ನೆರೆ ಪೀಡಿತ ಗ್ರಾಮ ದತ್ತು ಪಡೆದ ಸಿನೆಮಾ ತಂಡ


Team Udayavani, Jan 19, 2020, 11:50 AM IST

bk-tdy-1

ಬಾಗಲಕೋಟೆ: ಕಳೆದ ವರ್ಷ ಆಗಸ್ಟ್‌ನಲ್ಲಿ ಜಿಲ್ಲೆಯ 105 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಅಪ್ಪಳಿಸಿದ ಭಾರಿ ಪ್ರವಾಹಕ್ಕೆ ನಲುಗಿದ್ದ ಜಿಲ್ಲೆಯ ಗ್ರಾಮವನ್ನು ಸಿನೆಮಾ ತಂಡ ದತ್ತು ಪಡೆದು, ಸಮಗ್ರ ಅಭಿವೃದ್ಧಿಪಡಿಸಲು ನಿರ್ಧರಿಸಿದೆ.

ಮೊದಲ ಭಾಗವಾಗಿ ರವಿವಾರ ರಾತ್ರಿ ನಾಯಕ ನಟ-ನಟಿ ಸಹಿತ ಇಡೀ ಸಿನೆಮಾ ತಂಡ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದು, ಗ್ರಾಮಸ್ಥರೊಂದಿಗೆ ಬೆರೆತು ಸಮಸ್ಯೆ ಅರಿಯಲಿದೆ. ಹೌದು, ಕಳೆದ ವರ್ಷ ಮಲಪ್ರಭಾ ನದಿ ಪ್ರವಾಹಕ್ಕೆ ನಲುಗಿದ ಬಾದಾಮಿ ತಾಲೂಕು ಕರ್ಲಕೊಪ್ಪ ಗ್ರಾಮವನ್ನು 7ಹಿಲ್ಸ್‌ ಸ್ಟುಡಿಯೋ ಅಡಿ ನಿರ್ಮಾಣಗೊಂಡ 3ರ್ಡ್‌ ಕ್ಲಾಸ್‌ ಸಿನೆಮಾ ತಂಡ ದತ್ತು ಪಡೆದಿದೆ. ಈ ತಂಡ ಈಗಾಗಲೇ ಗಾಮಕ್ಕೆ ಭೇಟಿ ನೀಡಿ, ಅಲ್ಲಿನ ಸಮಸ್ಯೆ ಕುರಿತು ಅವಲೋಕನ ಮಾಡಿದ್ದು, ದತ್ತು ಗ್ರಾಮದಲ್ಲಿ ಮೊದಲ ಭಾಗವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡು ಶಾಲಾ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದೆ.

ಗ್ರಾಮ ವಾಸ್ತವ್ಯ: ಸಿನೆಮಾ ತಂಡವೊಂದು ಗ್ರಾಮ ವಾಸ್ತವ್ಯದ ಮೂಲಕ ಗ್ರಾಮೀಣ ಸಮಸ್ಯೆ ಅರಿತು, ಕೈಲಾದಷ್ಟು ಪರಿಹಾರ ಕಾರ್ಯ ಕೈಗೊಳ್ಳಲು ಕನ್ನಡ ಸಿನೆಮಾ ರಂಗದಲ್ಲಿ ಇದೇ ಮೊದಲ ಪ್ರಯತ್ನವಾಗಿ 3ರ್ಡ್‌ ಕ್ಲಾಸ್‌ ಚಿತ್ರ ತಂಡ ಹೆಜ್ಜೆ ಇಟ್ಟಿದೆ. ಸಿನೆಮಾದ ನಾಯಕ ನಟ ಹಾಗೂ ನಿರ್ಮಾಪಕ ನಮ್ಮ ಜಗದೀಶ, ನಟಿ ರೂಪಿಕಾ, ಸಹ ನಿರ್ಮಾಪಕ ನಂದನ್‌ ಸಹಿತ ಚಿತ್ರ ತಂಡದ ಹಲವು, ರವಿವಾರ ಸಂಜೆ 7ಕ್ಕೆ ಗ್ರಾಮಕ್ಕೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ. ಅಂದು ಗ್ರಾಮದ ಶಾಲಾ ಮಕ್ಕಳ ಪ್ರತಿಭೆ ಅನಾವರಣ, ಹಳ್ಳಿಗರ ಸಂಸ್ಕೃತಿ, ಅಲ್ಲಿನ ಸಮಸ್ಯೆ ಕುರಿತು ಚರ್ಚೆ ಮಾಡಲಿದೆ. ರಾತ್ರಿ ಅಲ್ಲಿಯೇ ವಾಸ್ತವ್ಯ ಮಾಡಿ, ಸೋಮವಾರ ಬೆಳಗ್ಗೆ ಶಾಲಾ ಕಟ್ಟಡ ನಿರ್ಮಾಣದಲ್ಲಿ ಈ ತಂಡವೂ ಶ್ರಮದಾನ ಮಾಡಲಿದೆ. ಮುಖ್ಯವಾಗಿ ನಟ ನಮ್ಮ ಜಗದೀಶ ಅವರ ಸ್ನೇಹ ಬಳಗದಲ್ಲಿರುವ ಸುಮಾರು 25ಕ್ಕೂ ಹೆಚ್ಚು ಭಾರತೀಯ ಸೈನಿಕರು, ಮಾಜಿ ಸೈನಿಕರೂ ಶ್ರಮದಾನ ಮಾಡಲಿರುವುದು ವಿಶೇಷ.

ಮಾದರಿ ಗ್ರಾಮಕ್ಕೆ ನಿರ್ಧಾರ: ಪ್ರವಾಹದ ವೇಳೆ ಮನೆತುಂಬ ನೀರು ಹೊಕ್ಕು ತೀವ್ರ ಸಮಸ್ಯೆ ಅನುಭವಿಸಿದ ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ, 3ರ್ಡ್‌ ಕ್ಲಾಸ್‌ ಚಿತ್ರ ತಂಡದ ನಡೆ, ಗ್ರಾಮದ ಕಡೆ ಎಂಬ ವಿಶೇಷ ಪರಿಕಲ್ಪನೆಯೊಂದಿಗೆ ಗ್ರಾಮ ದತ್ತು ಪಡೆದಿದ್ದು, ಎರಡುಶಾಲಾ ಕೊಠಡಿ, ಕಂಪೌಂಡ್‌, ಮಕ್ಕಳಿಗೆ ಆಟಿಗೆ ಸಾಮಗ್ರಿ, ಸ್ಮಾರ್ಟ್‌ ಕ್ಲಾಸ್‌ ಹೀಗೆ ಹಲವು ರೀತಿಯ ಸೌಲಭ್ಯವನ್ನು ಸರ್ಕಾರಿ ಶಾಲೆಗೆ ಒದಗಿಸಲು ನಿರ್ಧರಿಸಿದೆ.

ಲಾಭ ಗಳಿಸುವ ಒಂದೇ ಉದ್ದೇಶದಿಂದ ಸಿನೆಮಾ ಮಾಡಿಲ್ಲ. ಜನರಿಂದ ಬರುವ ದುಡ್ಡನ್ನು ಜನರಿಗೆ ಬಳಸಬೇಕೆಂಬುದು ನಮ್ಮಗುರಿ. ಈಗಾಗಲೇ 50 ಸಾವಿರಕ್ಕೂ ಹೆಚ್ಚು ಆಟೋ-ಕ್ಯಾಬ್‌ ಚಾಲಕರಿಗೆ ಆರೋಗ್ಯ ಮತ್ತು ಜೀವ ವಿಮೆ ಮಾಡಿಸಿದ್ದು, ರಾಜ್ಯದ ವಿವಿಧ ಭಾಗದ 150ಕ್ಕೂ ಹೆಚ್ಚು ಅಂಧ-ಅನಾಥ ಮಕ್ಕಳ ಶಾಲೆ ದತ್ತು ಪಡೆದು, ಸಿನೆಮಾದ ಮೊದಲ ದಿನದ ಮೊದಲ ಶೋನ ಹಣ, ಆ ಶಾಲೆಗಳಿಗೆ ನೀಡಲಾಗುವುದು. ಈಗ ಪ್ರವಾಹ ಪೀಡಿತ ಗ್ರಾಮ ದತ್ತು ಪಡೆದು, ಅಭಿವೃದ್ಧಿಪಡಿಸಲು ನಿರ್ಧರಿಸಿದ್ದು, ಗ್ರಾಮಸ್ಥರು-ಜಿಲ್ಲಾಡಳಿತ ಬಹಳ ಸಹಕಾರ ನೀಡಿದೆ. ನಮ್ಮ ಜಗದೀಶ, ನಿರ್ಮಾಪಕ ಹಾಗೂ ನಾಯಕ ನಟ

 ಪ್ರವಾಹಕ್ಕೆ ಒಳಗಾದ ಕರ್ಲಕೊಪ್ಪ ಗ್ರಾಮಕ್ಕೆ ನಾನೂ ಭೇಟಿ ನೀಡಿದ್ದು, ಅಲ್ಲಿನ ಸಮಸ್ಯೆ ನೋಡಿ ಬೇಸರವೆನಿಸಿತು. ಒಂದು ದಿನ ಗ್ರಾಮಸ್ಥರೊಂದಿಗೆ ವಾಸ್ತವ್ಯವಿದ್ದು, ಮರುದಿನ ಶಾಲಾ ಕಟ್ಟಡ ನಿರ್ಮಾಣಕ್ಕೆ ನನ್ನ ಕೈಲಾದಷ್ಟು ಶ್ರಮದಾನ ಮಾಡಲು ನಿರ್ಧರಿಸಿದ್ದೇನೆ. ನಮ್ಮ ಚಿತ್ರ ತಂಡ, ಸಾಮಾಜಿಕ ಕಳಕಳಿಯೊಂದಿಗೆ ಹೆಜ್ಜೆ ಇಟ್ಟಿದ್ದು, ಈ ಕೆಲಸದಲ್ಲಿ ಭಾಗಿಯಾಗುವುದು ನನ್ನ ಕರ್ತವ್ಯವೆಂದುಕೊಂಡಿದ್ದೇನೆ.  –ರೂಪಿಕಾ,ನಟಿ

 

-ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.