ಅನಾಥ ಮಕ್ಕ ಳಿಗೆ ಹುಚ್ಚೇಶ್ವರ ಶ್ರೀಗಳಿಂದ ಉಚಿತ ಶಿಕ್ಷಣ
ಕೊರೊನಾದಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳ ಸಂಕಷ್ಟಕ್ಕೆ ಸ್ಪಂದನೆ
Team Udayavani, May 24, 2021, 5:24 PM IST
ಶ್ರೀಶೈಲ ಕೆ. ಬಿರಾದಾರ
ಬಾಗಲಕೋಟೆ: ಕೊರೊನಾ ಎರಡನೇ ಅಲೆ ಎಂಬ ಮಹಾಮಾರಿ ಹಲವರನ್ನು ಹಲವು ರೀತಿಯ ಸಂಕಷ್ಟಕ್ಕೆ ದೂಡುತ್ತಿದೆ. ಇಡೀ ಕುಟುಂಬವನ್ನು ಬಲಿ ಪಡೆದು ಮಕ್ಕಳನ್ನು ಅನಾಥ ಮಾಡುತ್ತಿದೆ. ಕೊರೊನಾಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಜಿಲ್ಲೆಯ ಪ್ರತಿಷ್ಠಿತ ಮಠವೊಂದು ಮುಂದೆ ಬಂದಿದೆ.
ಹೌದು. ಹುನಗುಂದ ತಾಲೂಕಿನ ಕಮತಗಿ-ಕೋಟೆಕಲ್ದ ಪ್ರತಿಷ್ಠಿತ ಹುಚ್ಚೇಶ್ವರ ಸಂಸ್ಥಾನಮಠದ ಪೀಠಾಧ್ಯಕ್ಷರೂ ಹಾಗೂ ಶ್ರೀ ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಆಗಿರುವ ಶ್ರೀ ಹುಚ್ಚೇಶ್ವರ ಸ್ವಾಮೀಜಿ ಇಂತಹದೊಂದು ವಿನೂತನ ಸೇವೆಗೆ ಮುಂದಾಗಿದ್ದು, ಇಂತಹ ಸಂಕಷ್ಟಕ್ಕೊಳಗಾದ ಮಕ್ಕಳು ಜಿಲ್ಲೆಯ ಯಾವುದೇ ಭಾಗದಲ್ಲಿರಲಿ ಅವರನ್ನು ಪತ್ತೆ ಮಾಡಲು ಭಕ್ತವೃಂದಕ್ಕೆ ನಿರ್ದೇಶನ ನೀಡಿದ್ದಾರೆ.
ಸಂಪೂರ್ಣ ಉಚಿತ ಶಿಕ್ಷಣ: ಕೊರೊನಾ ದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸವನ್ನು ಶ್ರೀಮಠ ಹಾಗೂ ಹುಚ್ಚೇಶ್ವರ ವಿದ್ಯಾವರ್ಧಕ ಸಂಘ ನೋಡಿಕೊಳ್ಳಲಿದೆ. ಕೋವಿಡ್ ಕಾರಣದಿಂದ ಪೋಷಕರನ್ನು ಕಳೆದುಕೊಂಡು ನೋವಿನಲ್ಲಿರುವ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಈ ರೀತಿ ತೊಂದರೆ ಯಲ್ಲಿರುವ ಮಕ್ಕಳ ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದು ಶ್ರೀಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ