ಪತ್ರಿಕಾ ವಿತರಕರಿಗೆ ಆಹಾರ ಕಿಟ್
Team Udayavani, May 26, 2020, 9:21 AM IST
ಬಾಗಲಕೋಟೆ: ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಕೋವಿಡ್ ಸಂಕಷ್ಟದ ಸಮಯದಲ್ಲಿ ಪಕ್ಷದ ಕಚೇರಿಯಲ್ಲಿ ನಗರದ ಪತ್ರಿಕಾ ವಿತರಕರಿಗೆ ಆಹಾರಧಾನ್ಯಗಳ ಕಿಟ್ ವಿತರಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯನಮಠ ಪತ್ರಿಕಾ ವಿತರಕರ ಕಾರ್ಯವನ್ನು ಶ್ಲಾಘಿಸಿದರು. ಪ್ರತಿದಿನ ನೀರನ್ನು ಅರಿಶಿಣಪುಡಿ ಶುಂಠಿಯನ್ನು ಮಿಶ್ರಣ ಮಾಡಿ ಕಾಯಿಸಿ ಕುಡಿದು ಉತ್ತಮ ಆರೋಗ್ಯ ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು.
ಹಿರಿಯ ಪತ್ರಿಕಾ ವಿತರಕ ಶ್ರೀಕಾಂತ ಸೂಳಿಕೇರಿ ಮಾತನಾಡಿ, ಇದೊಂದು ಮಾನವೀಯ ಕಾರ್ಯ. ಕೋವಿಡ್ ಸಂಕಷ್ಟದ ಸಮಯದಲ್ಲಿ ಪತ್ರಿಕಾ ವಿತರಕರನ್ನು ಗುರುತಿಸಿ, ನೆರವು ನೀಡಿದ್ದಕ್ಕೆ ಕೃತಜ್ಞತೆ ತಿಳಿಸಿದರು. ಮಾಜಿ ಸಚಿವ ಎಚ್. ವೈ. ಮೇಟಿ, ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಕ್ಷಿತಾ ಈಟಿ, ಕೆಪಿಸಿಸಿ ಕಾರ್ಯದರ್ಶಿ ಬಸವಪ್ರಭು ಸರನಾಡಗೌಡ, ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಎಸ್.ಎನ್. ರಾಂಪುರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ