ಸಹಾಯವಾಣಿ ಸಮಸ್ಯೆ ಸರಿಪಡಿಸಿ
Team Udayavani, Jun 10, 2020, 6:16 AM IST
ಜಮಖಂಡಿ: ನಗರದ ಹೆಸ್ಕಾಂ ಇಲಾಖೆ ವ್ಯಾಪ್ತಿಯ ಸಹಾಯವಾಣಿ ಸಂಖ್ಯೆ ದಿನದ 24 ಗಂಟೆ ಸೇವೆ ಸಲ್ಲಿಸುತ್ತಿಲ್ಲ. ಸಹಾಯವಾಣಿ ಕೇವಲ ಕಾಟಾಚಾರಕ್ಕೆ ಮಾತ್ರ ಇದೆ ಎಂಬಂತಾಗಿದೆ ಎಂದು ನಗರಸಭೆ ಸದಸ್ಯ ಪ್ರಶಾಂತ ಚರಕಿ ಹೇಳಿದರು.
ನಗರದ ಮಿನಿ ವಿಧಾನಸೌಧ ಕಚೇರಿಯಲ್ಲಿ ಉಪವಿಭಾಗಾಧಿಕಾರಿ ಡಾ| ಸಿದ್ದು ಹುಲ್ಲೊಳ್ಳಿ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. ಸಹಾಯವಾಣಿಗೆ ಕರೆ ಮಾಡಿದರೇ ಸಹಾಯವಾಣಿ ಕೇಂದ್ರದ ನೌಕರರು ಕರೆ ಸ್ವೀಕರಿಸುತ್ತಿಲ್ಲ. ಹೆಸ್ಕಾಂ ಅಧಿಕಾರಿಗಳನ್ನು ಸಂಪರ್ಕಿಸಲು ತೊಂದರೆಯಾಗುತ್ತಿದೆ. ಕೂಡಲೇ ಸಹಾಯವಾಣಿ ಕೇಂದ್ರ ಜನರಿಗೆ ಸಮರ್ಪಕ ರೀತಿಯಲ್ಲಿ ಸೇವೆ ನೀಡುವಂತೆ ಒತ್ತಾಯಿಸಿದರು.