ಗದ್ದಿಗೌಡ್ರು-ವೀಣಾ; ಇಬ್ಬರಲ್ಲಿ ಯಾರ್‌ ಗೆಲ್ತಾರಿ!

ಕುಂತಲ್ಲಿ-ನಿಂತಲ್ಲಿ ಫಲಿತಾಂಶದ ಬಗ್ಗೆಯೇ ಚರ್ಚೆ•ಅಭ್ಯರ್ಥಿಗಳಿಗೆ ಪ್ರತಿ ದಿನ ಕಳೆಯುವುದೂ ಕಷ್ಟ

Team Udayavani, May 11, 2019, 10:49 AM IST

bagalkote-1-tdy

ಬಾಗಲಕೋಟೆ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ, ಫಲಿತಾಂಶ ಈ ಬಾರಿ ಬಹಳ್‌ ಲೇಟ್ ಆಯ್ತುರೀ. ಯಾರು ಎಷ್ಟು ಲೀಡ್‌ ಒಳಗ್‌ ಗೆಲ್ಲಬಹುದು. ಯಾವ ಊರಾಗ್‌, ಯಾರಿಗಿ ಹೆಚ್ಚು ಮತ ಬಂದಿರಬಹುದು…

ಲೋಕಸಭೆ ಚುನಾವಣೆಯ ಕುರಿತು ಜಿಲ್ಲೆಯಲ್ಲಿ ನಿತ್ಯವೂ ಇಂತಹ ಚರ್ಚೆ ಸಾಮಾನ್ಯವಾಗಿದೆ. ಜಿಲ್ಲೆಯಲ್ಲಿ ಸಧ್ಯ ಮದುವೆ, ಸೀಮಂತ, ಜಾತ್ರೆ ಮುಂತಾದ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುತ್ತಿದ್ದು, ಈ ಎಲ್ಲ ಕಾರ್ಯಕ್ರಮಗಳಲ್ಲಿ ಸೇರುವ ಜನರು, ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆಯೇ ಚರ್ಚೆಯಲ್ಲಿ ತೊಡಗುತ್ತಿರುವುದು ಸಾಮಾನ್ಯವಾಗಿದೆ.

ಫಲಿತಾಂಶ ಬಹಳ್‌ ಲೇಟ್: ಕಳೆದ ಬಾರಿ ಮತದಾನವಾದ 15 ದಿನಗಳಲ್ಲಿ ಫಲಿತಾಂಶ ಬಂದಿತ್ತು. ಈ ಬಾರಿ ಬಹಳ ಲೇಟ್ ಆಯ್ತು ಎಂಬ ಬೇಸರದ ಮಾತುಗಳನ್ನು ಬಹುತೇಕರು ವ್ಯಕ್ತಪಡಿಸುತ್ತಿದ್ದಾರೆ. ಜತೆಗೆ ಫಲಿತಾಂಶದ ಕುರಿತು ತಮ್ಮದೇ ಆದ ಲೆಕ್ಕಾಚಾರಗಳನ್ನೂ ಬಿಚ್ಚಿಟ್ಟು, ಇವರೇ ಗೆಲ್ಲುತ್ತಾರೆ ಎಂಬ ವಾದ ಮಂಡಿಸುವ ಪ್ರಸಂಗಗಳೂ ನಡೆಯುತ್ತಿದೆ.

ಬೆಟ್ಟಿಂಗ್‌ ಕೂಡ ಜೋರು : ಈ ಬಾರಿ ಕಾಂಗ್ರೆಸ್‌ನ ವೀಣಾ ಕಾಶಪ್ಪನವರ ಅವರೇ ಗೆಲ್ಲುತ್ತಾರೆ ಎಂದು ಗೆಲುವು ಅತಿಯಾದ ವಿಶ್ವಾಸದಿಂದ ಬೆಟ್ಟಿಂಗ್‌ಗೆ ಇಳಿದರೆ, ಮೋದಿ ಅಲೆ, ಸಂಭಾವಿತ ನಡವಳಿಕೆ ಇರುವುದರಿಂದ ಬಿಜೆಪಿಯ ಗದ್ದಿಗೌಡರು ಗೆಲ್ಲುತ್ತಾರೆ ಎಂದು ಮತ್ತೆ ಕೆಲವರು ವಾದಿಸುತ್ತಾರೆ. ಈ ಕುತೂಹಲಭರಿತ ವಾದಗಳು, ಬೆಟ್ಟಿಂಗ್‌ ಹಚ್ಚಲೂ ಕಾರಣವಾಗುತ್ತಿವೆ. ಸಾಮಾನ್ಯರೂ ಸಹಿತ 1ರಿಂದ 5 ಸಾವಿರ ವರೆಗೆ ಬೆಟ್ಟಿಂಗ್‌ ಕಟ್ಟಿದರೆ, ಹಣವಂತರು, 50 ಸಾವಿರದಿಂದ 1 ಲಕ್ಷ ವರೆಗೂ ಬೆಟ್ಟಿಂಗ್‌ ಕಟ್ಟಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

ಯಾರ ಪಾಲಿಗೆ ಗುರು ಬಲ!: ಲೋಕಸಭೆ ಚುನಾವಣೆಯ ಫಲಿತಾಂಶ ಬಹಿರಂಗಗೊಳ್ಳಲು ಇನ್ನೂ 12 ದಿನ ಬಾಕಿ ಇವೆ. ಈ ಬಾರಿ ಮತ ಏಣಿಕೆ ನಡೆಯುವ ಮೇ 23 ಗುರುವಾರ ಇದ್ದು, ಯಾವ ಅಭ್ಯರ್ಥಿಗೆ ಗುರುವಾರದ ಗುರು ಬಲ ಇರಲಿದೆ ಎಂಬ ಚರ್ಚೆಯೂ ನಡೆಯುತ್ತಿದೆ.

ಮತದಾನದ ಬಳಿಕ ತಮ್ಮ ರಾಜಕೀಯ ಭವಿಷ್ಯ ಏನಾಗುತ್ತದೆ ಎಂದು, ಕೆಲವರು ಅಭ್ಯರ್ಥಿಗಳು ಜೋತಿಷ್ಯಿಗಳ ಮೋರೆ ಕೂಡಾ ಹೋಗಿದ್ದಾರೆ. ನಾನು ಗೆಲ್ಲುತ್ತೇನಾ- ಇಲ್ಲವಾ, ಗೆದ್ದರೆ ಎಷ್ಟು ಮತಗಳ ಅಂತರ ಇರಬಹುದು. ಮತಗಳ ಅಂತರ ಎಷ್ಟೇ ಇರಲಿ. ಇದೊಂದು ಬಾರಿ ಗೆಲ್ಲಬಹುದಾ ಎಂಬ ಪ್ರಶ್ನೆಗಳನ್ನು ಜೋತಿಷ್ಯಿಗಳ ಮುಂದಿಟ್ಟು, ಮೇ 23ರ ಭವಿಷ್ಯವನ್ನು ಈಗಲೇ ಕೇಳಿದವರೂ ಇದ್ದಾರೆ. ಜೋತಿಷ್ಯಿಗಳೂ, ಮತದಾನ ನಡೆದ ಏಪ್ರಿಲ್ 23ರ ದಿನ ಅಭ್ಯರ್ಥಿಗಳ ರಾಶಿ ಭವಿಷ್ಯ, ಮತ ಏಣಿಕೆ ನಡೆಯುವ ಮೇ 23ರ ದಿನದ ಕುರಿತು ಲೆಕ್ಕಾಚಾರ ಹಾಕಿ, ನೀವು ಗೆಲ್ತೀರಿ, ಗೆದ್ದರೂ ಅಂತರ ಬಹಳ ಕಡಿಮೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಕೋಡಿಹಳ್ಳಿ ಶ್ರೀ ಭವಿಷ್ಯದ ಕುರಿತೂ ಚರ್ಚೆ: ಮತದಾನದ ಮುಂಚೆ ಕೋಡಿಹಳ್ಳಿ ಶ್ರೀಗಳು ನುಡಿದ್ದ ಭವಿಷ್ಯವಾಣಿ ಕುರಿತೂ ಜಿಲ್ಲೆಯಲ್ಲಿ ತೀವ್ರ ಕುತೂಹಲದೊಂದಿಗೆ ಚರ್ಚೆ ನಡೆಯುತ್ತಿದೆ. ಸೆರೆಗೊಡ್ಡಿ ಬೇಡಿದವರ ಗೆಲುವು ಎಂದು ಕೋಡಿಹಳ್ಳಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಹೇಳಿದ್ದರು. ಇದು ಮಂಡ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಭವಿಷ್ಯ ಎಂದು ಕೆಲವರು ಹೇಳಿದರೆ, ಬಾಗಲಕೋಟೆ ಕ್ಷೇತ್ರಕ್ಕೂ ಇದು ಸಂಬಂಧಿಸಿದ್ದಾಗಿದೆ. ಪ್ರಚಾರದ ವೇಳೆ, ನಿಮ್ಮ ಮನೆ ಮಗಳು, ಸೆರಗೊಡ್ಡಿ ಬೇಡಿವೆ. ನನ್ನ ಉಡಿಗೆ ನಿಮ್ಮ ಮತ ಹಾಕಿ ಎಂದು ಕೇಳಿಕೊಂಡಿದ್ದ ವೀಣಾ ಕಾಶಪ್ಪನವರ ಕುರಿತೇ, ಕೋಡಿಹಳ್ಳಿ ಶ್ರೀಗಳು ಭವಿಷ್ಯ ನುಡಿದ್ದರು ಎಂದು ಕೆಲವರು ಹೇಳುತ್ತಿದ್ದಾರೆ.

ಒಟ್ಟಾರೆ, ಜಿಲ್ಲೆಯಲ್ಲಿ ಲೋಕಸಭೆ ಫಲಿತಾಂಶದ ಕುರಿತು ದಿನೇ ದಿನೇ ಕುತೂಹಲ ಹೆಚ್ಚುತ್ತಿದೆ. ಇನ್ನೂ ಎಷ್ಟು ದಿನ ಉಳಿತು ಎಂದು ನಿತ್ಯವೂ ಕೇಳುವ ಪ್ರಸಂಗ ನಡೆಯುತ್ತಿವೆ. ಬಾಗಲಕೋಟೆ ಲೋಕಸಭೆ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭೆ ಕ್ಷೇತ್ರಗಳಲ್ಲೂ ಬಿಜೆಪಿ ಹಾಗೂ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳ ಮಧ್ಯೆ ನೇರ ಪೈಪೋಟಿ ಏರ್ಪಟ್ಟಿತ್ತು. ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿದ ಕಾಂಗ್ರೆಸ್‌ನ ವೀಣಾ ಕಾಶಪ್ಪನವರ, ಸತತ 4ನೇ ಬಾರಿ ಗೆಲುವು ಸಾಧಿಸಬೇಕೆಂಬ ತವಕದಲ್ಲಿರುವ ಬಿಜೆಪಿ ಗದ್ದಿಗೌಡರ ಅವರ ಈ ಬಾರಿಯ ಗೆಲುವು-ಸೋಲಿನ ಫಲಿತಾಂಶ ತಿಳಿಯಲು ಇನ್ನೂ 12 ದಿನ ಕಾಯಲೇಬೇಕು.

•ಶ್ರೀಶೈಲ ಕೆ. ಬಿರಾದಾರ

 

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.