ಬಿತ್ತನೆ ಬೀಜಕ್ಕಾಗಿ ರೈತರಿಂದ ಪ್ರತಿಭಟನೆ-ಘೇರಾವ್
Team Udayavani, Jun 7, 2020, 10:38 AM IST
ಜಮಖಂಡಿ: ರೈತರಿಗೆ ಸರಿಯಾದ ಸಮಯಕ್ಕೆ ಬೀಜಗಳನ್ನು ವಿತರಿಸದ ಅಧಿಕಾರಿಗಳ ವಿರುದ್ಧ ತಾಲೂಕಿನ ರೈತರು ಪ್ರತಿಭಟನೆ ನಡೆಸಿ ಸಹಾಯಕ ಕೃಷಿ ನಿರ್ದೇಶಕರ ಮೇಲೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ರೈತ ಸಂಪರ್ಕ ಕೇಂದ್ರದಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದ ರೈತರು ಪ್ರತಿನಿತ್ಯ ಬೀಜ ಪಡೆಯಲು ರೈತ ಸಂಪರ್ಕ ಕೇಂದ್ರಕ್ಕೆ ಅಲೆದಾಡಿ ಸುಸ್ತಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಬೇಕಾದ ಬೀಜ ಕೇಳಿದರೆ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಮುಂಗಾರು ಬಿತ್ತನೆಗೆ ಸೂರ್ಯಕಾಂತಿ, ಉದ್ದು, ತೊಗರಿ, ಸೋಯಾಬಿನ್ ಬೀಜಗಳು ಅವಶ್ಯವಾಗಿದ್ದು, ಬೀಜ ಕೇಳಿದರೆ ನಮ್ಮಲ್ಲಿ ಸ್ಟಾಕ್ ಇರುವುದಿಲ್ಲ ಎಂದು ಜಾರಿಕೊಳ್ಳುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಪರ್ಕ ಕೇಂದ್ರದಲ್ಲಿ 5 ಕೆ.ಜಿ ಬೀಜಗಳು 380 ರೂ.ಗಳಿಗೆ ದೊರೆಯುತ್ತವೆ. ಅದೇ ಬೀಜಗಳು ಖಾಸಗಿ ವ್ಯಾಪಾರಸ್ಥರಲ್ಲಿ 1 ಸಾವಿರವರೆಗೆ ಲಭಿಸುತ್ತಿವೆ. ಅಧಿಕಾರಿಗಳು ಹಾಗೂ ಖಾಸಗಿ ವ್ಯಾಪಾರಿಗಳು ಸೇರಿಕೊಂಡು ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಈ ವೇಳೆ ಮಲ್ಲಪ್ಪ ಈಟ್ಟಿ, ನಿಂಗಣ್ಣಗೌಡ ಪಾಟೀಲ, ಮಾಯಪ್ಪ ಹುಣಸಿಕಟ್ಟಿ, ರಾಮಣ್ಣ ಚಿನಗುಂಡಿ, ಶಿವನಗೌಡ ಪಾಟೀಲ, ಹಣಮಂತ ಬಿರಾದಾರ, ರಮೇಶ ಧರಣೆ, ಬಾಳಪ್ಪ ಬಿರಾದರ, ಮುದ್ದುಗೌಡರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ