ಸಾಳಗುಂದಿಗೆ ಮೊದಲ ಬಾರಿ ಬಂತು ಬಸ್‌!

•ಚುನಾವಣೆಗೊಮ್ಮೆ ಮತ ಯಂತ್ರದೊಂದಿಗೆ ಮಾತ್ರ ಬರುತ್ತಿತ್ತು ಬಸ್‌•ಗ್ರಾಮಸ್ಥರು-ವಿದ್ಯಾರ್ಥಿಗಳು ಈಗ ಫುಲ್ ಖುಷ್‌

Team Udayavani, Jul 10, 2019, 9:49 AM IST

bk-tdy-1..

ಬಾಗಲಕೋಟೆ: ಸಾಳಗುಂದಿ ಗ್ರಾಮಕ್ಕೆ ಬಂದ ಸಾರಿಗೆ ಸಂಸ್ಥೆ ಬಸ್‌ನ್ನು ಗ್ರಾಮಸ್ಥರು ಸ್ವಾಗತಿಸಿದರು.

ಬಾಗಲಕೋಟೆ: ನೀವು ನಂಬಲೇಬೇಕು. ಈ ಊರಿಗೆ ಸ್ವಾತಂತ್ರ್ಯ ಬಳಿಕ ಇದೇ ಮೊದಲ ಬಾರಿ ಸಾರಿಗೆ ಸಂಸ್ಥೆಯ ಬಸ್‌ ಬಂದಿದೆ.

ತಾಲೂಕಿನ ಸಾಳಗುಂದಿ ಗ್ರಾಮಕ್ಕೆ ಮಂಗಳವಾರ ಬಸ್‌ ಬಂದಿದ್ದು, ಗ್ರಾಮಸ್ಥರು, ಶಾಲಾ ವಿದ್ಯಾರ್ಥಿಗಳು ತೀವ್ರ ಹರ್ಷಗೊಂಡಿದ್ದಾರೆ.

ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಸಮಯದಲ್ಲಿ ಮಾತ್ರ ಚುನಾವಣೆ ಸಿಬ್ಬಂದಿಯನ್ನು ಹೊತ್ತು ಬರುವ ಬಸ್‌ ನೋಡಿದ್ದು ಬಿಟ್ಟರೆ ಈ ಊರಿಗೆ ಬಸ್‌ ಬರುತ್ತಿರಲಿಲ್ಲ. ಬಾಗಲಕೋಟೆಯಿಂದ ಅನಗವಾಡಿ ಕ್ರಾಸ್‌, ಹೊನ್ನರಳ್ಳಿ, ಸೋರಕೊಪ್ಪ, ನೆಕ್ಕರಗುಂದಿ, ಸಿಂದಗಿ, ಕಂದಾಪುರ, ಯಳ್ಳಗುತ್ತಿ, ಯಂಕಂಚಿ ಗ್ರಾಮಗಳಿಗೆ ಬಸ್‌ ಸೌಲಭ್ಯವಿದ್ದರೂ, ಸಾಳಗುಂದಿ ಗ್ರಾಮಕ್ಕೆ ಮಾತ್ರ ಬಸ್‌ ಸೌಲಭ್ಯ ಇರಲಿಲ್ಲ.

ನಗರದಿಂದ ರಸ್ತೆ ಮಾರ್ಗವಾಗಿ ಈ ಗ್ರಾಮಕ್ಕೆ ಬರಲು 25 ಕಿ.ಮೀ. ಕ್ರಮಿಸಬೇಕು. ರಸ್ತೆ ಮಾರ್ಗ ಬಿಟ್ಟರೆ, ಮುಖ್ಯ ಮಾರ್ಗವೇ ಜಲಮಾರ್ಗ. ಸಾಳಗುಂದಿ ಗ್ರಾಮಸ್ಥರು ಬಾಗಲಕೋಟೆ ನಗರಕ್ಕೆ ಬರಬೇಕಾದರೆ ಘಟಪ್ರಭಾ ನದಿ ದಾಟಿಕೊಂಡು ಬರಬೇಕಿತ್ತು. ಈ ಗ್ರಾಮದ ಜನರು ಇಲ್ಲಿಯವರಿಗೆ ಜಲಮಾರ್ಗ ಮೂಲಕವೇ ನಗರಕ್ಕೆ ಬರುತ್ತಿದ್ದರು. ಒಂದು ವೇಳೆ ಗಾಳಿ, ಮಳೆ ಬಂದು ಬೋಟ್, ಬಂದಾದರೆ ನಗರಕ್ಕೆ ಬಂದ ಜನರಿಗೆ ಮರಳಿ ಗ್ರಾಮಕ್ಕೆ ಹೋಗಲು ವಾಹನ ಸೇರಿದಂತೆ ಇತರೆ ಸೌಕರ್ಯ ಇರಲಿಲ್ಲ.

ಇಲ್ಲಿನ ಗ್ರಾಮಸ್ಥರು ಪ್ರತಿದಿನ ದುಡಿಯಲು, ತರಕಾರಿ ಮಾರಲು, ಹಾಲು ಮೊಸರು ಮಾರಾಟ ಮಾಡಲು ನಗರಕ್ಕೆ ಬರಲು ಬೋಟ್ ಆಸರೆಯಾಗಿತ್ತು. ಮಕ್ಕಳು ಜಲಮಾರ್ಗ ಮುಖಾಂತರವೇ ಬರಬೇಕಿತ್ತು. ಬೋಟ್ ಸೌಕರ್ಯ ಸ್ಥಗಿತಗೊಂಡಾಗ ಅವರೆಲ್ಲ ನಗರಕ್ಕೆ ಬರಲು ಪ್ರಯಾಸ ಪಡಬೇಕಿತ್ತು.

ಇದೀಗ ಗ್ರಾಮಕ್ಕೆ ಬಸ್‌ ಬಂದಿರುವುದರಿಂದ ಹಿನ್ನೀರಿನಲ್ಲಿ ಬೋಟ್‌ನಲ್ಲಿ ಕುಳಿತು, ಜೀವ ಕೈಯಲ್ಲಿ ಹಿಡಿದು ಸಾಗುವ ತಾಪತ್ರಯ ತಪ್ಪಿದಂತಾಗಿದೆ.

ಮನವಿಗೆ ಸ್ಪಂದನೆ: ಸಾಳಗುಂದಿ ಗ್ರಾಮಸ್ಥರು ನವನಗರದಲ್ಲಿರುವ ವಿಭಾಗೀಯ ನಿಯಂತ್ರಣಾಧಿಕಾರಿ ನಿತಿನ್‌ ಹೆಗಡೆ, ವಿಭಾಗೀಯ ಸಾರಿಗೆ ಅಧಿಕಾರಿ ಪಿ.ವಿ.ಮೇತ್ರಿ, ಡಿಪೋ ವ್ಯವಸ್ಥಾಪಕ ಎಸ್‌.ಬಿ. ಗಸ್ತಿ ಅವರಿಗೆ ಸಲ್ಲಿಸಿದ ಮನವಿಗೆ ಸ್ಪಂದಿಸಿ ಭವಿಷ್ಯತ್ತಿನ ದೃಷ್ಟಿಯಿಂದ ಬಸ್‌ ಸೌಲಭ್ಯ ಒದಗಿಸಿದ್ದಾರೆ.

 

•ವಿಠ್ಠಲ ಮೂಲಿಮನಿ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.