ಪ್ರವಾಹ: 13 ಪರಿಹಾರ ಕೇಂದ್ರ ಸ್ಥಾಪನೆ
•3 ಆ್ಯಂಬುಲೆನ್ಸ್ಗಳ ವ್ಯವಸ್ಥೆ -ಜೀವರಕ್ಷಕ ಔಷಧಿ ಪೂರೈಕೆಗೆ ಕ್ರಮ• ಸುರಕ್ಷಿತ ಸ್ಥಳಗಳಿಗೆ ಕುಟುಂಬಗಳ ಸ್ಥಳಾಂತರ
Team Udayavani, Aug 7, 2019, 10:14 AM IST
ಬಾಗಲಕೋಟೆ: ನಡುಗಡ್ಡೆಯಾದ ಜನವಸತಿಗಳ ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಬೋಟ್ ಮೂಲಕ ಸಾಗಿಸಲಾಯಿತು.
ಬಾಗಲಕೋಟೆ: ಜಿಲ್ಲೆಯಲ್ಲಿ ಕೃಷ್ಣಾ ನದಿಯ ನೀರಿನ ಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವಿವಿಧ ಪ್ರವಾಹ ಸ್ಥಳಗಳಿಗೆ ಮಂಗಳವಾರ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಭೇಟಿ ನೀಡಿ ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ.
ಮುಧೋಳ ತಾಲೂಕಿನ ಕಾಂಬಳೆಗಲ್ಲಿಗೆ ಭೇಟಿ ನೀಡಿ ಅಲ್ಲಿರುವ ಸಂತ್ರಸ್ಥರನ್ನು ಭೇಟಿ ಮಾಡಿ ಆಲಿಸಿ ಶಾಂತ್ವನ ಹೇಳಿದರು. 40 ಜನ ಸಂತ್ರಸ್ತರಿಗಾಗಿ ಸರಕಾರಿ ರನ್ನ ಮಾದರಿ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ಊಟೋಪಚಾರದ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು.
ನಂತರ ಯಾದವಾಡದ ಬ್ಯಾರೇಜ್ಗೆ ಭೇಟಿ ನೀಡಿ ಅಲ್ಲಿರುವ ನೀರಿನ ಪ್ರಮಾಣವನ್ನು ವೀಕ್ಷಿಸಿದರು. ನೀರಿನಿಂದ ಆವರಿಸಿದ ಮಾಚಕನೂರಿನ ಹೊಳೆ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಮುಧೋಳ ತಾಲೂಕಿನಲ್ಲಿ ಬಾಧಿತಗೊಳ್ಳುವ ಗ್ರಾಮಗಳ ಸಂತ್ರಸ್ತರಿಗಾಗಿ 13 ತುರ್ತು ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಿ 6 ಜನ ಮೇಲ್ವಿಚಾರಕರು ಸೇರಿ ಒಟ್ಟು 19 ಜನ ಕಾರ್ಯನಿರ್ವಹಿಸುತ್ತಿದ್ದಾರೆ. ಬಾಧಿತರನ್ನು ಹಾಗೂ ರೋಗಿಗಳನ್ನು ಕೊಂಡೊಯ್ಯಲು 3 ಆ್ಯಂಬುಲೆನ್ಸ್ಗಳ ವ್ಯವಸ್ಥೆ ಮಾಡಲಾಗಿದೆ. ಜೀವರಕ್ಷಕ ಔಷಧಿಗಳನ್ನು ಪೂರೈಸಲಾಗಿದ್ದು, ಹಾವು ಕಡಿತಕ್ಕೆ ಔಷಧಿಯನ್ನು ಪೂರೈಸಲಾಗುತ್ತಿದೆ. ಕುಡಿಯುವ ನೀರಿನ ಮೂಲಗಳ ಪರೀಕ್ಷೆ ಮಾಡಿ ಸೂಪರ್ ಕ್ಲೋರಿನೇಷನ್ ಮಾಡಲಾಗಿದೆ. ಇದುವರೆ ಪ್ರವಾಹ ಪೀಡಿತ ಗ್ರಾಮಗಳಲ್ಲಿಯ 375 ಜನರ ಆರೋಗ್ಯ ತಪಾಸಣೆ ಮಾಡಿ ಸೂಕ್ತ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಮುಧೋಳ ಪಟ್ಟಣದಲ್ಲಿ ಈಗಾಗಲೇ 29 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಅಲ್ಲದೇ ಬೆಳಗಲಿ ಗ್ರಾಮದಲ್ಲಿ 5 ಟನ್, ಲೋಕಾಪುರದಲ್ಲಿ 5 ಟನ್ ಮೇವು ಇರಿಸಲಾಗಿದೆ. ಕಂಕಣವಾಡಿಯಲ್ಲಿ 70 ಕುಟುಂಬಗಳ ಪೈಕಿ 50 ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು ಉಳಿದ 20 ಕುಟುಂಬಗಳ ಸ್ಥಳಾಂತರಿಸುವ ಕಾರ್ಯ ಮಾಡಲಾಗುತ್ತಿದೆ. ಅಲ್ಲದೇ ಅಂಗನವಾಡಿ ಕೇಂದ್ರದಲ್ಲಿ ತಾತ್ಕಾಲಿಕವಾಗಿ ಆರೋಗ್ಯ ತಪಾಸಣೆ ಕೇಂದ್ರ ತೆರೆಯಲಾಗಿದ್ದು, ಅಲ್ಲಿರುವ ಗರ್ಭಿಣಿ ಹಾಗೂ ಬಾಣಂತಿಯರಿಗೆ ಸೂಕ್ತ ಚಿಕಿತ್ಸೆ ಹಾಗೂ ಔಷಧಗಳನ್ನು ವಿತರಿಸಲಾಗುತ್ತಿದೆ.
ಪರಿಶೀಲನೆ ವೇಳೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಪ್ರೊಬೇಷನರಿ ಐಎಎಸ್ ಅಧಿಕಾರಿ ಗರಿಮಾ ಪೊವಾರ, ಉಪವಿಭಾಗಾಧಿಕಾರಿ ಮೊಹಮ್ಮದ ಈಕ್ರಮ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ