ಉಕ್ಕಿ ಹರಿಯುತ್ತಿರುವ ಘಟಪ್ರಭೆ : ಮತ್ತೇ ಪ್ರವಾಹ ಸಂಕಟ ಪ್ರಾರಂಭ

ಮೂರು ಸೇತುವೆಗಳು ಜಲಾವೃತ

Team Udayavani, Jul 23, 2021, 8:44 PM IST

dgdsgreter

ಮಹಾಲಿಂಗಪುರ: ಮಹಾರಾಷ್ಟ್ರದಲ್ಲಿ ನಿರಂತರ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಿರಣ್ಯಕೇಶಿ ನದಿಯು ತುಂಬಿ ಹರಿದು ಧೂಪದಾಳ ಜಲಾಶಯ ಮಾರ್ಗವಾಗಿ ಘಟಪ್ರಭಾ ನದಿಗೆ ಹಾಗೂ ಹಿಡಕಲ್ ಜಲಾಶಯದಿಂದಲೂ ಘಟಪ್ರಭಾ ನದಿಗೆ ನೀರು ಬಿಟ್ಟಿರುವ ಕಾರಣ ಘಟಪ್ರಭಾ ನದಿಯು ಉಕ್ಕಿಹರಿಯುತ್ತಿರುವ ಕಾರಣ ಶುಕ್ರವಾರ ಸಮೀಪದ ಢವಳೇಶ್ವರ, ನಂದಗಾಂವ, ಮಿರ್ಜಿ ಸೇರಿ ಮೂರು ಸೇತುವೆಗಳು ಜಲಾವೃತವಾಗಿವೆ.

ಶುಕ್ರವಾರ ಸಂಜೆಯ ಮಾಹಿತಿಯಂತೆ ಘಟಪ್ರಭಾ ನದಿಗೆ ಒಂದು ಲಕ್ಷ ಕ್ಯೂಸೆಕ್ ನೀರು ಹರಿದುಬರುತ್ತಿದೆ. ಶುಕ್ರವಾರ ಸಂಜೆ ಗೋಕಾಕ-ಲೋಳಸೂರ ಸೇತುವೆಯು ಜಲಾವೃತವಾಗಿದೆ. ಢವಳೇಶ್ವರ, ನಂದಗಾಂವ, ಮಿರ್ಜಿ ಸೇರಿ ಮೂರು ಸೇತುವೆಗಳು ಜಲಾವೃತವಾದ ಕಾರಣ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಅವರಾದಿ, ಯರಗುದ್ರಿ, ತಿಮ್ಮಾಪೂರ, ಅರಳಿಮಟ್ಟಿ, ವೆಂಕಟಾಪೂರ, ಬೀಸನಕೊಪ್ಪ, ಢವಳೇಶ್ವರ, ಕುಲಗೋಡ, ಹುಣಶ್ಯಾಳಪಿವಾಯ್, ಮುಧೊಳ ತಾಲೂಕಿನ ಮಿರ್ಜಿ, ಚನ್ನಾಳ, ಒಂಟಗೋಡಿ ಸೇರಿದಂತೆ ಹತ್ತಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿವೆ. ಪ್ರಸಕ್ತ ವರ್ಷ ಒಂದು ತಿಂಗಳ ಅಂತರದಲ್ಲಿ ಎರಡನೇ ಬಾರಿಗೆ ಸೇತುವೆಗಳು ಮುಳುಗಡೆಯಾಗಿವೆ.

ಆತಂಕದಲ್ಲಿ ಗ್ರಾಮಸ್ಥರು :

ಮಹಾರಾಷ್ಟ್ರ ಮತ್ತು ಬೆಳಗಾವಿ ಗಡಿಭಾಗದಲ್ಲಿ ಮಳೆ ಹೀಗೆ ಮುಂದುವರೆದರೆ ಶನಿವಾರ ಸಂಜೆಯೊಳಗೆ ೨೦೧೯ರಂತೆ ಮಹಾಪ್ರವಾಹ ಬಂದು ನಂದಗಾಂವ-ಢವಳೇಶ್ವರ ಗ್ರಾಮಗಳು ಮುಳಗಡೆಯಾಗುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಗ್ರಾಮಸ್ಥರಲ್ಲಿ ಮತ್ತೇ ಮಹಾಪ್ರವಾಹದ ಆತಂಕ ಎದುರಾಗಿದೆ.

ಶಾಸಕರು-ಅಧಿಕಾರಿಗಳ ಭೇಟಿ :

ಪ್ರವಾಹ ಹೆಚ್ಚಾಗುತ್ತಿರುವ ಮಾಹಿತಿ ಬರುತ್ತಿದ್ದಂತೆ ಗುರುವಾರ ಸಂಜೆ ೬ಕ್ಕೆ ತೇರದಾಳ ಶಾಸಕ ಸಿದ್ದು ಸವದಿ, ಜಮಖಂಡಿ ಎಸಿ ಸಿದ್ದು ಹುಲ್ಲೋಳ್ಳಿ, ರಬಕವಿ-ಬನಹಟ್ಟಿ ತಹಶೀಲ್ದಾರ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ನಂದಗಾಂವ ಮತ್ತು ಢವಳೇಶ್ವರ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಸಕ ಸಿದ್ದು ಸವದಿ ಮಾತನಾಡಿ ಬೆಳಗಾವಿ ಮತ್ತು ಮಹಾರಾಷ್ಟ್ರ ರಾಜ್ಯದಲ್ಲಿನ ನಿರಂತರ ಮಳೆಯಿಂದಾಗಿ ಪ್ರವಾಹ ಬರುತ್ತಿದೆ. ನಂದಗಾಂವ ಮತ್ತು ಢವಳೇಶ್ವರ ಗ್ರಾಮಗಳ ನದಿಪಾತ್ರದಲ್ಲಿನ ಜನತೆಯು ಸುರಕ್ಷತಾ ದೃಷ್ಠಿಯಿಂದ ಕಾಳಜಿ ಕೇಂದ್ರ, ಸುರಕ್ಷೀತ ಪ್ರದೇಶದಲ್ಲಿ ಶಾಲೆಗಳಿಗೆ ಸ್ಥಳಾಂತರಗೊಳ್ಳಬೇಕು. ಜಾನುವಾರುಗಳನ್ನು ಸಹ ಸ್ಥಳಾಂತರಗೊಳಿಸಿ ಸುರಕ್ಷೀತವಾಗಿರಬೇಕು.

ಯಾರು ಅಲಕ್ಷ್ಯ ಮಾಡಬಾರದು. ಶನಿವಾರ ಮುಂಜಾನೆ ನಂದಗಾಂವ ಮತ್ತು ತಮದಡ್ಡಿ ಗ್ರಾಮಗಳಿಗೆ ಬೋಟ ವ್ಯವಸ್ಥೆಯನ್ನು ಕಲ್ಪಿಸಲಾಗುವದು. ಗ್ರಾಮಸ್ಥರು ಜಾಗೃತರಾಗಿದ್ದು, ಪ್ರವಾಹ ಪರಿಣಾಮ ಬೀರುವ ಮುನ್ನವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವದು ಉತ್ತಮ.  ಪ್ರವಾಹವನ್ನು ಎದುರಿಸಲು ನಮ್ಮ ತಾಲೂಕಾ ಆಡಳಿತವು ಸರ್ವಸನ್ನದ್ಧವಾಗಿದೆ ಎಂದರು.

ಜಮಖಂಡಿ ಎಸಿ ಸಿದ್ದು ಹುಲ್ಲೋಳ್ಳಿ ಮಾತನಾಡಿ ಪ್ರವಾಹ ಪೀಡಿತ ಪ್ರತಿಯೊಂದು ಗ್ರಾಮಗಳಿಗೆ ನೊಡಲ್ ಅಧಿಕಾರಿಗಳನ್ನು ನೇಮಕಗೊಳಿಸಲಾಗಿದೆ. ಶನಿವಾರ ನೋಡೆಲ್ ಅಧಿಕಾರಿಗಳು, ಗ್ರಾಪಂ ಅಧಿಕಾರಿಗಳು, ಶಾಲಾಶಿಕ್ಷಕರು, ಅಂಗನವಾಡಿ ಆಶಾ ಕಾರ್ಯಕರ್ತೆಯರು, ಗ್ರಾಮದಲ್ಲಿ ಪ್ರವಾಹ ಕಮೀಟಿಗಳ ಸಭೆ ನಡೆಸಿ ಪ್ರವಾಹ ಎದರಿಸಲು ಬೇಕಾದ ಎಲ್ಲಾ ಅಗತ್ಯಕ್ರಮಗಳನ್ನು ಕೈಗೊಳ್ಳಲಾಗುವದು, ಕಾಳಜಿಕೇಂದ್ರಗಳಲ್ಲಿ ಊಟ ವ್ಯವಸ್ಥೆಗೆ ಬೇಕಾದ ಸಿದ್ದತೆಗಳನ್ನು ಮಾಡಲಾಗುವದು ಎಂದರು.

ರಬಕವಿ-ಬನಹಟ್ಟಿ ತಹಶೀಲ್ದಾರ ಸಂಜಯ ಇಂಗಳೆ, ಬನಹಟ್ಟಿ ಸಿಪಿಆಯ್ ಜೆ.ಕರುಣೇಶಗೌಡ, ನೊಡೆಲ್ ಅಧಿಕಾರಿಗಳಾದ ಎಚ್.ಎಸ್.ಚಿತ್ತರಗಿ, ಡಿ.ಬಿ.ಪಠಾಣ, ಜಿಪಂ ಮಾಜಿ ಸದಸ್ಯ ಮಹಾಂತೇಶ ಹಿಟ್ಟಿನಮಠ, ತೇರದಾಳ ಮತಕ್ಷೇತ್ರ ಯುವಘಟಕದ ಅಧ್ಯಕ್ಷ ಲಕ್ಕಪ್ಪ ಪಾಟೀಲ, ಬಿಜೆಪಿ ಮುಖಂಡರಾದ ಚನ್ನಪ್ಪ ಪಟ್ಟಣಶೆಟ್ಟಿ, ಪುರಸಭೆ ಸದಸ್ಯ ಚನ್ನಬಸು ಯರಗಟ್ಟಿ, ಠಾಣಾಧಿಕಾರಿ ವಿಜಯ ಕಾಂಬಳೆ, ಕಂದಾಯ ಅಧಿಕಾರಿ ಬಿ.ಆರ್.ತಾಳಿಕೋಟಿ, ಗ್ರಾಮಲೆಕ್ಕಾಧಿಕಾರಿ ತ್ರೀವೇಣಿ ದೇವರಮನಿ ಸೇರಿದಂತೆ ನಂದಗಾಂವ ಮತ್ತು ಢವಳೇಶ್ವರ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.