ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
Team Udayavani, Jul 12, 2019, 8:21 AM IST
ಬೀಳಗಿ: ಯೋಧ ಭೀಮಸಿಂಗ್ ಪಾರ್ಥಿವ ಶರೀರದ ಎದುರು ತಾಯಿ, ಪತ್ನಿ ಮತ್ತು ಮಕ್ಕಳ ಆಕ್ರಂದನ ಮುಗಿಲು ಮುಟ್ಟಿತ್ತು.
ಬೀಳಗಿ: ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಹೃದಯಾಘಾತದಿಂದ ಮಂಗಳವಾರ (ಜು. 9) ನಿಧನರಾದ ಸಿಆರ್ಪಿಎಫ್ನಲ್ಲಿ ಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ಸುನಗ ತಾಂಡಾ ಯೋಧ ಭೀಮಸಿಂಗ್ ಸಿದ್ದಪ್ಪ ರಾಠೊಡ (53) ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಸುನಗ ತಾಂಡಾ ಪ್ರಾಥಮಿಕ ಶಾಲೆಯ ಹತ್ತಿರ ಗುರುವಾರ ಜರುಗಿತು.
ಜಮ್ಮು ಕಾಶ್ಮೀರದಿಂದ ಪುಣೆ ಮಾರ್ಗವಾಗಿ ಯೋಧನ ಪಾರ್ಥಿವ ಶರೀರ ಗುರುವಾರ ಸ್ವ-ಗ್ರಾಮಕ್ಕೆ ಆಗಮಿಸಿತು. ಬೀಳಗಿ ಕ್ರಾಸ್ ಕನಕ ವೃತ್ತಕ್ಕೆ ಆಗಮಿಸಿದ ಯೋಧನ ಪಾರ್ಥಿವ ಶರೀರವನ್ನು ತಹಶೀಲ್ದಾರ್ ಉದಯ ಕುಂಬಾರ ಹೂಗುಚ್ಚ ಸಮರ್ಪಿಸಿ ಸರಕಾರಿ ಗೌರವದೊಂದಿಗೆ ಬರಮಾಡಿಕೊಂಡರು. ನಂತರ ಸುನಗ ಕ್ರಾಸ್ ಬಳಿ ಜಿಲ್ಲಾಧಿಕಾರಿ ರಾಮಚಂದ್ರ ಆರ್, ಎಸ್ಪಿ ಲೋಕೇಶ ಜೆ. ಯೋಧನ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಸಹಸ್ರಾರು ಜನರ ದೇಶಭಕ್ತಿ ಘೋಷಣೆಯೊಂದಿಗೆ ಸುನಗ ಕ್ರಾಸ್ನಿಂದ ಸುನಗ ತಾಂಡಾವರೆಗೆ ಯೋಧನ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಮೆರವಣಿಗೆಯುದ್ದಕ್ಕೂ ಜನರು ಯೋಧನಿಗೆ ಅಂತಿಮ ನಮನ ಸಲ್ಲಿಸಿದರು.
ಮುಗಿಲು ಮುಟ್ಟಿದ ಆಕ್ರಂದನ: ಮೃತ ಯೋಧ ಭೀಮಸಿಂಗ್ ತಂದೆ-ತಾಯಿ, ಪತ್ನಿ. ಮಕ್ಕಳು ಸೇರಿದಂತೆ ಕುಟುಂಬದ ಸದಸ್ಯರು ಹಾಗೂ ಬಂಧು-ಮಿತ್ರರ ಆಕ್ರಂದನ ಮುಗಿಲುಮುಟ್ಟಿತ್ತು.
ಯೋಧ ಭೀಮಸಿಂಗ್ ಸಿಆರ್ಪಿಎಫ್ನಲ್ಲಿ ಕಳೆದ 28 ವರ್ಷಗಳಿಂದ ಸೇವೆಯಲ್ಲಿದ್ದರು. ಕಳೆದ ಆರು ತಿಂಗಳ ಹಿಂದೆ ಎಸ್ಐ ಆಗಿ ಬಡ್ತಿ ಹೊಂದಿದ್ದರು. ಮೃತ ಯೋಧರು ತಂದೆ-ತಾಯಿ, ಪತ್ನಿ, ಮೂವರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ.
ಅಂತಿಮ ನಮನ: ಮೋಡ ಕವಿದ ವಾತಾವರಣ, ತುಂತುರ ಮಳೆಯ ಹನಿಯ ಸಿಂಚನ, ನೂರಾರು ಜನರ ಆಶ್ರುತರ್ಪಣದ ನಡುವೆ ಯೋಧನ ಅಂತ್ಯಕ್ರಿಯೆ ವಿಧಿ- ವಿಧಾನಗಳು ಜರುಗಿದವು. ಅಂತ್ಯಕ್ರಿಯೆ ವೇಳೆ ಭೀಮಸಿಂಗ್ ಅಮರ್ ರಹೇ, ಬೋಲೋ ಭಾರತ ಮಾತಾಕೀ ಜೈ, ವಂದೇ ಮಾತರಂ ದೇಶಭಕ್ತಿಯ ಘೋಷಣೆ ಮುಗಿಲು ಮುಟ್ಟಿತ್ತು. ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯಿಂದ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಯೋಧನಿಗೆ ಅಂತಿಮ ಗೌರವ ಸಲ್ಲಿಸಲಾಯಿತು.
ಗಣ್ಯರ ದಂಡು: ತಹಶೀಲ್ದಾರ್ ಉದಯ ಕುಂಬಾರ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಬಾಯಕ್ಕ ಮೇಟಿ, ಜಿಪಂ ಸದಸ್ಯ ಹೂವಪ್ಪ ರಾಠೊಡ, ಕಸ್ತೂರಿ ಲಿಂಗಣ್ಣವರ್, ಸಿಪಿಐ ರವೀಂದ್ರ ಡಿ.ಬಿ., ಪಿಎಸ್ಐ ಶಿವಕುಮಾರ ಲೋಹಾರ, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಗೌಡ ಮಿರ್ಜಿ ಸೇರಿದಂತೆ ಅನೇಕ ಗಣ್ಯರು ಯೋಧನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ