ವಾಹನಕ್ಕಿಂತ ದಂಡವೇ ದುಬಾರಿ!


Team Udayavani, Sep 14, 2019, 10:41 AM IST

bk-tdy-1

ಬಾಗಲಕೋಟೆ: ವಾಹನ ದಾಖಲೆ ಪರಿಶೀಲಿಸುತ್ತಿರುವ ಸಂಚಾರಿ ಪೊಲೀಸರು.

ಬಾಗಲಕೋಟೆ: ರಸ್ತೆಗಿಳಿಯಲು ವಾಹನ ಸವಾರರು ಹೆದರುತ್ತಿದ್ದಾರೆ. ತಮ್ಮ ವಾಹನಕ್ಕಿಂತ ಪೊಲೀಸರು ಹಾಕುವ ದಂಡವೇ ದುಬಾರಿಯಾಗಿದೆ. ಮತ್ತೂಂದೆಡೆ ವಾಹನಗಳ ದಾಖಲೆ ಪತ್ರ ಸರಿಪಡಿಸಿಕೊಳ್ಳಲು ಸವಾರರು ಆರ್‌ಟಿಒ ಕಚೇರಿಗೆ ಮುಗಿ ಬಿದಿದ್ದಾರೆ.

ಹೌದು, ಕೇಂದ್ರ ಸರ್ಕಾರದ ಹೊಸದಾಗಿ ಜಾರಿಗೊಳಿಸಿದ ಮೋಟಾರು ವಾಹನ ಕಾಯಿದೆ, ಜನ ಸಾಮಾನ್ಯರಿಗೆ ತೀವ್ರ ಹೊರೆಯಾಗಿದೆ ಎಂಬ ಆರೋಪ ಪ್ರಭಲವಾಗಿದೆ. ಹೆಲ್ಮೆಟ್, ಸೀಟ್ ಬೆಲ್ಟ್, ವಿಮೆ, ವಾಹನ ಚಾಲನಾ ಪರವಾನಗಿ ಯಾವುದೇ ದಾಖಲೆ ಇಲ್ಲದಿದ್ದರೂ, ರಸ್ತೆಗಿಳಿಯುತ್ತಿದ್ದ ಜನರೀಗ, ಎಲ್ಲಾ ದಾಖಲೆ ಸರಿಪಡಿಸಿಕೊಳ್ಳಲು ಮುಂದಾಗಿದ್ದಾರೆ.

ಆರ್‌ಟಿಒ ಕಚೇರಿಗಳು ಫುಲ್: ಬಾಗಲಕೋಟೆ ಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಜಮಖಂಡಿಯಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಗಳಿವೆ. ಜಮಖಂಡಿ ಎಆರ್‌ಟಿಒ ಕಚೇರಿ ವ್ಯಾಪ್ತಿಯಲ್ಲಿ ಮುಧೋಳ ಮತ್ತು ಜಮಖಂಡಿ ತಾಲೂಕುಗಳಿದ್ದರೆ, ಬಾಗಲಕೋಟೆ ಆರ್‌ಟಿಒ ಕಚೇರಿ ವ್ಯಾಪ್ತಿಯಲ್ಲಿ ಬಾಗಲಕೋಟೆ, ಬಾದಾಮಿ, ಬೀಳಗಿ ಹಾಗೂ ಹುನಗುಂದ ತಾಲೂಕು ಒಳಗೊಂಡಿದೆ. ಒಟ್ಟು ಆರು ತಾಲೂಕಿನಲ್ಲಿ 3,44,073 ವಾಹನಗಳು ಜಿಲ್ಲೆಯಲ್ಲಿವೆ.

ವಿಮೆ, ಆರ್‌ಸಿ ಬುಕ್‌, ವಾಹನ ಚಾಲನೆ ಪರವಾನಗಿ ಇದ್ದರೂ, ಮಾಲಿನ್ಯ ಪ್ರಮಾಣ ಪತ್ರ ನೀಡುವ ಕೇಂದ್ರಗಳು ಒಟ್ಟು 11 ಇವೆ. ಆದರೆ, ಇವು ಬಾಗಲಕೋಟೆ ನಗರ-5, ಇಳಲ್ಲ-2, ಮುಧೋಳ-3, ಜಮಖಂಡಿ-3 ಇವೆ. ಬಾದಾಮಿ, ಬೀಳಗಿ, ಹುನಗುಂದದವರು ಮಾಲಿನ್ಯ ಪ್ರಮಾಣ ಪತ್ರ ಪಡೆಯಲು, ಬಾಗಲಕೋಟೆ ಇಲ್ಲವೇ ಮುಧೋಳಕ್ಕೆ ಹೋಗಬೇಕಾದ ಅನಿವಾರ್ಯತೆ ಇದೆ.

ಸ್ಥಳೀಯ ನಿಯಂತ್ರಣವಿಲ್ಲ: ಮಾಲಿನ್ಯ ನಿಯಂತ್ರಣ ಕೇಂದ್ರಳಿಗೆ ಸ್ಥಳೀಯ ಮಟ್ಟದಲ್ಲಿ ನಿಯಂತ್ರಣವಿಲ್ಲ. ಇವುಗಳಿಗೆ ಬೆಂಗಳೂರಿನ ಸಾರಿಗೆ ಇಲಾಖೆಯಲ್ಲಿಯೇ ಪರವಾನಗಿ ನೀಡುತ್ತಿದ್ದು, ಅವು ಅಧಿಕೃತ ಮತ್ತು ಸಮಂಜಸವಾಗಿ ನಡೆಯುತ್ತಿವೆಯೋ ಇಲ್ಲವೇ ಎಂಬುದನ್ನು ಪರಿಶೀಲಿಸಿ, ವರದಿ ನೀಡುವ ಅಧಿಕಾರ ಮಾತ್ರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಇದೆ. ಅಲ್ಲದೇ ಪ್ರತಿ ಆರು ತಿಂಗಳಿಗೊಮ್ಮೆ ಮಾಲಿನ್ಯ ಪ್ರಮಾಣ ಪತ್ರವನ್ನು ಪ್ರತಿಯೊಬ್ಬ ವಾಹನ ಮಾಲಿಕರು ಪಡೆಯಬೇಕಿದೆ. ಹೀಗಾಗಿ ಮಾಲಿನ್ಯ ಪ್ರಮಾಣ ಪತ್ರ ನೀಡುವ ಕೇಂದ್ರಗಳು ಪ್ರತಿ ತಾಲೂಕು, ಹೋಬಳಿ ಕೇಂದ್ರಗಳಲ್ಲೂ ಆರಂಭಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ.

ದಂಡಕ್ಕೆ ನಿತ್ಯ ಜಗಳ: ಹೊಸ ಮೋಟಾರು ಕಾಯಿದೆ ಅನ್ವಯ ಸಧ್ಯಕ್ಕೆ ಜಿಲ್ಲೆಯಲ್ಲಿ ಕುಡಿದು ವಾಹನ ಚಾಲನೆ ಮಾಡಿದರೆ ಮಾತ್ರ ದಂಡ ಹಾಕಲಾಗುತ್ತಿದೆ. ಕಾರುಗಳಿಗೆ ಸೀಟ ಬೆಲ್, ಬೈಕ್‌ ಸವಾರರು ಹೈಲ್ಮೆಟ್ ಹಾಕುವುದು ಕಡ್ಡಾಯ ಪರಿಶೀಲನೆ ನಡೆಸಲಾಗುತ್ತಿದೆ. ಉಳಿದಂತೆ ದಾಖಲೆಗಳು ಸರಿಯಾಗಿಲ್ಲದಿದ್ದರೆ, ಸೂಚನೆ ನೀಡಿ, ಬಿಟ್ಟು ಕಳುಹಿಸಲಾಗುತ್ತಿದೆ. ಮುಂದಿನ ವಾರದಿಂದ ಹೊಸ ದಂಡ ಪ್ರಯೋಗ ಕಡ್ಡಾಯವಾಗಿ ಜಾರಿಗೊಳಿಸಲು ಪೊಲೀಸ್‌ ಇಲಾಖೆ ಮುಂದಾಗಿದೆ.

ಹೊಸ ನಿಯಮ ಜಾರಿಗೊಂಡ ಬಳಿಕ ಜಿಲ್ಲೆಯಲ್ಲಿ ಈ ವರೆಗೆ 9 ಪ್ರಕರಣ ದಾಖಲಾಗಿದ್ದು, ಒಟ್ಟು 3,00,986 ದಂಡ ಮತ್ತು ತೆರಿಗೆ ವಸೂಲಿ ಮಾಡಲಾಗಿದೆ. ಜಮಖಂಡಿ ಎಆರ್‌ಟಿಒ ಕಚೇರಿ ವ್ಯಾಪ್ತಿಯಲ್ಲಿ 3 ಪ್ರಕರಣ ದಾಖಲಿಸಿ, 1,57,185 ರೂ. ದಂಡ ಹಾಗೂ ಬಾಗಲಕೋಟೆ ಆರ್‌ಟಿಒ ಕಚೇರಿ ವ್ಯಾಪ್ತಿಯಡಿ ಒಟ್ಟು 6 ಕೇಸ್‌ ದಾಖಲಿಸಿ, 1,43,801 ರೂ. ದಂಡ ಹಾಕಲಾಗಿದೆ. ಇವು ತೆರಿಗೆ ಮತ್ತು ಕುಡಿದ ವಾಹನ ಚಾಲನೆ ಮಾಡಿದ್ದಕ್ಕೆ ದಂಡ ವಿಧಿಸಲಾಗಿದೆ.

ಸರ್ಕಾರದ ಯಾವುದೇ ನೀತಿ- ನಿಯಮಗಳು ಸಾಮಾನ್ಯ ಜನರಿಗೆ ಹೊರೆಯಾಗಬಾರದು. ಆದರೆ, ಹೊಸ ನಿಯಮದಿಂದ ಜನರು ಬೈಕ್‌ ಮೂಲಕ ರಸ್ತೆಯಲ್ಲಿ ತಿರುಗಾಡುವುದೇ ದುಸ್ಥರವಾಗಿದೆ. ಗ್ರಾಮೀಣ ಭಾಗದ ಜನರಿಗೆ ಸರ್ಕಾರದ ನೀತಿ-ನಿಯಮ ಗೊತ್ತಿರುವುದಿಲ್ಲ. ಅವರಿಗೆ ತಿಳವಳಿಕೆ ಹೇಳುವ ಜತೆಗೆ ದಂಡದ ಬದಲು, ಸ್ಥಳದಲ್ಲೇ ದಾಖಲೆ ಮಾಡಿಸಿಕೊಡುವ ಪದ್ಧತಿ ಜಾರಿಗೊಳಿಸಬೇಕು. ಈಗ ಹಾಕುತ್ತಿರುವ ದಂಡದಲ್ಲಿ ಹೊಸ ವಾಹನಗಳೇ ಬರುತ್ತವೆ. ವಾಹನಕ್ಕಿಂತ ದಂಡದ ಮೊತ್ತ ಹೆಚ್ಚಾಗಿದೆ. ಹೀಗಾದರು ಜನರು ಹೇಗೆ ಬದುಕಬೇಕು. ಸಾಮಾನ್ಯ ಜನರು ಬೈಕ್‌ ಬಳಸುವುದು ಕೆಲಸಕ್ಕೆ ಹೋಗಲು. ಅದಕ್ಕೂ ಕನ್ನ ಹಾಕುವ ಕೆಲಸ ಮಾಡಬೇಡಿ.•ರುದ್ರಪ್ಪ ನೀಲಪ್ಪ ಮೆಣಸಗಿ, ಮಲ್ಲಾಪುರ ಗ್ರಾಮಸ್ಥ

 

•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.