ಹಬ್ಬಗಳು ಭಾರತೀಯ ಸಂಸ್ಕೃತಿಯ ಪ್ರತೀಕ
ಆಚಾರಗಳನ್ನು ನೆನಪಿಸುವ ಮತ್ತು ಮಕ್ಕಳಿಗೆ ಪರಿಚಯಿಸುವ ಕಾರ್ಯಕ್ರಮ
Team Udayavani, Jan 18, 2022, 4:40 PM IST
ಮಹಾಲಿಂಗಪುರ: ಹಬ್ಬಗಳು ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರ ಮತ್ತು ದೇಶಿಯ ಸೊಗಡಿನ ಐತಿಹಾಸಿಕ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿವೆ ಎಂದು ಕೆಎಲ್ಇ ಪಾಲಿಟೆಕ್ನಿಕ್ ಪ್ರಾಚಾರ್ಯ ಎಸ್.ಐ. ಕುಂದಗೋಳ ಹೇಳಿದರು.
ವಿವೇಕ ಜಯಂತಿ ಮತ್ತು ಮಕರಸಂಕ್ರಮಣ ಹಬ್ಬದ ನಿಮಿತ್ತ ಪಟ್ಟಣದ ಕೆಎಲ್ಇ ಸಂಸ್ಥೆಯ ಎಸ್ ಸಿಪಿ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಸಂಕ್ರಾಂತಿ ಸೊಗಡು-ವಿವೇಕ ಚಿಂತನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆಧುನೀಕರಣ, ಜಾಗತೀಕರಣ ಪರಿಣಾಮ ಇಂದು ನಮ್ಮ ಮೂಲ ಸಂಸ್ಕೃತಿ ಕಣ್ಮರೆಯಾಗುತ್ತಿರುವ ಸಂದರ್ಭದಲ್ಲಿ ಪ್ರಾಥಮಿಕ ಶಾಲೆಯ ಶಿಕ್ಷಕಿಯರು, ವಿದ್ಯಾರ್ಥಿಗಳು ಸಂಕ್ರಾಂತಿ ಸೊಗಡು-ವಿವೇಕ ಚಿಂತನೆ ಕಾರ್ಯಕ್ರಮದ ಮೂಲಕ ನಮ್ಮ ದೇಶ, ನಾಡಿನ ಸಂಸ್ಕೃತಿ, ಆಚಾರಗಳನ್ನು ನೆನಪಿಸುವ ಮತ್ತು ಮಕ್ಕಳಿಗೆ ಪರಿಚಯಿಸುವ ಕಾರ್ಯಕ್ರಮ ಮಾಡಿದ್ದು ಸ್ವಾಗತಾರ್ಹ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಥಮಿಕ ಶಾಲೆಯ ಮುಖ್ಯಗುರುಮಾತೆ ಆರ್.ಎ.ಬನ್ನೂರ ಮಾತನಾಡಿ, ಸಂಕ್ರಾಂತಿ ಮತ್ತು ವಿವೇಕಾಂದರ ಜಯಂತಿ ಎರಡು ಕಾರ್ಯಕ್ರಮಗಳನ್ನು ಒಟ್ಟಿಗೆ ಆಚರಿಸಲು ನಿರ್ಣಯಿಸಿ ಸಂಕ್ರಾಂತಿ ಸೊಗಡು-ವಿವೇಕ ಚಿಂತನೆ ಕಾರ್ಯಕ್ರಮದ ಮೂಲಕ ಮಕ್ಕಳಿಗೆ ನಮ್ಮ ಹಬ್ಬ ಹರಿದಿನಗಳ ಮಹತ್ವವನ್ನು ಅವರ ಚಟುವಟಿಕೆಗಳ ಮೂಲಕವೇ ಪರಿಸಲು ಪ್ರಯತ್ನಿಸಿದ್ದೇವೆ. ಈ ಅಪರೂಪದ ಕಾರ್ಯಕ್ರಮಕ್ಕೆ ನಮ್ಮ ಶಿಕ್ಷಕಿಯರ ಬಳಗದ ಶ್ರಮ ಮತ್ತು ಪಾಲಕರ ಸಹಕಾರ ಮುಖ್ಯವಾಗಿದೆ ಎಂದರು.
ಪತ್ರಕರ್ತ ಚಂದ್ರಶೇಖರ ಮೋರೆ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಮಕ್ಕಳಿಗೆ ವಿದ್ಯೆಯ ಜತೆಗೆ ಮೌಲ್ಯಾಧಾರಿತ ಹಾಗೂ ಸಂಸ್ಕಾರಯುತ ಶಿಕ್ಷಣ ನೀಡಬೇಕಾಗಿದ್ದು ಅಗತ್ಯವಾಗಿದೆ. ಮನುಷ್ಯ ಸಮಾಜದಲ್ಲಿ ಗೌರವಯುತ, ಸಂಸ್ಕಾರಸಹಿತ, ಕುಟುಂಬ ಮತ್ತು ಸಮಾಜಕ್ಕೆ ಹೊರೆಯಾಗದಂತೆ ಸ್ವಾವಲಂಬಿಯಾಗಿ ಬದುಕಲು ಕಲಿಸುವುದೇ ನಿಜವಾದ ಶಿಕ್ಷಣವಾಗಿದೆ ಎಂದರು.
ಗಮನ ಸೆಳೆದ ಮಕ್ಕಳ ಸ್ಪರ್ಧೆಗಳು: ಸಂಕ್ರಾಂತಿ ಸೊಗಡು-ವಿವೇಕ ಚಿಂತನೆ ಕಾರ್ಯಕ್ರಮದ ನಿಮಿತ್ತ 1ರಿಂದ 7ನೇ ತರಗತಿವರೆಗೂ ಎಲ್ಲ ಮಕ್ಕಳಿಗೂ ವಿವಿಧ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಥಾನಿಕ ಆಡಳಿತ ಮಂಡಳಿಯ ಸದಸ್ಯ ಬಿ.ಎ.ಬಂತಿ, ಪ್ರೌಢಶಾಲೆಯ ಪ್ರಭಾರಿ ಉಪಪ್ರಾಚಾರ್ಯ ಬಿ.ಎನ್.ಅರಕೇರಿ, ಶಿಕ್ಷಕಿಯರಾದ ಜೆ.ಎಸ್.ಹಿರೇಮಠ, ಕೆ.ಎಂ. ಹುನಗುಂದ, ಬಿ.ಎಸ್.ಜೇಡರ, ಎಸ್.ಎಸ್.ಹುಡೇದ, ಎನ್.ಪಿ. ಹೊಸಪೇಟಿ, ನೀಲಿ ಮೇಡಂ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ