ಆಯುಷ್ಮಾನ್ ಕಾರ್ಡ್ನಿಂದ ಉಚಿತ ಕೋವಿಡ್ ಚಿಕಿತ್ಸೆ
Team Udayavani, Jul 2, 2020, 11:28 AM IST
ಬಾಗಲಕೋಟೆ: ಆಯುಷ್ಮಾನ್ ಕಾರ್ಡ್ ನೀಡಲು ಜಿಲ್ಲಾಧಿಕಾರಿ ಕ್ಯಾ.ಡಾ| ಕೆ. ರಾಜೇಂದ್ರ ಚಾಲನೆ ನೀಡಿದರು.
ಬಾಗಲಕೋಟೆ: ಆಯುಷ್ಮಾನ್ ಕಾರ್ಡ್ನಿಂದ ಜಿಲ್ಲೆಯ 26 ಖಾಸಗಿ ಆಸ್ಪತ್ರೆಗಳಲ್ಲಿಯೂ ಕೋವಿಡ್ -19 ಸೋಂಕಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ. ರಾಜೇಂದ್ರ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ಆಯುಷ್ಮಾನ್ ಕಾರ್ಡ್ ನೀಡುವ ಕಾರ್ಯಕ್ಕೆ ಥಮ್ ನೀಡಿ ಕಾರ್ಡ್ ಪಡೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಬಿಪಿಎಲ್, ಎಪಿಎಲ್ ಹಾಗೂ ಯಾವ ಪಡಿತರ ಕಾರ್ಡ್ ಇಲ್ಲದವರಿಗೂ ಈ ಆಯುಷ್ಮಾನ್ ಕಾರ್ಡ್ ಪಡೆಯಬಹುದಾಗಿದೆ. ವಿವಿಧ ಸರ್ಕಾರಿ ನೌಕರರು ಸಹ ಈ ಕಾರ್ಡ್ ಪಡೆಯಬಹುದು. ಈ ಕಾರ್ಡ್ ಮೂಲಕ ಕೋವಿಡ್ ಚಿಕಿತ್ಸೆಗೆ ಆಯ್ಕೆಯಾದ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದರು.
ಜಿಲ್ಲೆಯಲ್ಲಿರುವ 198 ಗ್ರಾಪಂ, 6 ತಾಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಹಾಗೂ 120 ಸಾಮಾನ್ಯ ನಾಗರಿಕ ಸೇವಾ ಕೇಂದ್ರ (ಸಿಎಸ್ಸಿ)ಗಳಲ್ಲಿ ಆಧಾರ್ ಕಾರ್ಡ್ ನಂಬರ್ ನೀಡಿ ಆಯುಷ್ಮಾನ್ ಕಾರ್ಡ್ ಪಡೆದುಕೊಳ್ಳಬಹುದು ಎಂದರು. ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಸೇವಾ ಸಿಂಧು ಜಿಲ್ಲಾ ವ್ಯವಸ್ಥಾಪಕ ಸ್ವಾಗತ ಗುಡೆಗುಡಿ, ಸಾಮಾನ್ಯ ಸೇವಾ ಕೇಂದ್ರದ ಜಿಲ್ಲಾ ವ್ಯವಸ್ಥಾಪಕ ಚೇತನ ಪಟ್ಟಣಶೆಟ್ಟಿ, ಸಕಾಲದ ಲಕ್ಷ್ಮೀ ಕಾಂತ ಜ್ಯೋತೆನ್ನವರ, ವಿಎಲ್ಇ ಹನಿಫ್ ಇನಾಮದಾರ ಇದ್ದರು.
ಆಯ್ಕೆಯಾದ ಆಸ್ಪತ್ರೆಗಳು
ಬಾಗಲಕೋಟೆ ನಗರದ ಧನುಷ್ ಆಸ್ಪತ್ರೆ, ಕೆರೂಡಿ ಆಸ್ಪತ್ರೆ, ಶಾಂತಿ ಆಸ್ಪತ್ರೆ, ದಡ್ಡೇನವರ ಆಸ್ಪತ್ರೆ, ಆಶೀರ್ವಾದ ಆಸ್ಪತ್ರೆ, ಕಟ್ಟಿ ಆಸ್ಪತ್ರೆ, ಸ್ಪಂದನಾ ಆಸ್ಪತ್ರೆ, ಸಂಜೀವಿನಿ ಮಕ್ಕಳ,
ಕಣ್ಣು ಆಸ್ಪತ್ರೆ, ಪಾಟೀಲ್ ಮೆಡಿಕೇರ್ ಆಸ್ಪತ್ರೆ, ಕುಂಟೋಜಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ, ಗುಳೇದ ಆಥ್ರೋಕೇರ್ ಆಸ್ಪತ್ರೆ, ಶಕುಂತಲಾ ಆಸ್ಪತ್ರೆ, ಆಶ್ರಯ ಆಸ್ಪತ್ರೆ, ಕೆರೂಡಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ, ಕುಮಾರೇಶ್ವರ ಆಸ್ಪತ್ರೆ, ಮಹಾಲಿಂಗಪುರದ ವೆಂಕಟೇಶ ಆಸ್ಪತ್ರೆ, ಆರೋಗ್ಯಧಾಮ ಆಸ್ಪತ್ರೆ, ಬೆಳಗಲ್ ಸರ್ಜಿಕಲ್ ಕ್ಲಿನಿಕ್, ರಿತಿ ಲೈಫ್ ಕೇರ್ ಆಸ್ಪತ್ರೆ, ಬಾದಾಮಿಯ
ಕಾರೂಡಗಿಮಠ ಮೆಮೋರಿಯಲ್ ಆಸ್ಪತ್ರೆ, ಮುಧೋಳನ ಸಾಯಿ ಆಧಾರ ಆಸ್ಪತ್ರೆ, ಶಾರದಾ ಆಥೋಸ್ಪೆಶಾಲಿಟಿ ಆಸ್ಪತ್ರೆ, ರಬಕವಿಯ ತ್ರಿಶಲಾದೇವಿ ಸೂಪರ್ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ, ಆಥೋಕೇರ್ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ, ಇಳಕಲ್ಲಿನ ಮಹಾಂತೇಶ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ತೇರದಾಳದ ಪದ್ಮಾ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆ ಪಡೆದುಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್