ಉಕ್ಕಿತು ಘಟಪ್ರಭೆ; 3 ಸೇತುವೆ ಜಲಾವೃತ
ಬಾಗಲಕೋಟೆ-ಬೆಳಗಾವಿ ಜಿಲ್ಲೆಗಳ ಸಂಪರ್ಕ ಕಡಿತ | ಹಿಡಕಲ್ ಜಲಾಶಯಕ್ಕೆ 17114 ಕ್ಯೂಸೆಕ್ ಒಳಹರಿವು
Team Udayavani, Jun 18, 2021, 6:53 PM IST
ಮಹಾಲಿಂಗಪುರ: ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಹಿರಣ್ಯಕೇಶಿ ನದಿ ತುಂಬಿ ಹರಿದು ಧೂಪದಾಳ ಜಲಾಶಯ ಮಾರ್ಗವಾಗಿ ಘಟಪ್ರಭಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಗುರುವಾರ ಹಿಡಕಲ್ ಜಲಾಶಯಕ್ಕೆ ಸುಮಾರು 17114 ಕ್ಯೂಸೆಕ್ ಒಳಹರಿವು ಇದೆ. ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿ ಮತ್ತು ಕಾಲುವೆಗಳಿಗೆ ನೀರನ್ನು ಬಿಟ್ಟಿರುವುದಿಲ್ಲ. ಗುರುವಾರ ಮಧ್ಯಾಹ್ನದ ಮಾಹಿತಿಯಂತೆ ಧುಪದಾಳ ಜಲಾಶಯಕ್ಕೆ ಸುಮಾರು 23 ಸಾವಿರ ಕ್ಯೂಸೆಕ್ ಒಳಹರಿವಿದೆ. ಧೂಪದಾಳ ಜಲಾಶಯದಿಂದ ಸುಮಾರು 20100 ಕ್ಯೂಸೆಕ್ ನೀರನ್ನು ಘಟಪ್ರಭಾ ನದಿಗೆ ಹಾಗೂ ಸುಮಾರು 1200 ಕ್ಯೂಸೆಕ್ ನೀರನ್ನು ಜಿಎಲ್ ಬಿಸಿ ಕಾಲುವೆಗೆ ಹರಿಸಲಾಗುತ್ತಿದೆ.
ಮತ್ತೇ ಪ್ರವಾಹ ಭೀತಿ: ಘಟಪ್ರಭಾ ನದಿಯ ಇಕ್ಕೆಲಗಳಲ್ಲಿಯ ಗ್ರಾಮಗಳು ಪ್ರವಾಹಕ್ಕೆ ತುತ್ತಾಗಲಿದ್ದು, ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಮೂರು ಸೇತುವೆಗಳು ಜಲಾವೃತ: ಘಟಪ್ರಭಾ ನದಿಯು ಉಕ್ಕಿ ಹರಿಯು ತ್ತಿರುವುದರಿಂದ ಬುಧವಾರ ರಾತ್ರಿಯಿಂದ ನಂದಗಾಂವ-ಅವರಾದಿ ಮತ್ತು ಅಕ್ಕಿಮರಡಿ-ಮಿರ್ಜಿ ಎರಡು ಸೇತುವೆ, ಢವಳೇಶ್ವರ-ಢವಳೇಶ್ವರ ಸೇತುವೆ ಗುರುವಾರ ಮಧ್ಯಾಹ್ನ ಜಲಾವೃತಗೊಂಡು ಬಾಗಲಕೋಟೆ-ಬೆಳಗಾವಿ ಜಿಲ್ಲೆಗಳ ಸಂಪರ್ಕ ಕಡಿತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು