ಮುಧೋಳ: ಹೊಳೆಬಸವೇಶ್ವರ ದೇವಸ್ಥಾನ ಜಲಾವೃತ
Team Udayavani, May 21, 2022, 11:53 AM IST
ಮುಧೋಳ: ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.
ನದಿ ಪಾತ್ರದ ಜನರಲ್ಲಿ ಇದೀಗ ಪ್ರವಾಹದ ಆತಂಕ ನಿರ್ಮಾಣವಾಗಿದ್ದು, ತಾಲೂಕಿನ ಮಾಚಕನೂರು ಗ್ರಾಮದ ಐತಿಹಾಸಿಕ ಹೊಳೆಬಸವೇಶ್ವರ ದೇವಸ್ಥಾನ ಜಲಾವೃತಗೊಂಡಿದೆ.
ಗ್ರಾಮಕ್ಕೆ ಹೊಂದಿಕೊಂಡಿರುವ ಬ್ಯಾರೇಜ್ಗೆ ಅಪಾರ ಪ್ರಮಾಣದ ನೀರು ಹರಿದುಬರತ್ತಿದ್ದು, ಬ್ಯಾರೇಜ್ನ ಎಲ್ಲ ಗೇಟ್ಗಳನ್ನು ತೆರದಿಡಲಾಗಿದೆ.