ಅಕ್ಕ ಮಹಾದೇವಿ ಮಹಿಳಾ ವಿವಿಗೆ ಪ್ರಥಮ ರ್‍ಯಾಂಕ್‌ ಗಳಿಸಿ ಚಿನ್ನದ ಪಡೆದ ಕೃಷಿಕನ ಮಗಳು

ಅಕ್ಕ ಮಹಾದೇವಿ ಮಹಿಳಾ ವಿವಿಗೆ ಪ್ರಥಮ ರ್‍ಯಾಂಕ್‌ ಗಳಿಸಿದ ಅಶ್ವಿ‌ನಿ

Team Udayavani, Dec 3, 2020, 2:09 PM IST

bk-tdy-1

ಕಮತಗಿ: ಕಲಿಕೆಗೂ ಸೈ, ಕೃಷಿ ಚಟುವಟಿಕೆಗೂ ಸೈ ಎಣಿಸಿಕೊಂಡ ಹುನಗುಂದ ತಾಲೂಕಿನ ಯರಿಗೋನಾಳದ ಅಶ್ವಿ‌ನಿ ಬಾದವಾಡಗಿ ಈಗ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪ್ರಥಮ ರ್‍ಯಾಂಕ್‌ ಪಡೆಯುವ ಮೂಲಕ ‘ಚಿನ್ನದ ಹುಡುಗಿ’ಯಾಗಿ ಹೊರಹೊಮ್ಮಿದ್ದಾಳೆ.

ಪಟ್ಟಣದ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ವೈ.ಆರ್‌. ಪಾಟೀಲ ಗ್ರಾಮೀಣ ಶಿಕ್ಷಣ (ಬಿ.ಇಡಿ) ಕಾಲೇಜಿನ ಪ್ರಶಿಕ್ಷಣಾರ್ಥಿ ಆಗಿರುವ ಅಶ್ವಿ‌ನಿ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ 2019ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ 1300 ಅಂಕಗಳಿಗೆ 1200 ಅಂಕ ಪಡೆದು ಸಾಧನೆ ಮಾಡಿದ್ದಾಳೆ.

ಕಾಲೇಜಿಗೆ ನಿತ್ಯ ಹಾಜರಾಗಿ, ಎಲ್ಲ ಕ್ಲಾಸ್‌ ಗಳಲ್ಲಿ ತೊಡಗಿ, ಉಪನ್ಯಾಸಕರು ನೀಡುವ ಮಾಹಿತಿ ಚಾಚೂ ತಪ್ಪದೇ ಬರೆದು, ಶ್ರದ್ಧೆಯಿಂದ ಅಧ್ಯಯನ ಮಾಡಿದ್ದರಿಂದಲೇ ಪ್ರಥಮ ರ್‍ಯಾಂಕ್‌ ಗಳಿಸಲು ಸಾಧ್ಯವಾಗಿದೆ ಎನ್ನುತ್ತಾಳೆ ಅಶ್ವಿ‌ನಿ. ತಂದೆ ಸಂಗಪ್ಪ, ತಾಯಿ ಶಿವಮ್ಮ ತಮ್ಮೂರಿನಲ್ಲಿ ಒಂದು ಎಕರೆ ನೀರಾವರಿ, ಒಂದು ಎಕರೆ ಒಣಬೇಸಾಯಿ ಭೂಮಿಯಲ್ಲಿ ಬಿತ್ತನೆ ಮಾಡುತ್ತ ಬರುವ ಆದಾಯದಲ್ಲಿ ಜೀವನ ಮುಂದಿರುವ ಅಶ್ವಿ‌ನಿ, ರವಿವಾರ ಕೃಷಿ ಚಟುವಟಿಕೆಗಳಲ್ಲಿ ಭಾಗಿಯಾಗುವ ಮೂಲಕ ತಂದೆ-ತಾಯಿಗಳಿಗೆ ಆಸರೆಯಾಗಿದ್ದಾಳೆ ಎನ್ನುವ ತಂದೆ ಸಂಗಪ್ಪ ಮಗಳ ಈ ಸಾಧನೆಗೆ ಖುಷಿ ಪಟ್ಟಿದ್ದಾರೆ.

ಇದನ್ನೂ ಓದಿ: ರೈತರ ಪ್ರತಿಭಟನೆ; ಪ್ರತಿಷ್ಠಿತ ಪದ್ಮ ಪ್ರಶಸ್ತಿ ಮರಳಿಸಿದ ಪಂಜಾಬ್ ಮಾಜಿ ಸಿಎಂ ಬಾದಲ್

ನಾಗೂರಿನಲ್ಲಿ ಪ್ರೌಢಶಿಕ್ಷಣ ಹಾಗೂ ಪಿಯುಸಿ, ಹುನಗುಂದ ಬಿಎಂಎಸ್‌ಆರ್‌ ವಸ್ತ್ರದ ಪದವಿ ಕಾಲೇಜಿನಲ್ಲಿ ಡಿಗ್ರಿ ಮುಗಿಸಿ ಕಮತಗಿ ವೈ.ಆರ್‌. ಪಾಟೀಲ ಗ್ರಾಮೀಣ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿಬಿ.ಇಡಿ ಅಭ್ಯಾಸ ಮಾಡಿ ಸಾಧನೆ ಮಾಡಿ ಎಂಎಸ್‌ಸಿ ಮಾಡುವ ಕನಸು ಹೊಂದಿದ್ದಾಳೆ.

ಅಶ್ವಿ‌ನಿ ಕಾಲೇಜಿಗೆ ತಪ್ಪದೇ ಹಾಜರಾಗಿ, ಶ್ರದ್ಧೆಯಿಂದ ಅಧ್ಯಯನ ಮಾಡುತ್ತಿದ್ದಳು. ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಈ ಹಿಂದೆ ಅನೇಕ ರ್‍ಯಾಂಕ್‌ ಪಡೆದಿದ್ದು, ಅಶ್ವಿ‌ನಿ ಮೂಲಕ ಪ್ರಥಮ ರ್‍ಯಾಂಕ್‌ ಲಭಿಸಿದ್ದು ಸಂತಸ ತಂದಿದೆ.  –ಡಾ| ಎಸ್‌.ಎಂ. ರಡ್ಡಿ, ಪ್ರಾಚಾರ್ಯರು, ವೈಆರ್‌ಪಿ ಮಹಿಳಾ ಬಿಎಡ್‌ ಕಾಲೇಜ್‌, ಕಮತಗಿ

ಸಾಲ, ಸೂಲ ಮಾಡಿ ಮಗಳನ್ನು ಓದಿಸಿದ್ದೇವೆ. ನಿರಂತರ ಅದರಲ್ಲೂ ನಸುಕಿನ ಜಾವ ಓದುತ್ತಿದ್ದ ಅಶ್ವಿ‌ನಿ ರವಿವಾರ ಬಂದರೆ ಹೊಲಕ್ಕೆ ಬಂದು ಕೃಷಿ ಚಟುವಟಿಕೆಯಲ್ಲಿ ತೊಡಗುತ್ತಾಳೆ. ಮುಂದೇ ಅವಳ ಆಶಯದಂತೆಯೇ ಓದಿಸುತ್ತೇವೆ.  –ಸಂಗಪ್ಪ ಬಾದವಾಡಗಿ, ಅಶ್ವಿ‌ನಿ ತಂದೆ, ಎರೆಗೋನಾಳ

ನಮ್ಮ ಮಹಾವಿದ್ಯಾಯದ ನುರಿತ ಉಪನ್ಯಾಸಕರಿಂದಪ್ರಶಿಕ್ಷಣಾರ್ಥಿಗಳಿಗೆ ಗುಣಮಟ್ಟದಬೋಧನೆ ದೊರೆಯುತ್ತಿರುವುದರಿಂದ ನಮ್ಮ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ಪ್ರತಿ ವರ್ಷ ಎರಡ್ಮೂರು ರ್‍ಯಾಂಕ್‌ ಪಡೆಯುತ್ತಾರೆ. ಈ ವರ್ಷ 6 ರ್‍ಯಾಂಕ್‌ ಸಿಕ್ಕಿರುವುದು ಸಂಸ್ಥೆಯ ಕೀರ್ತಿ ಹೆಚ್ಚಿದೆ.  –ಶ್ರೀ ಹುಚ್ಚೇಶ್ವರ ಸ್ವಾಮೀಜಿ, ಅಧ್ಯಕ್ಷರು, ಹುಚ್ಚೇಶ್ವರ ವಿದ್ಯಾವರ್ಧಕ ಸಂಘ, ಕಮತಗಿ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.