ನೆಲ-ಜಲ ವಿಷಯದಲ್ಲಿ ಪಕ್ಷಬೇಧ ಮರೆತು ಅಭಿವೃದ್ಧಿ

ಕೆರೂರ ಏತ ನೀರಾವರಿ ಯೋಜನೆಗೆ ಚಾಲನೆ

Team Udayavani, Apr 23, 2022, 4:22 PM IST

12

ಬಾಗಲಕೋಟೆ: ರಾಜ್ಯದ ನೀರಾವರಿ ಹಾಗೂ ನೆಲ ವಿಷಯದಲ್ಲಿ ಪಕ್ಷಾತೀತವಾಗಿ ಕಾರ್ಯ ನಿರ್ವಹಿಸಿದ ಪರಂಪರೆ ನಮ್ಮಲ್ಲಿದೆ. ಬಿಜೆಪಿ ಸರ್ಕಾರವೂ ಕೂಡ ಈ ವಿಷಯದಲ್ಲಿ ಪರಂಪರೆ ಮುಂದುವರಿಸಲಿದೆ. ರಾಜ್ಯದ ಪ್ರಮುಖ ನೀರಾವರಿ ಯೋಜನೆಯಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3 ಪೂರ್ಣಗೊಳಿಸಲು ಮುಖ್ಯವಾದ ಕೇಂದ್ರ ಸರ್ಕಾರದ ಅಧಿಸೂಚನೆ ಹೊರಡಿಸಲು ಸರ್ವ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಾದಾಮಿ ತಾಲೂಕಿನ ಉಗಲವಾಟದಲ್ಲಿ ಕೆರೂರ ಏತ ನೀರಾವರಿ ಯೋಜನೆಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ರೈತ, ನೆಲ ಜಲಗಳ ವಿಚಾರದಲ್ಲಿ ಪಕ್ಷಾತೀತವಾಗಿ ಕಾರ್ಯನಿರ್ವಹಿಸುವ ಪರಂಪರೆ ಕರ್ನಾಟಕದಲ್ಲಿ ಇದೆ. ಅಭಿವೃದ್ಧಿ ಕಾರ್ಯಗಳು ನಿಗದಿತ ಅವಧಿಯಲ್ಲಿ ಆಗಬೇಕು. ಕೆರೂರು ಏತ ನೀರಾವರಿ ಯೋಜನೆಯು 2ನೇ ಹಂತದ ಕಾಮಗಾರಿಯ ಅನುಮೋದನೆಗೂ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಆಲಮಟ್ಟಿ ಜಲಾಶಯ ಸರ್ವಪ್ರಯತ್ನ: ಬೀಳಗಿ ಮತ್ತು ಬಾದಾಮಿ ತಾಲೂಕಿನ 40 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ಹಸಿರು ಸೀರೆ ಉಡಿಸುವ ಕನಸು ಕಾಣುತ್ತಿದ್ದೇವೆ. ಆ ಕೆಲಸವಾಗುವವರೆಗೂ ನಾವು ವಿಶ್ರಮಿಸುವುದಿಲ್ಲ. ಕರ್ನಾಟಕದ ನೀರಾವರಿಯೋಜನೆಗಳು ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ನಡುವೆ ಸಿಲುಕಿದೆ. ಅಂತರರಾಜ್ಯ ನದಿ ವಿವಾದಗಳಿಂದ ಹಲವಾರು ತೊಂದರೆ ಅನುಭವಿಸುತ್ತಿದ್ದೇವೆ. ಆದಾಗ್ಯೂ ಕೂಡ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 1 ಮತ್ತು 2 ಈಗಾಗಲೇ ಪೂರ್ಣಗೊಂಡಿದೆ. ಹಂತ 3 ಯೋಜನೆಗಳಡಿ ಮೂಲಭೂತ ಸೌಕರ್ಯಕ್ಕೆ ಅಗತ್ಯವಿರುವ ಕೆಲಸ ಮಾಡಲಾಗಿದೆ. 2009ರಲ್ಲಿ ಜಲಸಂಪನ್ಮೂಲ ಸಚಿವನಾಗಿದ್ದ ಸಂದರ್ಭದಲ್ಲಿ ಮುಳವಾಡ, ಗುತ್ತಿ ಬಸವಣ್ಣ, ಚಿಮ್ಮಲಗಿ ಏತ ನೀರಾವರಿ ಯೋಜನೆಗೆ ಅನುಮೋದನೆ ನೀಡಲಾಗಿತ್ತು. ಈಗ ಅದಕ್ಕೆ ನ್ಯಾಯಾಧೀಕರಣದ ಆದೇಶದಂತೆ ಅಧಿಸೂಚನೆ ಪಡೆದು ಯು.ಕೆ.ಪಿ ಹಂತ -3ಯೋಜನೆ ಆಗಬೇಕಾದರೆ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟ 524 ಮೀಟರ್‌ವರೆಗೆ ಎತ್ತರಿಸಬೇಕು. ಅದಕ್ಕೆ ಸರ್ವ ಪ್ರಯತ್ನ ಮಾಡುತ್ತೇವೆ ಎಂದರು.

ಅಭಿವೃದ್ಧಿ ಭಾಗ್ಯದ ಬಾಗಿಲು ತೆರೆಯುತ್ತೇವೆ: ಮುಳುಗಡೆಯಾದ ಪ್ರದೇಶಕ್ಕೆ ಪರಿಹಾರ ನೀಡಿ, ಈ ಭಾಗದ ಬಹುದಿನಗಳ ಬೇಡಿಕೆಯಂತೆ 13 ಲಕ್ಷ ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಿದಂತಾಗುತ್ತದೆ. ಇಡೀ ಉತ್ತರ ಕನಾಟಕ ಅಭಿವೃದ್ಧಿಯ ಭಾಗ್ಯದ ಬಾಗಿಲು ತೆರೆಯುತ್ತದೆ ಎಂದರು.

ಆ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ ನಿರಂತರವಾಗಿ ಇರುತ್ತದೆ. ಅದು ನಮ್ಮ ಬದ್ಧತೆ ಕೂಡ. ಜಲಸಂಪನ್ಮೂಲ ಸಚಿವ ಕಾರಜೋಳ ಅವರು ಈ ಯೋಜನೆಗಳಿಗೆ ವೇಗ ನೀಡಲು ಕಾರಣೀಭೂತರಾಗಿದ್ದಾರೆ. ಸಚಿವ ನಿರಾಣಿಯವರೂ ಸಹ ಒತ್ತಾಯ ಮಾಡಿ ಯೋಜನೆಗಳ ಅನುಮೋದನೆಗೆ ಕಾರಣೀಭೂತರಾಗಿದ್ದಾರೆ. ಬರುವ ದಿನಗಳಲ್ಲಿ ನೀರಾವರಿಯ ಹಲವು ಯೋಜನೆಗಳಿಗೆ ಆದ್ಯತೆ ಮೇರೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು.

ಬಾದಾಮಿಗಾಗಿ ಮಾಸ್ಟರ್‌ ಪ್ಲ್ಯಾನ್: ಬಾದಾಮಿ ಕ್ಷೇತ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸೊದ್ಯಮಕ್ಕೆ ಪ್ರಸಿದ್ಧವಾಗಿದೆ. ಇದರ ಬೆಳವಣಿಗೆ ಅವಶ್ಯಕತೆ ಇದೆ. ಈಗಾಗಲೇ ಹಲವಾರು ಕಾರ್ಯಕ್ರಮ ರೂಪಿಸಲಾಗಿದೆ. ಇನ್ನಷ್ಟು ಅಭಿವೃದ್ಧಿ ಮಾಡಲು ನವೀಕೃತ ಮಾಸ್ಟರ್‌ ಪ್ಲ್ಯಾನ್ ರೂಪಿಸಿ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗುವುದು. -ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.