ಆರು ತಿಂಗಳ ಬೆಳೆ : ಬದನೆಯಿಂದ ಲಕ್ಷಾಂತರ ಲಾಭ ಮಾಡಿಕೊಂಡ ರೈತ ಮಲ್ಲಿಕಾರ್ಜುನ

ಗ್ಯಾಲನ್ ತಳಿಯ ಬದನೆ ಮುಂಬೈ, ಪುಣೆ, ಗೋವಾ ಮಾರುಕಟ್ಟೆ

Team Udayavani, Sep 28, 2022, 6:20 PM IST

ಆರು ತಿಂಗಳ ಬೆಳೆ : ಬದನೆಯಿಂದ ಲಕ್ಷಾಂತರ ಲಾಭ ಮಾಡಿಕೊಂಡ ರೈತ ಮಲ್ಲಿಕಾರ್ಜುನ

ರಬಕವಿ-ಬನಹಟ್ಟಿ: ಕೃಷಿಯನ್ನೇ ತಮ್ಮ ಜೀವನದ ಅವಿಭಾಜ್ಯ ಅಂಗವಾಗಿಸಿಕೊಂಡು ಅದನ್ನೇ ಪ್ರತಿನಿತ್ಯ ತಮ್ಮ ಕುಟುಂಬದೊಂದಿಗೆ ಮುಂದುವರೆಸಿಕೊಂಡು ಕಲ್ಲು ಗುಡ್ಡಗಳ ಭೂಮಿಯನ್ನು ಹದ ಮಾಡಿ ಈ ಭಾಗದಲ್ಲಿ ಹೊಸತನವನ್ನು ಅಳವಡಿಸಿಕೊಂಡು ಬೆಳೆಯನ್ನು ಬೆಳೆದು ಲಕ್ಷಾಂತರೂಗಳ ಲಾಭಗಳಿಸಬಹುದು ಎಂಬುದನ್ನು ರಬಕವಿ-ಬನಹಟ್ಟಿ ತಾಲ್ಲೂಕಿನ ನಾವಲಗಿಯ ಮಲ್ಲಿಕಾರ್ಜುನ ಹನಮಂತ ಜನವಾಡ ತೋರಿಸಿಕೊಟ್ಟಿದ್ದಾರೆ.

ಮಲ್ಲಿಕಾರ್ಜುನ ಕಲಿತಿದ್ದು ಎಸ್.ಎಸ್.ಎಲ್.ಸಿ ಆದರೆ ಸಾಧನೆ ಮಾತ್ರ ಮುಗಿಲೆತ್ತರದು. ಕೇವಲ 1 ಎಕರೆ ಜಾಗದಲ್ಲಿ ಗ್ಯಾಲನ್ ತಳಿಯ ಬದನೆಕಾಯಿಗಳನ್ನು ಬೆಳೆದು ಆರು ತಿಂಗಳ ಅವಧಿಯಲ್ಲಿ ಲಕ್ಷಾಂತರ ರೂ.ಲಾಭವನ್ನು ಮಾಡಿಕೊಂಡ ರೈತ ಮಲ್ಲಿಕಾರ್ಜುನ ಜನವಾಡ ಇತರೆ ರೈತರಿಗೆ ಮಾದರಿಯಾಗಿದ್ದಾರೆ.

ಬೆಳೆ : 1 ಎಕರೆ ಜಮೀನಿನಲ್ಲಿ ಮೊದಲು ತಿಪ್ಪೆಗೊಬ್ಬರ, ಸರಕಾರಿ ಗೊಬ್ಬರ ಬೇವಿನ ಹಿಂಡಿ ಸೇರಿದಂತೆ ಇತರೆ ಗೊಬ್ಬರಗಳನ್ನು ಹಾಕಿ ಬೆಡ್ ಮಾಡಿಕೊಂಡು ಸಾಲಿನಿಂದ ಸಾಲಿಗೆ 7 ಫೂಟ ಅಂತರ ಗಿಡದಿಂದ ಗಿಡಕ್ಕೆ ೩ಫೂಟಗೆ ಒಂದು ಸಸಿಯಂತೆ ಸಮೀಪದ ಜಗದಾಳ ಗ್ರಾಮದ ಪ್ರವೀರಾಮ ಅಗ್ರೊ ಎಜಿನ್ಸಿಯಿಂದ ಗ್ಯಾಲನ್ ತಳಿಯ ಸಸಿಗಳನ್ನು ಪಡೆದು ಅವರ ಮಾರ್ಗದರ್ಶದಲ್ಲಿ ೩೦೦೦ ಸಸಿಗಳನ್ನು ನಾಟಿ ಮಾಡಿದ್ದಾರೆ.

ಹನಿ ನೀರಾವರಿ ಮೂಲಕ ನೀರು ಪೂರೈಸಲಾಗಿದ್ದು, ಇದಕ್ಕೆ ಬರುವ ರೋಗಗಳಿಗೆ ತಕ್ಕಂತೆ ಕೆಲವು ಸಿಂಪರಣೆಗಳನ್ನು ಮಾಡಲಾಗಿದೆ. ಮೌತ ಹುಳ ಆಗದಂತೆ ತಡೆಯಲು ಸೋಲಾರ ಲ್ಯಾಂಪಗಳನ್ನು ಅಳವಡಿಸಲಾಗಿದೆ. ಇದು ಒಟ್ಟು 6 ತಿಂಗಳ ಬೆಳೆಯಾಗಿದ್ದು, ನಾಟಿ ಮಾಡಿದ 60 ದಿನಗಳಲ್ಲಿ ಬದನೆಕಾಯಿಗಳು ಬರಲಾರಂಭಿಸಿದರೆ ಮತ್ತೆ ಮುಂದೆ ಎರಡುವರೆ ತಿಂಗಳುಗಳ ಕಾಲ ಸತತವಾಗಿ ಬದನೆಕಾಯಿಗಳು ಬರುತ್ತವೆ. ಅಂದಾಜು 15 ರಿಂದ 20 ಟನ್ ಇಳುವರಿ ಬಂದಿದೆ. 25 ರಿಂದ 30 ರೂ ಬೆಲೆ ಬಂದಿದೆ. ಈಗಾಗಲೇ 4 ರಿಂದ 5 ಲಕ್ಷ ಆದಾಯ ಬಂದಿದೆ. ಇನ್ನೂ 5 ಲಕ್ಷದವರೆಗೆ ಲಾಭದ ನಿರೀಕ್ಷೆಯಲ್ಲಿದ್ದೇವೆ. ಆರಂಭದಿಂದ ಬದನೆಕಾಯಿ ಬೆಳೆ ಬರುವವರೆಗೆ ಅಂದಾಜು ರೂ. ಎರಡುವರೆ ಲಕ್ಷದವರೆಗೆ ಖರ್ಚು ಮಾಡಿದ್ದು, ಆರು ತಿಂಗಳ ಅವಧಿಯಲ್ಲಿ ಎಲ್ಲ ರೀತಿಯ ಖರ್ಚು ವೆಚ್ಚಗಳನ್ನು ತೆಗೆದು ಲಕ್ಷಾಂತರ ರೂ. ಲಾಭವನ್ನು ಮಾಡಿಕೊಳ್ಳಬಹುದಾಗಿದೆ ಎನ್ನುತ್ತಾರೆ ರೈತ ಮಲ್ಲಿಕಾರ್ಜುನ.

ಈ ಬದನೆಯನ್ನು ಬೆಳಗಾವಿಗೆ ತಮ್ಮದೆ ವಾಹನದ ಮೂಲಕ ಕಳಹಿಸುತ್ತಾರೆ. ನಂತರ ಅಲ್ಲಿಂದ ಈ ಗ್ಯಾಲನ್ ತಳಿಯ ಬದನೆ ಮಹಾರಾಷ್ಟ್ರದ ಪುಣೆ, ಮುಂಬೈ ಮತ್ತು ಗೋವಾ ರಾಜ್ಯಗಳಿಗೆ ತಲುಪುತ್ತದೆ. ಒಂದು ವಾರಕ್ಕೆ ನಾಲ್ಕು ದಿನಗಳ ಕಾಲ ಬದನೆಯನ್ನು ತೆಗೆಯುತ್ತಾರೆ. ಒಂದು ವಾರಕ್ಕೆ ಅಂದಾಜು ೩ ಟನ್ನಷ್ಟು ಕಟಿಂಗ್ ಆಗುತ್ತದೆ. ಯಾವುದೆ ಎಜೆಂಟ್‌ರುಗಳು ಇಲ್ಲದೆ ತಾವೇ ತಮ್ಮ ವಾಹನಗಳ ಮೂಲಕ ಬದನೆಗಳನ್ನು ನೇರವಾಗಿ ಮಾರುಕಟ್ಟೆಗೆ ತೆಗೆದುಕೊಂಡು ಹೋಗುತ್ತಾರೆ.

ಯಾವುದೆ ರೀತಿಯ ಕೃಷಿಯನ್ನು ಮಾಡಿದರೂ ಬೆಳೆಯ ಕುರಿತು ಸಂಪೂರ್ಣವಾಗಿ ಮಾಹಿತಿ ಪಡೆದುಕೊಂಡು, ಬೆಳೆದ ನಂತರ ಅದಕ್ಕೆ ಇರುವ ಮಾರುಕಟ್ಟೆಯ ಬಗ್ಗೆ ಪರಿಶೀಲಿಸಿ ಬೆಳೆಗಳನ್ನು ಬೆಳೆಯುತ್ತಾರೆ. ಅದೇ ರೀತಿಯಾಗಿ ಕೃಷಿಯಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತ ಕೃಷಿಯನ್ನು ಯಾವಾಗಲೂ ಲಾಭದಾಯಕ ಮಾಡಿಕೊಳ್ಳಬಹುದು ಎಂಬುದಕ್ಕೆ ಮಲ್ಲಿಕಾರ್ಜುನ ಜನವಾಡ ಸಾಕ್ಷಿ.

ಈಗಾಗಲೇ ಕ್ಯಾಪ್ಸಿಕಾಮ್, ಶುಂಠಿ, ಕಲ್ಲಂಗಡಿ ವ್ಯವಸಾದಿಂದಲೂ ಸಾಕಷ್ಟು ಲಾಭವನ್ನು ಮಾಡಿಕೊಂಡಿರುವ ಮಲ್ಲಿಕಾರ್ಜುನ ಮುಂದಿನ ದಿನಗಳಲ್ಲಿ ಇಲ್ಲಿಯೇ ಡ್ರ‍್ಯಾಗನ್ ಫ್ರುಟ್ ಮತ್ತು ಕಿವಿ ಹಣ್ಣುಗಳನ್ನು ಬೆಳೆಯುವ ಸಾಹಸಕ್ಕೆ ಕೈ ಹಾಕಿದ್ದಾರೆ. ಅದಕ್ಕೆ ಬೇಕಾದ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ. ಆರಂಭದಲ್ಲಿ ಪ್ರಯೋಗಾರ್ಥವಾಗಿ ಡ್ರ‍್ಯಾಗನ್ ಹಣ್ಣುಗಳ ಐವತ್ತು ಸಸಿಗಳನ್ನು ನಾಟಿ ಮಾಡಲಿದ್ದಾರೆ.

ಮಲ್ಲಿಕಾರ್ಜುನ ಜನವಾಡರ ತೋಟನಾವಲಗಿ ಗ್ರಾಮದ ಜಿಎಲ್ಬಿಸಿ ಕಾಲುವೆಯಿಂದ ಐದು ಕಿ.ಮೀ ದೂರದಲ್ಲಿದೆ. ಮಲ್ಲಿಕಾರ್ಜುನ ಅವರಿಗೆ ದಿನನಿತ್ಯ ಕೃಷಿ ಕುರಿತು ಚಿಂತನೆ. ಯಾವಾಗಲೂ ಹೊಸತನದ ತುಡಿತ. ಯುವ ಪೀಳಿಗೆ ಆಧುನಿಕತೆಯಿಂದಾಗಿ ಕೃಷಿಯನ್ನು ಕಡೆಗಣಿಸುತ್ತಿರುವ ಇಂದಿನ ಕಾಲದಲ್ಲಿ ಕೃಷಿಯನ್ನೇ ನಂಬಿ ಕೃಷಿಯಲ್ಲಿ ಹೊಸತನದ ಜೊತೆಗೆ ಬಾಳು ಬಂಗಾರವಾಗಿಸಿಕೊಂಡಿರುವ ಮಲ್ಲಿಕಾರ್ಜುನ ಜನವಾಡರ ಪ್ರಯತ್ನ ನಿಜಕ್ಕೂ ಮೆಚ್ಚುವಂತಹದು.

– ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.