“Desai” ಚಿತ್ರದ ಡಬ್ಬಿಂಗ್ ಮುಗಿಸಿದ ಅಥಣಿ ಶಾಸಕ ಲಕ್ಷ್ಮಣ ಸವದಿ


Team Udayavani, Jan 2, 2024, 11:28 PM IST

la”Desai” ಚಿತ್ರದ ಡಬ್ಬಿಂಗ್ ಮುಗಿಸಿದ ಅಥಣಿ ಶಾಸಕ ಲಕ್ಷ್ಮಣ ಸವದಿ

ಮಹಾಲಿಂಗಪುರ : ಬಾಗಲಕೋಟೆಯ ಮಹಾಂತೇಶ ಚೋಳಚಗುಡ್ಡ ಕಥೆ ಮತ್ತು ನಿರ್ಮಾಣದ ದೇಸಾಯಿ ಚಿತ್ರದಲ್ಲಿ ಅಥಣಿ ಶಾಸಕ ಲಕ್ಷ್ಮಣ ಸವದಿ ಮೊದಲ ಬಾರಿಗೆ ಬಣ್ಣ ಹಚ್ಚಿದ್ದಾರೆ.

2023 ಅಕ್ಟೋಬರ್ 1 ರಂದು ಮಹಾಲಿಂಗಪುರ ಪಟ್ಟಣದ ಗೋಕಾಕ್ ರಸ್ತೆಯಲ್ಲಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿನ ಕುಸ್ತಿ ಮೈದಾನದಲ್ಲಿ ನಡೆದ ದೇಸಾಯಿ ಚಿತ್ರದ ಚಿತ್ರೀಕರಣದಲ್ಲಿ ಶಾಸಕ ಲಕ್ಷ್ಮಣ ಸವದಿ ಭಾಗವಹಿಸಿ ಅಭಿನಯಿಸಿದ್ದರು.

ಇದೇ ಮೊದಲ ಬಾರಿಗೆ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ದೇಸಾಯಿ ಚಿತ್ರದಲ್ಲಿನ ಅತಿಥಿ ಪಾತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಲಕ್ಷ್ಮಣ ಸವದಿ ಅಭಿನಯದ ದೃಶ್ಯಗಳನ್ನು ಚಿತ್ರದ ನಿರ್ದೇಶಕ ನಾಗಿರಡ್ಡಿ ಅವರು ಸೆರೆಹಿಡಿದುಕೊಂಡಿದ್ದರು. ಚಿತ್ರಿಕರಣ ಮುಗಿಸಿರುವ ಚಿತ್ರತಂಡ ಕಳೆದ ಒಂದು ವಾರದಿಂದ ಡಬ್ಬಿಂಗ್ (ಮಾತಿನ ಮರುಲೇಪನ) ಕಾರ್ಯವನ್ನು ಬೆಂಗಳೂರು ಚಾಮುಂಡೇಶ್ವರಿ ಸ್ಟೂಡಿಯೋ ದಲ್ಲಿ ಭರದಿಂದ ಸಾಗಿದೆ.ಮಂಗಳವಾರ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ತಮ್ಮ ಅಭಿನಯದ ದೃಶ್ಯಗಳ ಡಬ್ಬಿಂಗ್ ಮುಗಿಸಿದ್ದಾರೆ.

ಬಾಗಲಕೋಟೆಯ ಮಹಾಂತೇಶ ಚೋಳಚಗುಡ್ಡ ಅವರ ಕಥೆ ನಿರ್ಮಾಣದ ದೇಸಾಯಿ ಚಿತ್ರವು ಸಂಪೂರ್ಣ ಉತ್ತರ ಕರ್ನಾಟಕದ ಕಥೆಯಾಗಿದ್ದು, ಚಿತ್ರದಲ್ಲಿ ಲವ್ 360 ಚಿತ್ರದ ಖ್ಯಾತಿಯ ದಾವಣಗೆರೆಯ ಡಾ.ಪ್ರವೀಣಕುಮಾರ್ ನಾಯಕನಾಗಿ, ರಾಧ್ಯಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಛಾಯಾಗ್ರಹಕ ಪಿ.ಕೆ.ಎಚ್ ದಾಸ ಅವರ ಛಾಯಾಗ್ರಹಣ, ಮಾಸ ಮಾದ ಅವರ ಸಾಹಸ ಸಂಯೋಜನೆ, ಸಾಯಿ ಕಾರ್ತಿಕ ಅವರ ಸಂಗೀತ ಚಿತ್ರಕ್ಕಿದೆ.

ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ಚಿತ್ರದಲ್ಲಿ ಬರುವ ಕುಸ್ತಿ ಪಂದ್ಯಾವಳಿ ವಿಜೇತ ನಾಯಕನಿಗೆ ಪ್ರಶಸ್ತಿ ಪ್ರಧಾನ ಮಾಡುವ ಮುಖ್ಯ ಅತಿಥಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ‌‌

ಚಿತ್ರದ ಸಂಪೂರ್ಣ ಚಿತ್ರೀಕರಣವನ್ನು ಬಾಗಲಕೋಟೆ ಜಿಲ್ಲೆಯ ವಿವಿಧ ಸ್ಥಳಗಳಲ್ಲಿಯೇ ನಡೆಸಲಾಗಿದೆ. ಫೆಬ್ರವರಿ ತಿಂಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುವದಾಗಿ ಚಿತ್ರದ ಕಥೆಗಾರ ನಿರ್ಮಾಪಕ ಮಹಾಂತೇಶ ಚೋಳಚಗುಡ್ಡ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.