ಶಬ್ದ ಮಾಲಿನ್ಯ ಉಂಟಾದ್ರೆ ದಂಡ!


Team Udayavani, Nov 17, 2019, 11:20 AM IST

bk-tdy-4

ಮುಧೋಳ: ಟ್ರ್ಯಾಕ್ಟರ್‌ ಹಾಗೂ ಟಂಟಂಗಳಲ್ಲಿ ಕರ್ಕಶ ಶಬ್ದದಿಂದ ಜನರಿಗೆ ಆಗುವ ತೊಂದರೆ ತಪ್ಪಿಸಲು ತಾಲೂಕಿನ ಗ್ರಾಮ ಪಂಚಾಯತಗಳು ದಂಡ ವಿಧಿಸಿ ವಾಹನವನ್ನು ವಶಕ್ಕೆ ಪಡೆಯುವ ನಿಯಮ ಜಾರಿಗೆ ತಂದಿವೆ. ಕಬ್ಬು ತುಂಬಿದ ಟ್ರ್ಯಾಕ್ಟರ್‌ನಲ್ಲಿ ಜೋರಾಗಿ ಹಾಡು ಹಾಕಿಕೊಂಡು ಹೊರಟರೆ ಗ್ರಾಮಸ್ಥರಿಗೆ ಇನ್ನಿಲ್ಲದ ಕಿರಿಕಿರಿ ಉಂಟಾಗುತ್ತದೆ.

ಹಾಡಿನ ಸದ್ದಿನಿಂದಾಗಿ ಹಿಂದುಗಡೆ ಬರುವ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತದೆ. ಈ ಸಮಸ್ಯೆ ಮನವರಿಕೆ ಮಾಡಿಕೊಂಡಿರುವ ಇಂಗಳಗಿ ಗ್ರಾಮಸ್ಥರು ಟ್ರ್ಯಾಕ್ಟರ್‌ ಹಾಗೂ ಟಂಟಂಗಳು ಗ್ರಾಮದಲ್ಲಿ ಚಲಿಸುವಾಗ ಹಾಡು ಹಚ್ಚಿಕೊಂಡು ಸಾಗಬಾರದು ಎಂಬ ಸ್ಥಳೀಯ ನಿಯಮ ಮಾಡಿಕೊಂಡಿದ್ದಾರೆ. ಒಂದು ವೇಳೆ ಗ್ರಾಮದ ಹಿರಿಯರು ಮಾಡಿರುವ ನಿಯಮಮುರಿದರೆ ಅಂತಹ ವಾಹನಗಳ ಚಾಲಕ ಅಥವಾ ಮಾಲೀಕರಿಗೆ 5 ಸಾವಿರ ರೂ. ದಂಡ ಹಾಗೂ ಎರಡು ದಿನ ವಾಹನವನ್ನು ವಶಕ್ಕೆ ಪಡೆಯಲಾಗುತ್ತಿದೆ.

ಸರ್ವಾನುಮತದ ನಿಯಮ: ಕಳೆದ ಮೂರ್‍ನಾಲ್ಕು ತಿಂಗಳುಗಳ ಹಿಂದೆ ಗ್ರಾಮದಲ್ಲಿ ಟ್ರ್ಯಾಕ್ಟರ್‌ ಹಾಗೂ ಟಂಟಂಗಳು ಅನಗತ್ಯವಾಗಿ ಜೋರಾಗಿ ಹಾಡನ್ನು ಹಾಕಿಕೊಂಡು ಓಡಿಸಲಾಗುತ್ತಿದ್ದು. ಈ ರೀತಿ ಮಾಡುವುದರಿಂದ ಗ್ರಾಮದಲ್ಲಿ ಶಬ್ದ ಮಾಲಿನ್ಯದೊಂದಿಗೆ ಜನರಿಗೆ ಇನ್ನಿಲ್ಲದಂತೆ ಕಿರಿಕಿರಿಯುಂಟಾಗಿತ್ತು. ಈ ಹಿನ್ನೆಲೆ ಗ್ರಾಮಸ್ಥರೆಲ್ಲ ಸೇರಿ ಅನಗತ್ಯವಾಗಿ ಹಾಡು ಹಾಕಿಕೊಂಡು ಸುತ್ತಾಡುವ ವಾಹನದ ಮಾಲೀಕರು ಅಥವಾ ಚಾಲಕರಿಗೆ ದಂಡ ವಿಧಿಸುವ ನಿಯಮ ಜಾರಿಗೆ ತಂದಿದ್ದಾರೆ.

ಗ್ರಾಮದ ಅಭಿವೃದ್ಧಿಗೆ ಬಳಕೆ: ಇಂಗಳಗಿ ಗ್ರಾಪಂನಿಂದ ಇದೂವರೆಗೂ ಒಟ್ಟು ನಾಲ್ಕು ವಾಹಗಳಿಗೆ ದಂಡ ವಿಧಿಸಿದ್ದು, ದಂಡದಿಂದ ಸಂಗ್ರಹವಾಗುವ ಹಣವನ್ನು ಗ್ರಾಮದ ದೇವಸ್ಥಾನ ಜೀರ್ಣೋದ್ಧಾರ, ರಸ್ತೆ ದುರಸ್ತಿ ಸೇರಿದಂತೆ ಗ್ರಾಮದ ವಿವಿಧ ಮೂಲಭೂತ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುತ್ತಾರೆ.

ಹಲಗಲಿಯಲ್ಲಿಯೂ ಇದೆ ಎಚ್ಚರಿಕೆ ಫಲಕ: ಟ್ರ್ಯಾಕ್ಟರ್‌ ಹಾಗೂ ಟಂಟಂಗಳಲ್ಲಿ ಹಾಡು ಹಾಕಬಾರದು ಎಂಬ ನಿಯಮವನ್ನು ತಾಲೂಕಿನ ಹಲಗಲಿಯಲ್ಲಿಯೂ ಅಳವಡಿಸಲಾಗಿದೆ. ಗ್ರಾಮ ಪ್ರವೇಶಿಸುವ ಹದ್ದಿಯಲ್ಲಿ ಎಚ್ಚರಿಕೆ ಫಲಕ ಅಳವಡಿಸಿದ್ದು, ಜೋರಾಗಿ ಹಾಡು ಹಾಕಬಾರದು ಎಂದು ಸೂಚಿಸಲಾಗಿದೆ.

ಗ್ರಾಮಸ್ಥರ-ಹಿರಿಯರು ಹಾಗೂ ಪಂಚಾಯತ್‌ ಸದಸ್ಯರ ಸರ್ವಾನುಮತದಿಂದ ಅನಗತ್ಯವಾಗಿ ಓಡಾಡುವ ವಾಹನಗಳಿಗೆ ದಂಡ ವಿಧಿಸುವ ನಿಯಮವನ್ನು ಜಾರಿಗೆ ತರಲಾಗಿದೆ. ಇದರಿಂದ ಗ್ರಾಮದಲ್ಲಿ ಶಬ್ದ ಮಾಲಿನ್ಯದ ಜತೆಯಲ್ಲಿ ಅನಗತ್ಯ ಕಿರಿಕಿರಿ ತಪ್ಪಿದಂತಾಗಿದೆ. ಆ ಹಣವನ್ನು ಗ್ರಾಮದ ಅಭಿವೃದ್ಧಿ ಕಾರ್ಯಕ್ಕೆ ಬಳಸಲಾಗುತ್ತಿದೆ.  –ಕಲ್ಮೇಶ ಚಿನ್ನಣ್ಣವರ, ಗ್ರಾಮ ಪಂಚಾಯತ ಸದಸ್ಯ ಇಂಗಳಗಿ

 

-ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.