ಬಾಗಲಕೋಟೆಯಲ್ಲಿ ಕೋವಿಡ್ 19 ವೈರಸ್ ಗೆ ಮೊದಲ ಬಲಿ ; ನಿನ್ನೆಯಷ್ಟೇ ಸೋಂಕು ದೃಢ ಇಂದು ಸಾವು
Team Udayavani, Apr 3, 2020, 10:53 PM IST
ಬಾಗಲಕೋಟೆ: ಇಲ್ಲಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೊಂಕಿತ ವೃದ್ದ ರಾತ್ರಿ ಸಾವನ್ನಪ್ಪಿದ್ದಾರೆ. 75 ವರ್ಷದ ವೃದ್ಧ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ತಿಳಿಸಿದ್ದಾರೆ.
ನಗರದಲ್ಲಿ ಕಿರಾಣಿ ಹಾಗೂ ಅಡುಗೆ ಎಣ್ಣೆ ವರ್ತಕರಾಗಿದ್ದ ಈ ವ್ಯಕ್ತಿ ಮಾರ್ಚ್ 31ರಂದು ಅನಾರೋಗ್ಯದ ಕಾರಣ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು.
ಯಾವುದೇ ವಿದೇಶ, ರಾಜ್ಯ, ಪರರಾಜ್ಯ, ಪರ ಜಿಲ್ಲೆಗೂ ಪ್ರವಾಸ ಮಾಡಿರಲಿಲ್ಲ, ಆದರೂ, ಇವರಿಗೆ ಕೋವಿಡ್ ಸೋಂಕು ತಗುಲಿರುವುದು ಗುರುವಾರ ರಾತ್ರಿಯಷ್ಟೇ ದೃಢಪಟ್ಟಿತ್ತು. ಮೃತ ವೃದ್ಧ ವ್ಯಾಪಾರಿಯ ಮಗ, ಮಗಳು ಹತ್ತು ದಿನದ ಹಿಂದೆ ಬೆಂಗಳೂರಿನಿಂದ ಊರಿಗೆ ಬಂದಿದ್ದರು.
ಮಗ, ಮಗಳು ಕುಟುಂಬದ ಇನ್ನೊಬ್ಬರ ವರದಿ ನೆಗೆಟಿವ್ ಎಂದು ಕೆಲವೇ ಗಂಟೆಗಳ ಹಿಂದೆ ಬಂದಿತ್ತು. ಇದೀಗ ಜಿಲ್ಲೆಯಲ್ಲಿ ಕೋವಿಡ್ 19 ವೈರಸ್ ಗೆ ಸಂಬಂಧಿಸಿ ಮೊದಲ ಸಾವು ಸಂಭವಿಸಿರುವುದು ಜಿಲ್ಲೆಯ ಜನರ ಆತಂಕವನ್ನು ಹೆಚ್ಚಿಸಿದೆ.
ಮೃತ ವೃದ್ಧ ವ್ಯಾಪಾರಿಯ ಅಂತ್ಯಕ್ರಿಯೆ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯ ನಿಯಮದಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್. ಡಾ.ರಾಜೇಂದ್ರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!
CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ
Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ