ಜಿಲ್ಲಾಧಿಕಾರಿ ಕಚೇರಿ ಎದುರು ರೈತರ ಪ್ರತಿಭಟನೆ
Team Udayavani, Aug 31, 2019, 10:39 AM IST
ಬಾಗಲಕೋಟೆ: ಸಾವರಿನ್ ಸಕ್ಕರೆ ಕಾರ್ಖಾನೆಯಿಂದ ಕಬ್ಬಿನ ಬಾಕಿ ಹಣ ಕೊಡಿಸುವಂತೆ ಒತ್ತಾಯಿಸಿ ರೈತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಬಾಗಲಕೋಟೆ: ಜಿಲ್ಲೆಯ ತೇರದಾಳ ಸಮೀಪದ ಸಾವರಿನ್ ಸಕ್ಕರೆ ಕಾರ್ಖಾನೆ ರೈತರ ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿದ್ದು, ಬಾಕಿ ಹಣ ಕೊಡಿಸುವಂತೆ ಒತ್ತಾಯಿಸಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಮದಬಾವಿ, ಮಾರಾಪುರ ಮುಂತಾದ ಗ್ರಾಮಗಳ ರೈತರು ಜಿಲ್ಲಾಡಳಿತ ಭವನ ಎದುರು ಕೆಲ ಹೊತ್ತು ಧರಣಿ ನಡೆಸಿ, ಕಬ್ಬಿನ ಬಾಕಿ ಹಣಕ್ಕಾಗಿ ಒತ್ತಾಯಿಸಿದರು.
ಸಾವರಿನ್ ಸಕ್ಕರೆ ಕಾರ್ಖಾನೆಗೆ ಕಳೆದ ಸಾಲಿನಲ್ಲಿ ಕಬ್ಬು ಪೂರೈಕೆ ಮಾಡಿದ್ದೇವೆ. ಕಾರ್ಖಾನೆಯಿಂದ ಚೆಕ್ ನೀಡಿದ್ದು, ಚೆಕ್ಗಳು ಬೌನ್ಸ್ ಆಗಿದೆ. ಬಾಕಿ ಹಣ ಕೊಡುವಂತೆ ಕಾರ್ಖಾನೆಗೆ ತೆರಳಿ ಕೇಳಿದರೆ ಹಣ ಕೊಡುತ್ತಿಲ್ಲ. ಕಳೆದ 9 ತಿಂಗಳಿಂದ ಬಾಕಿ ಹಣಕ್ಕಾಗಿ ಅಲೆದಾಡುತ್ತಿದ್ದೇವೆ. ಕೂಡಲೇ ಹಣ ಕೊಡಿಸಬೇಕು ಎಂದು ಆಗ್ರಹಿಸಿದರು.
ರೈತರ ಮನವಿ ಪಡೆದ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್, ಸಾವರಿನ್ ಸಕ್ಕರೆ ಕಾರ್ಖಾನೆಯಿಂದ ರೈತರಿಗೆ ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಾಕಿ ಹಣ ಕೊಡಿಸಲು ಕ್ರಮ ಕೈಗೊಳ್ಳಲಾಗಿದೆ. ಸಕ್ಕರೆ ಜಪ್ತಿ ಮಾಡಲು ಹೋದಾಗ, ಗೋಡಾವನ್ನಲ್ಲಿ ಸಕ್ಕರೆ ಇರಲಿಲ್ಲ. ಹೀಗಾಗಿ ಕಾರ್ಖಾನೆಯ ಸ್ಥಿರಾಸ್ಥಿ ಜಪ್ತಿ ಮಾಡಿ, ರೈತರ ಬಾಕಿ ಹಣ ಕೊಡಿಸಲಾಗುವುದು. ರೈತರು ಆತಂಕ ಪಡಬಾರದು ಎಂದು ತಿಳಿಸಿದರು.
ರೈತ ಪ್ರಮುಖರಾದ ಅಜೀತ ಹಾದಿಮನಿ, ಸುಭಾಸ, ಬಾಸು ನದಾಫ, ಹುಸೇನಸಾಬ ನದಾಫ, ಅಬ್ದುಲ್ ನದಾಫ, ಹನಮಂತ ಚಿಚಖಂಡಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’