![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ನಾಲ್ಕು ಚಿನ್ನದ ಪದಕ- ಶೈಕ್ಷಣಿಕ ಸಾಧನೆಗೆ ಆರ್ಥಿಕ ಸಮಸ್ಯೆ ತೊಡಕಲ್ಲ: ಆರತಿ
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಇರುವುದರಿಂದ ಹೆಚ್ಚು ಸಹಕಾರಿ ಆಗಿದೆ ಎನ್ನುತ್ತಾಳೆ.
Team Udayavani, Mar 12, 2024, 10:03 AM IST
![ನಾಲ್ಕು ಚಿನ್ನದ ಪದಕ- ಶೈಕ್ಷಣಿಕ ಸಾಧನೆಗೆ ಆರ್ಥಿಕ ಸಮಸ್ಯೆ ತೊಡಕಲ್ಲ: ಆರತಿ](https://www.udayavani.com/wp-content/uploads/2024/03/Bagalk-620x355.jpg)
ಉದಯವಾಣಿ ಸಮಾಚಾರ
ವಿಜಯಪುರ: ಕಲಿಯುವ ಛಲ ಇದ್ದಲ್ಲಿ ಆರ್ಥಿಕ ಸಂಕಷ್ಟ ಎಂಬುದು ಶೈಕ್ಷಣಿಕ ಸಾಧನೆಗೆ ಎಂದೂ ತೊಡಕಲ್ಲ. ಸ್ವಯಂ ನಾನೇ ಆರ್ಥಿಕ ದುರ್ಬಲ ಕುಟುಂಬದ ಹಿನ್ನೆಲೆಯಿಂದ ಬಂದರೂ ಇರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ನಾಲ್ಕು ಚಿನ್ನದ ಪದಕ ಪಡೆದಿರುವುದು ಸಾಕ್ಷಿ.
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ 4 ಚಿನ್ನದ ಪದಕಗಳು ಹಾಗೂ ಎರಡು ನಗದು ಪುರಸ್ಕಾರ ಸಹಿತ ಕನ್ನಡ ಅಧ್ಯಯನ ವಿಭಾಗದಲ್ಲಿ ಸ್ನಾತಕೋತ್ತರ ವಿಭಾಗದಲ್ಲಿ ಪದವಿ ಪಡೆದಿರುವ ಆರತಿ ಸವ್ವಾಸೆ ಮಾತು.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ರಹಿಮತ್ತೂರು ಎಂಬ ಗ್ರಾಮೀಣ ಹಿನ್ನೆಲೆಯಿಂದ ಬಂದಿರುವ ಆರತಿ, ನಾನೇನು
ಆರ್ಥಿಕವಾಗಿ ಸದೃಢ ಕುಟುಂಬದ ಹಿನ್ನೆಲೆಯಿಂದ ಬಂದವಳಲ್ಲ. ನನ್ನಪ್ಪ ಲಕ್ಷ್ಮಣ, ತಾಯಿ ಕುಲಬಾಯಿ ಇಬ್ಬರೂ ಅಕ್ಷರ
ಬಲ್ಲವರಲ್ಲ. ಕೇವಲ 6 ಎಕರೆ ಜಮೀನಿದ್ದು ಕಬ್ಬು ಬೆಳೆಯುತ್ತೇವೆ. ಇರುವ ಜಮೀನಿನಲ್ಲೇ ನಾನು ಸೇರಿದಂತೆ ಮೂವರು ಮಕ್ಕಳನ್ನು ಓದಿಸಿದ್ದಾರೆ.
ಓದುವ ಹಂಬಲ ಇದ್ದ ನಾನು ಬಡತನವನ್ನು ಲೆಕ್ಕಿಸದೇ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಇದ್ದುಕೊಂಡು, ಬದ್ಧತೆ ಹಾಗೂ
ಶ್ರದ್ಧೆಯಿಂದ ಓದಿಯೇ ಸಾಧನೆ ಮಾಡಿದ್ದೇನೆ. ನಮ್ಮ ಭಾಗದಲ್ಲೇ ಮಹಿಳೆಯರಿಗೆ ಉನ್ನತ ಶಿಕ್ಷಣ ಪಡೆಯಲು ಅವಕಾಶ ಆಗಿರುವ
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಇರುವುದರಿಂದ ಹೆಚ್ಚು ಸಹಕಾರಿ ಆಗಿದೆ ಎನ್ನುತ್ತಾಳೆ.
ಗ್ರಾಮೀಣ ಭಾಗದಿಂದ ಬರುವವರಿಗೆ, ಅದರಲ್ಲೂ ಮಹಿಳೆಯರಿಗೆ ಸಮಸ್ಯೆ ಇರುವುದು ನಿಜವೇ ಆದರೂ ಅವುಗಳನ್ನು ಮೆಟ್ಟಿ ನಿಂತಾಗಲೇ ನಮ್ಮ ಸಾಧನೆಗೂ ಅರ್ಥ ಬರುತ್ತದೆ ಎನ್ನುವ ಆರತಿ, ಕನ್ನಡ ನೆಲದಲ್ಲಿ ಕನ್ನಡ ಉಳಿಸುವುದು ಇಂದಿನ ಸವಾಲಾಗಿರುವ ಕಾರಣ ಕನ್ನಡ ನನ್ನ ಅಯ್ಕೆಯಾಗಿತ್ತು ಎನ್ನುತ್ತಾಳೆ.
ಪಿಎಚ್ಡಿ ಸಂಶೋಧನೆ ನಡೆಸಿ ಕನ್ನಡ ಕಟ್ಟುವ ಕೆಲಸ ಮಾಡುವ ಉಪನ್ಯಾಸಕಿ ಆಗಬೇಕು. ಅಕ್ಷರ ಲೋಕದ ಪರಿವೆ ಇಲ್ಲದ ಹೆತ್ತವರ ಆಸೆ, ಆಕಾಂಕ್ಷೆಗಳಿಗೆ ಮನ್ನಣೆ ನೀಡಬೇಕು ಎಂಬುದು ನನ್ನ ಮುಂದಿರುವ ಗುರಿ ಎಂದು ಮನದಾಳ ತೆರೆದಿಟ್ಟಿದ್ದಾಳೆ.
*ಜಿ.ಎಸ್.ಕಮತರ
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.