ಬಾಗಲಕೋಟೆಯಲ್ಲಿ ಮೂರ್ತಿ ‌ಪ್ರತಿಷ್ಠಾಪನೆಗೆ ಬಂದ ನಿಜ ಆಂಜನೇಯ!


Team Udayavani, Jan 19, 2024, 5:48 PM IST

moothi

ಉದಯವಾಣಿ ಸಮಾಚಾರ
ಬಾಗಲಕೋಟೆ: ಇಲ್ಲಿನ ಮುಚಖಂಡಿ ಕ್ರಾಸ್‌ನ ಪಂಚಮುಖಿ ಆಂಜನೇಯ ಮೂರ್ತಿ ಪ್ರತಿಷ್ಠಾಪನೆ ನಿಮಿತ್ತ ಗುರುವಾರ ನಡೆದ ಭವ್ಯ ಶೋಭಾಯಾತ್ರೆಯಲ್ಲಿ ಆಂಜನೇಯನ ವೇಷ ತೊಟ್ಟ ಕಲಾವಿದರು ಗಮನ ಸೆಳೆದರು. ನಗರದ ಕಿಲ್ಲಾದ ಕೊತ್ತಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಯ ಬಳಿಕ ಶೋಭಾಯಾತ್ರೆ ಆರಂಭಗೊಂಡಿತು.

ಕೆರೂರಿನ ಚರಂತಿಮಠದ ಡಾ|ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ, ಗದ್ದನಕೇರಿಯ ಮೌನೇಶ್ವರ ಪಿ. ಮಹಾಪುರುಷ ಸ್ವಾಮೀಜಿಗಳು ಶೋಭಾಯಾತ್ರೆಗೆ ಚಾಲನೆ ನೀಡಿದರು. ಕೊತ್ತಲೇಶ್ವರ ದೇವಾಲಯದಿಂದ ಆರಂಭಗೊಂಡ ಶೋಭಾಯಾತ್ರೆ, ನಗರದ ಪಂಕಾ ಮಸೀದಿ, ಪೊಲೀಸ್‌ ಗೇಟ್‌, ಎಂ.ಜಿ.ರಸ್ತೆ, ಬಸವೇಶ್ವರ ಸರ್ಕಲ್‌, ಕುಮಟಗಿ ಶೋರಂ, ವಾಸವಿ ಟಾಕೀಜ್‌, ಮಹಾವೀರ ರೋಡ, ಕೆರೂಡಿ ಆಸ್ಪತ್ರೆ ರಸ್ತೆ, ಕೆಂಪು ರಸ್ತೆ, ಮೂಲಕ ಹಾಯ್ದು ಮುಚಖಂಡಿ ಕ್ರಾಸ್‌ನ ಮಾರುತೇಶ್ವರ ದೇವಾಲಯಕ್ಕೆ ತಲುಪಿತು. ಮೆರವಣಿಗೆಯುದ್ದಕ್ಕೂ ಜೈ ಶ್ರೀರಾಮ, ಜೈ ಆಂಜನೇಯ ಘೋಷಣೆಗಳು ಮುಗಿಲು ಮುಟ್ಟಿದವು.

ಪ್ರಮುಖ ಬೀದಿಗಳಲ್ಲಿ ಕೇಸರಿಧ್ವಜ, ಸ್ವಾಗತ ಕಮಾನುಗಳು ರಾರಾಜಿಸಿದವು. ಮುಳುಗಡೆ ನಗರಿ ಬಾಗಲಕೋಟೆಯಲ್ಲಿ ಕಟೌಟ್‌, ಬ್ಯಾನರಗಳ ಹಬ್ಬದ ಕಳೆ ಸೃಷ್ಟಿಸಿದವು. ಮೆರವಣಿಗೆಯಲ್ಲಿ ಸಾವಿರಾರು ಮಹಿಳೆಯರು ಪೂರ್ಣ ಕುಂಭ ಹೊತ್ತು ಹೆಜ್ಜೆ ಹಾಕಿದರು. ಜಾಂಜ್‌ ಪತಾಕ್‌, ಡಿಜೆ, ಮದ್ದಳೆ, ಡೊಳ್ಳು ಕುಣಿತ ಆಕರ್ಷಿಸಿದವು.

ಆಂಜನೇಯನ ವೇಷಧಾರಿ ಕಲಾವಿದರು, ಮೆರವಣಿಗೆಗೆ ಹೊಸ ಕಳೆ ತಂದಿತು. ನಗರದ ಬಸವೇಶ್ವರ ವೃತ್ತಕ್ಕೆ ಮೆರವಣಿಗೆ ಸಮೀಪಿಸುತ್ತಿದ್ದಂತೆ ಜಯಘೋಷಗಳು ಪ್ರತಿಧ್ವನಿಸಿದವು. ಆಂಜನೇಯ ಭಕ್ತರು, ಪಟಾಕಿ ಸಿಡಿಸಿ ಭಕ್ತರು ಸಂಭ್ರಮಿಸಿದರು. ಬಾಲಕರು ರಾಮ, ಕೃಷ್ಣ, ಲಕ್ಷ್ಮಣ, ಸೀತಾದೇವಿ, ಹನುಮನ ವೇಷ ಧರಿಸಿದ ಮಕ್ಕಳು ಗಮನ ಸೆಳೆದರು.

ಬಸವೇಶ್ವರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಯುವ ಮುಖಂಡರಾದ ಮಲ್ಲಿಕಾರ್ಜುನ ಚರಂತಿಮಠ, ಸಂತೋಷ ಹೊಕ್ರಾಣಿ, ಜಿ.ಪಂ.ಮಾಜಿ ಅಧ್ಯಕ್ಷರಾದ ವೀಣಾ ಕಾಶಪ್ಪನವರ, ಬಾಯಕ್ಕ ಮೇಟಿ ಮುಂತಾದವರು ಭಗವಾಧ್ವಜ ಹಿಡಿದು ಡೊಳ್ಳು ವಾದನಕ್ಕೆ ಹೆಜ್ಜೆ ಹಾಕಿದರು.

ಮಾರುತೇಶ್ವರ ದೇವಸ್ಥಾನ ಸೇವಾ ಸಂಘದ ಅಧ್ಯಕ್ಷ ಬಸವರಾಜ ಕಟಗೇರಿ, ಮುಖಂಡರಾದ ಡಾ| ಶೇಖರ ಮಾನೆ, ವಿಜಯ ಸುಲಾಖೆ, ನಾಗರಾಜ ಹದ್ಲಿ, ಸಂಜೀವ ವಾಡಕರ್‌, ಗಣಪತಿಸಾ ದಾನಿ, ನಾರಾಯಣ ದೇಸಾಯಿ, ಶಿವು ಮೇಲಾ°ಡ, ರವಿ ಕುಟಮಗಿ, ಎಂ.ಆರ್‌.ಶಿಂಧೆ, ಅಶೋಕ ಮುತ್ತಿನಮಠ, ಅರುಣ ಲೋಕಾಪುರ, ಆನಂದ ಜಿಗಜಿನ್ನಿ, ಬಸವರಾಜ ಧರ್ಮಂತಿ, ಕಳಕಪ್ಪ ಬಾದೋಡಗಿ, ರಾಘವೇಂದ್ರ ನಾಗೂರ, ನರೇಂದ್ರ ಕುಪ್ಪಸ್ತ, ಗುರು ಅನಗವಾಡಿ, ಶರಣಪ್ಪ ಕೆರೂರ ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.