ಸವಳು-ಜವಳು ಭೂಮಿಯಲ್ಲಿ ಮೀನುಗಾರಿಕೆ ಕೃಷಿ: ಪೂಜಾರಿ
Team Udayavani, Jun 18, 2020, 8:13 AM IST
ಬಾಗಲಕೋಟೆ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿದರು.
ಬಾಗಲಕೋಟೆ: ಜಿಲ್ಲೆಯ ಸವಳು-ಜವಳು ಭೂಮಿ ಗುರುತಿಸಿ ಮೀನು ಕೃಷಿ ಕೈಗೊಳ್ಳುವ ಮೂಲಕ ಆ ಭೂಮಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವಂತೆ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಮುಜರಾಯಿ, ಮೀನುಗಾರಿಕೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಮೀನುಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುತ್ತಿದ್ದು, ಜಿಲ್ಲೆಯಲ್ಲಿರುವ ಪ್ರತಿ ಮತಕ್ಷೇತ್ರಕ್ಕೆ 200 ಕಿಸಾನ್ ಕಾರ್ಡ್ ವಿತರಿಸಬೇಕು. ಈ ಕಾರ್ಡ್ ಮೂಲಕ 3 ಲಕ್ಷ ಮಿತಿಗೆ ಒಳಪಟ್ಟು ಶೂನ್ಯ ದರದಲ್ಲಿ ಸಾಲ ಸೌಲಭ್ಯ ಒದಗಿಸುವ ಕೆಲಸವಾಗಬೇಕು ಎಂದರು.
ಮಹಿಳಾ ಮೀನು ಕೃಷಿ ರೈತರಿಗೆ ಶೂನ್ಯ ದರದಲ್ಲಿ 50 ಸಾವಿರ ರೂ. ಸಾಲ ವಿತರಿಸಲಾಗುತ್ತಿದೆ. ಜಿಲ್ಲೆಯ ಮಹಿಳಾ ಮೀನುಗಾರರಿಗೆ ಈ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು. ಕಿಸಾನ್ ಕಾರ್ಡ್ಗಾಗಿ ಬಂದ 400 ಅರ್ಜಿ ಒಂದು ತಿಂಗಳಲ್ಲಿ ವಿಲೇವಾರಿ ಮಾಡಬೇಕು. ಕಿಸಾನ್ ಕಾರ್ಡ್ ಇದ್ದವರಿಗೆ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಸಾಲ ಸೌಲಭ್ಯ ದೊರೆಯುತ್ತಿದೆ. ಮೀನುಗಾರರಿಗೆ ಕಿಸಾನ್ ಕಾರ್ಡ್ ವಿತರಿಸಬೇಕು. ಜಿಲ್ಲೆಯಲ್ಲಿ 150 ಕೆರೆಗಳನ್ನು ನರೇಗಾದಡಿ ಅಭಿವೃದ್ಧಿಪಡಿಸಬೇಕೆಂದರು. ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಮಾತನಾಡಿ, ಜಿಲ್ಲೆಯಲ್ಲಿ 1163 ಸಿ ದರ್ಜೆ, 3 ಬಿ ದರ್ಜೆ, ದೇವಸ್ಥಾನಗಳಿದ್ದು, ಸಿ ದರ್ಜೆ, ಪ್ರತಿ ದೇವಸ್ಥಾನಗಳಿಗೆ ಗ್ರಾಮ ಮಟ್ಟದಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳನ್ನು ಆಡಳಿತ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಆಡಳಿತಾಧಿಕಾರಿಗಳು ಪ್ರತಿ ದೇವಸ್ಥಾನದಲ್ಲಿ ಪೂಜೆ ನಡೆಯುತ್ತಿದೆಯೋ ಇಲ್ಲವೋ, ವ್ಯಾಪ್ತಿ ಎಷ್ಟು ಇದೆ, ಪೂಜೆ ಮಾಡುತ್ತಿರುವ ಅರ್ಚಕರು ಸೇರಿದಂತೆ ಇತರೆ ಮಾಹಿತಿ ಒಂದು ವಾರದಲ್ಲಿ ಕಲೆ ಹಾಕಿ ವರದಿ ಸಲ್ಲಿಸುವಂತೆ ತಿಳಿಸಿದರು.
ಬಾಗಲಕೋಟೆ ಜಿಲ್ಲೆಯಲ್ಲಿ ಅನೇಕ ದೇವಸ್ಥಾನಗಳು ಮುಗಳುಗಡೆಯಾಗಿದ್ದು, ಅವುಗಳ ಪುನರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ದೇವಸ್ಥಾನಗಳನ್ನು
ಮೇಲ್ದರ್ಜೆಗೇರಿಸಲು, ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ತಿಳಿಸಿದರು. ಸಂಸದ ಪಿ.ಸಿ. ಗದ್ದಿಗೌಡರ ಮಾತನಾಡಿದರು. ಉಪ ವಿಭಾಗಾಧಿಕಾರಿ ಎಂ. ಗಂಗಪ್ಪ, ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಂ.ಎಚ್. ಬಾಂಗಿ, ನಿಜಶರಣ ಚೌಡಯ್ಯ, ಉತ್ತರ ಕರ್ನಾಟಕ ಒಳನಾಡು ಮೀನುಗಾರಿಕೆ ಅಭಿವೃದ್ಧಿ ಕೇಂದ್ರದ ಜಂಟಿ ನಿರ್ದೇಶಕ ತಿಪ್ಪೆಸ್ವಾಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ