ಯೂಸೆಕ್‌ ನೀರು ಹರಿದು ಬರಲಿದೆ. ಒಟ್ಟು 60 ದಿನದಲ್ಲಿ ಕೆರೆ ಪೂರ್ತಿಯಾಗಿ ತುಂಬಲಿದೆ ಎಂದರು.

ಕೆಬಿಜೆಎನ್‌ಎಲ್ ಎಇ ನವೀನ ಮಾತನಾಡಿ, ಹೆರಕಲ್ ಉತ್ತರ ಕಾಲುವೆ ವ್ಯಾಪ್ತಿಗೆ 3242 ಹೆಕ್ಟೇರ್‌ ಭೂಮಿಯಿದೆ. ಇದರಲ್ಲಿ ಜಿಎಲ್ಬಿಸಿ ಕಾಲುವೆ ವ್ಯಾಪ್ತಿಗೆ 1710 ಹೆಕ್ಟೇರ್‌ ಜಮೀನು ಒಳಪಡಲಿದೆ. ಜಾಕ್‌ವೆಲ್, ಪೈಪ್‌ಲೈನ್‌, ವಿತರಣಾ ತೊಟ್ಟಿ ಕಾಮಗಾರಿ ಪೂರ್ತಿಯಾಗಿಲ್ಲ. ಎರಡು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು. ಕಾಲುವೆ ನಿರ್ಮಾಣಕ್ಕೆ ರೈತರ ಸಹಕಾರ ಬೇಕಿದೆ. ಹೆರಕಲ್ ಉತ್ತರ ಕಾಲುವೆಯಿಂದ ತಾಲೂಕಿನ ಜಾನಮಟ್ಟಿ ಕೆರೆ ತುಂಬಲು ಸಾಧ್ಯವಿದೆ. ನೀರು ದುರ್ಬಳಕೆಯಾಗದಂತೆ ಈ ಕುರಿತು ರೈತರ ಸಭೆ ಕರೆದು ಸೂಕ್ತ ತಿಳಿವಳಿಕೆ ನೀಡುವ ಕೆಲಸ ನಡೆಯಬೇಕಿದೆ. ಕೆಬಿಜೆಎನ್‌ಎಲ್ ನೀರಾವರಿ ಸಲಹಾ ಸಮಿತಿ ಜು.27ರಿಂದ ಕಾಲುವೆಗೆ ನೀರು ಬಿಡಲು ಸೂಚಿಸಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್‌ ಉದಯ ಕುಂಬಾರ ಮಾತನಾಡಿ, ತಾಲೂಕಿನ ಸುನಗ, ಜಾನಮಟ್ಟಿ ಕೆರೆ ತುಂಬುವ ಕುರಿತು ಜು.24ರಂದು ಬೆಳಗ್ಗೆ 10ಕ್ಕೆ ತಾಲೂಕಿನ ಸುನಗ ಗ್ರಾಮದ ದೈತಪ್ಪನ ಗುಡಿಯಲ್ಲಿ ರೈತರ ಸಭೆ ಕರೆಯಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಬೇಕು ಎಂದು ಮನವಿ ಮಾಡಿದರು.

ಮುಖಂಡ ಪ್ರಕಾಶ ಅಂತರಗೊಂಡ ಹಾಗೂ ವಿ.ಜಿ. ರೇವಡಿಗಾರ ಮಾತನಾಡಿ, ರೈತರ ಬೇಡಿಕೆಗೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿರುವ ಹಿನ್ನೆಲೆಯಲ್ಲಿ 23ರಂದು ಪಟ್ಟಣದಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆ ಹಿಂಪಡೆಯಲಾಗಿದೆ ಎಂದರು. ಸಣ್ಣ ನೀರಾವರಿ ಇಲಾಖೆಯ ಎಇ ಎಸ್‌.ಎಂ. ಬಾಟಿ, ಕಸಾಪ ಅಧ್ಯಕ್ಷ ಕಿರಣ ಬಾಳಾಗೋಳ, ಶಿವಾನಂದ ಹಿರೇಮಠ, ರಮೇಶ ಬಗಲಿ ಇತರರಿದ್ದರು.

ಟಾಪ್ ನ್ಯೂಸ್

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.