ರೈತರ ಬಗ್ಗೆ ಜಿಲ್ಲೆಯ ಅಧಿಕಾರಿಗಳ ನಿರ್ಲಕ್ಷ್ಯ : ರೈತ ಮುಖಂಡ ಮುತ್ತಪ್ಪ ಕೋಮಾರ


Team Udayavani, Nov 30, 2021, 6:50 PM IST

ರೈತರ ಬಗ್ಗೆ ಜಿಲ್ಲೆಯ ಅಧಿಕಾರಿಗಳ ನಿರ್ಲಕ್ಷ್ಯ : ರೈತ ಮುಖಂಡ ಮುತ್ತಪ್ಪ ಕೋಮಾರ

ರಬಕವಿ-ಬನಹಟ್ಟಿ: ಜಿಲ್ಲೆಯ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಅಧಿಕಾರಿಗಳು ರೈತರ ಬಗ್ಗೆ ನಿರ್ಲಕ್ಷ್ಯವನ್ನು ತೋರುತ್ತಿದ್ದಾರೆ. ರೈತರ ಕಬ್ಬಿನ ಬಿಲ್ ಪಾವತಿಸದೆ ನಾಲ್ಕು ವರ್ಷಗಳಾದರೂ ಯಾವುದೆ ರೀತಿಯ ಪರಿಹಾರ ಕೊಡಿಸಲಿಕ್ಕೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ. ರೈತರು ಪ್ರತಿಭಟನೆ ನಡೆಸುತ್ತಿರುವ ಮಾಹಿತಿ ಜಿಲ್ಲೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಇದ್ದರೂ ಸಂಜೆಯಾದರೂ ಕೂಡಾ ಯಾವುದೆ ಅಧಿಕಾರಿಗಳು ರೈತರಿಗೆ ಸಮರ್ಪಕವಾದ ಉತ್ತರ ನೀಡದೆ ಇರುವುದು ಇವರ ಬೇಜವಾಬ್ದಾರಿಯನ್ನು ತೋರಿಸುತ್ತದೆ ಎಂದು ರೈತ ಮುಖಂಡ ಮುತ್ತಪ್ಪ ಕೋಮಾರ ತಿಳಿಸಿದರು.

ಅವರು ಮಂಗಳವಾರ ರಬಕವಿ-ಬನಹಟ್ಟಿ ತಹಶೀಲ್ದಾರ್ ಕಾರ್ಯಾಲಯದ ಮುಂಭಾಗದಲ್ಲಿ ಹೋರಾಟನಿರತ ರೈತರನ್ನು ಉದ್ದೇಶಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಮತ್ತೋರ್ವ ರೈತ ಮುಖಂಡ ಗಂಗಾಧರ ಮೇಟಿ ಮಾತನಾಡಿ, ನಾಲ್ಕು ವರ್ಷಗಳಿಂದ ತೇರದಾಳದ ಸಾವರಿನ್ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರು ಬಿಲ್ಗಾಗಿ ಹೋರಾಟ ಮಾಡುತ್ತಿದ್ದಾರೆ. ಅಂದಾಜು 900 ರೈತರ ರೂ22 ಕೋಟಿಯಷ್ಟು ಹಣ ಬರಬೇಕಾಗಿದೆ ಎಂದರು.

ಬಿಲ್ ಪಾವತಿಸುವ ವಿಷಯ ನ್ಯಾಯಾಲಯದಲ್ಲಿದೆ ಮತ್ತು ಸಕ್ಕರೆ ಕಾರ್ಖಾನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಆದರೂ ಎರಡು ದಿನಗಳಿಂದ ಜನರು ಸಕ್ಕರೆ ಕಾರ್ಖಾನೆಯನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಇದು ಕಾನೂನಿಗೆ ವಿರೋಧವಾಗಿದೆ. ಯಾವುದೆ ಪರವಾಣಿಗೆ ಇಲ್ಲದೆ ಸಕ್ಕರೆ ಕಾರ್ಖಾನೆಯನ್ನು ಸ್ವಚ್ಛಗೊಳಿಸುತ್ತಿರುವ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮವನ್ನು ಅಧಿಕಾರಿಗಳು ತೆಗೆದುಕೊಳ್ಳಬೇಕು.  ಸಕ್ಕರೆ ಕಾರ್ಖಾನೆಯನ್ನು ಸ್ವಚ್ಛಗೊಳಿಸುತ್ತಿರವವರ ಮಾಹಿತಿ ಅಧಿಕಾರಿಗಳಿಗೆ ಇದ್ದರೂ ಯಾವುದೆ ಕ್ರಮ ತೆಗೆದುಕೊಳ್ಳುತ್ತಿಲ್ಲ. ಈ ಕುರಿತು ರೈತರಿಗೆ ಮಾಹಿತಿಯನ್ನು ನೀಡಿಲ್ಲ ಎಂದರು.

ಮತ್ತೋರ್ವ ಮುಖಂಡ ಶ್ರೀಕಾಂತ ಘೂಳನ್ನವರ ಮಾತನಾಡಿ, ಬಿಲ್ ಪಾವತಿಸುವಂತೆ ಈ ಭಾಗದ ರೈತರು ನಾಲ್ಕು ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. ಕಬ್ಬು ಪೂರೈಸಿದ ರೈತರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಬಂದು ಸಮರ್ಪಕ ಉತ್ತರ ನೀಡುವವರೆಗೂ ಅನಿರ್ಧಿಷ್ಠಾವಧಿ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ್ ಎಸ್.ಬಿ.ಕಾಂಬಳೆ ಉತ್ತರ ನೀಡಿದರೂ ರೈತರು ಕೇಳದೆ ಪ್ರತಿಭಟನೆಯನ್ನು ಮುಂದುವರೆಸಿದರು.

ಪ್ರತಿಭಟನೆಯಲ್ಲಿ ಹೊನ್ನಪ್ಪ ಬಿರಡಿ, ಭುಜಬಲಿ ಕೆಂಗಾಲಿ, ಶಿಪಪ್ಪ ಹೋಟಕಾರ, ಮಗೆಪ್ಪ ತೇರದಾಳ, ಅರವಿಂದ ದಳವಾಯಿ, ಬಸು ಮಲೋಡಿ, ಮಾಯಪ್ಪ ತುರಾದಿ ಸೇರಿದಂತೆ ರಬಕವಿ ಬನಹಟ್ಟಿ ತಾಲ್ಲೂಕಿನ ರೈತರು ಇದ್ದರು. ಸ್ಥಳದಲ್ಲಿ ಬನಹಟ್ಟಿ ವೃತ್ತದ ಸಿಪಿಐ ಜೆ.ಕರುಣೇಶಗೌಡ, ಬನಹಟ್ಟಿ ಪಿಎಸ್‌ಐ ಸುರೇಶ ಮಂಟೂರ ಸೇರಿದಂತೆ ಮಹಾಲಿಂಗಪುರ, ತೇರದಾಳ, ಸಾವಳಗಿ ಪಿಎಸ್‌ಐ ಇದ್ದರು.

ಟಾಪ್ ನ್ಯೂಸ್

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.