ನಾಳೆ ಕೃಷ್ಣೆಗಾಗಿ ನಿರ್ಣಾಯಕ ಗಾಂಧಿ ನಡಿಗೆ

ನಮ್ಮ ಯುಕೆಪಿ ಯೋಜನೆ ಆರು ದಶಕ ಕಳೆದರೂ ಪೂರ್ಣಗೊಳ್ಳುತ್ತಿಲ್ಲ.

Team Udayavani, Oct 1, 2021, 6:45 PM IST

ನಾಳೆ ಕೃಷ್ಣೆಗಾಗಿ ನಿರ್ಣಾಯಕ ಗಾಂಧಿ ನಡಿಗೆ

ಬಾಗಲಕೋಟೆ: ಕಳೆದ ಆರು ದಶಕಗಳಿಂದ ವಿಳಂಬವಾಗಿರುವ ಯುಕೆಪಿ ಯೋಜನೆ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಉತ್ತರ ಕರ್ನಾಟಕದ ಸ್ವಾಭಿಮಾನ ವೇದಿಕೆಯಿಂದ ಅ.2ರಂದು ಬೆಳಗ್ಗೆ 8 ಗಂಟೆಗೆ ಪಕ್ಷಾತೀತ ಪಾದಯಾತ್ರೆ ಆರಂಭಗೊಳ್ಳಲಿದೆ ಎಂದು ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆಯ ಹಿರಿಯರೂ ಆಗಿರುವ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಎಸ್‌.ಆರ್‌. ಪಾಟೀಲ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾದಯಾತ್ರೆ ಅನಗವಾಡಿಯ ಘಟಪ್ರಭಾ ನದಿಯಿಂದ ಆರಂಭಗೊಂಡು ಕೊರ್ತಿ ಕೊಲ್ಹಾರ ಸೇತುವೆ ಬಳಿಯ ಕೃಷ್ಣಾ ನದಿವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಆರು ದಶಕಗಳಿಂದ ವಿಳಂಬವಾದ ಈ ಯೋಜನೆ ತ್ವರಿತವಾಗಿ ಪೂರ್ಣಗೊಳಿಸುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಯೋಜನಾ ಸಂತ್ರಸ್ತರು, ಫಲಾನುಭವಿಗಳು ಅಲೆದು ಬಸವಳಿದಿದ್ದಾರೆ.

ಈ ಸಂದರ್ಭದಲ್ಲಿ ಮತ್ತೂಮ್ಮೆ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸದಿದ್ದರೆ ಕುಂಭಕರ್ಣ ನಿದ್ರೆಯಲ್ಲಿದ್ದ ಸರ್ಕಾರ ಸಂತ್ರಸ್ತರ ಆಶೋತ್ತರಗಳಿಗೆ ಬೆಲೆ ಕೊಡಲ್ಲ. ಹೀಗಾಗಿ ಸರ್ಕಾರದ ಕಣ್ಣು ತೆರೆಸುವ ದೃಷ್ಟಿಸುವ ನಾಡಿನ ಹಲವು ಸ್ವಾಮೀಜಿಗಳ ನೇತೃತ್ವದಲ್ಲಿ ಧರ್ಮಾತೀತ, ಜಾತ್ಯತೀತ ಹಾಗೂ ಪಕ್ಷಾತೀತವಾದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.

ಬಾಗಲಕೋಟೆ-ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳಿಂದ ಸಾಕಷ್ಟು ಸಂಖ್ಯೆಯ ಸ್ವಾಮೀಜಿಗಳು, ರೈತ ಸಂಘಟನೆಗಳ ಮುಖಂಡರು, ಸಾಮಾಜಿಕ ಕಾರ್ಯಕರ್ತರು, ಯುಕೆಪಿ ಸಂತ್ರಸ್ತರು, ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪಾದಯಾತ್ರೆ ಯಶಸ್ವಿಗೊಳಿಸಲಿದ್ದಾರೆಂದರು. ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ನಿಗದಿಪಡಿಸಿದ 3ನೇ ಹಂತದ 130 ಟಿಎಂಸಿ ನೀರಿನ ಸದ್ಭಳಕೆಯಾಗಬೇಕು.

15ಲಕ್ಷ ಎಕರೆ ಭೂಮಿಗೆ ನೀರಾವರಿ ಸೌಲಭ್ಯ ಸಿಗಬೇಕು. ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಭೂಮಿ, ಮನೆ, ಮಠ, ಆಸ್ತಿ-ಪಾಸ್ತಿ ಕಳೆದುಕೊಂಡವರಿಗೆ ರಾಷ್ಟ್ರೀಯ ಪುನರ್‌ ವಸತಿ ನೀತಿಯನ್ವಯ ಯೋಗ್ಯ-ನ್ಯಾಯಯುತ ಪರಿಹಾರ ನೀಡಬೇಕು. ಭೂ ಪರಿಹಾರ ಹಾಗೂ ಕಟ್ಟಡ ಪರಿಹಾರ ನೀಡುವಾಗ ಅನುಸರಿಸುವ ಸಬ್‌ ರೆಜಿ ಸ್ಟ್ರಾರ್‌ ಮಾರ್ಗಸೂಚಿ ಬೆಲೆ ಪರಿಷ್ಕರಿಸಿ ಬೆಲೆ ನಿಗದಿಪಡಿಸಬೇಕು. ಬೀಳಗಿಯಂತೆ ವಿಜಯಪುರ, ಬೆಳಗಾವಿ ಜಿಲ್ಲೆಗಳಿಗೂ ಮಾರ್ಗಸೂಚಿ ಬೆಲೆ ಹೆಚ್ಚಿಸಬೇಕು. ಕಳೆದ 15 ವರ್ಷಗಳಿಂದ ಹೆಚ್ಚಳ ಮಾಡಿಲ್ಲ ಎಂದರು.

3ನೇ ಹಂತದ ನೀರಾವರಿ ಯೋಜನೆಗೆ ಒಟ್ಟು 1.33 ಲಕ್ಷ ಎಕರೆ ಭೂಮಿ ಸ್ವಾಧೀನಕೊಳ್ಳಬೇಕಿದೆ. ಅದರಲ್ಲಿ 75 ಸಾವಿರ ಎಕರೆ ಫಲವತ್ತಾದ ಭೂಮಿ ವಶಕ್ಕೆ ಪಡೆಯಲಾಗುತ್ತಿದೆ. ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲಿ ಭೂ ಬೆಲೆ ಮಾರ್ಗದರ್ಶಿ ಬೆಲೆ ಪರಿಷ್ಕರಣೆಯಾಗಿಲ್ಲ. ಇದನ್ನು ತಕ್ಷಣ ಪರಿಷ್ಕರಣೆ ಡಬೇಕೆಂದು ಒತ್ತಾಯಿಸಿದರು. ಯುಕೆಪಿ 3ನೇ ಹಂತದ ಯೋಜನೆಗೆ 17 ಸಾವಿರ ಕೋಟಿ ಅನುದಾನ ನಿಗದಿ ಮಾಡಲಾಗಿತ್ತು.

ಈಗ 60 ಸಾವಿರ ಕೋಟಿ ಅಂದಾಜು ಮಾಡಲಾಗಿದೆ. ಸರ್ಕಾರದ ಈಗಿನ ಯುಕೆಪಿ ಕಾಳಜಿ ನೋಡಿದರೆ ಇನ್ನೂ ಮೂರು ದಶಕ ಬೇಕಾಗುತ್ತದೆ. ಇದೊಂದು ಶತಮಾನದ ಯೋಜನೆಯಾಗುವ ಭೀತಿ ಇದೆ ಎಂದರು. ಪಕ್ಕದ ತೆಲಂಗಾಣದಲ್ಲಿ ಕಾಲಕಾಲೇಶ್ವರ ಏತ ನೀರಾವರಿ ಯೋಜನೆ ಕೇವಲ ಮೂರೇ ವರ್ಷದಲ್ಲಿ ಪೂರ್ಣಗೊಳಿಸಿ ಇಡೀ ದೇಶಕ್ಕೆ ಮಾದರಿಯಾಗಿದೆ. ನಮ್ಮ ಯುಕೆಪಿ ಯೋಜನೆ ಆರು ದಶಕ ಕಳೆದರೂ ಪೂರ್ಣಗೊಳ್ಳುತ್ತಿಲ್ಲ. ಈಗ ನಮ್ಮದೇ ಭಾಗದ ಮುಖ್ಯಮಂತ್ರಿಗಳಿದ್ದಾರೆ, ಜಿಲ್ಲೆಯವರೇ ಆದ ಗೋವಿಂದ ಕಾರಜೋಳ ಜಲಸಂಪನ್ಮೂಲ ಸಚಿವರಾಗಿದ್ದಾರೆ. ಕೇಂದ್ರ-ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಈ ಯೋಜನೆ ಪೂರ್ಣಗೊಳಿಸಲು ಇದು ಸಕಾಲವಾಗಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಯೋಜನಾ ವೆಚ್ಚ ಎಷ್ಟು: ಮಾಜಿ ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ಯುಕೆಪಿ 3ನೇ ಹಂತದ ಯೋಜನೆಗಳಿಗೆ 50 ಸಾವಿರ ಕೋಟಿ ಬೇಕು ಎಂದು ಸರ್ಕಾರ ಹೇಳುತ್ತಿದೆ. ಹೊಸ ಭೂಸ್ವಾಧೀನ ಕಾಯ್ದೆ ಅನ್ವಯ ಸ್ವಾಧೀನಗೊಳ್ಳುವ ಭೂಮಿಗೆ ಕಾನೂನು ಬದ್ಧವಾಗಿ ಪರಿಹಾರ ನೀಡಲು ಎಷ್ಟು ಅನುದಾನ ಬೇಕೆಂಬುದನ್ನು ಸ್ಪಷ್ಟಪಡಿಸಬೇಕು. ಭೂಮಿ ಕಳೆದುಕೊಳ್ಳುವವರಷ್ಟೇ ಸಂತ್ರಸ್ತರಲ್ಲ. ಕೃಷಿ ಉಪ ಕಸಬುಗಳಿಂದ ಬದುಕುವವರೂ ಸಂತ್ರಸ್ತರು ಎಂದರು.

ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷ ಎಸ್‌.ಜಿ. ನಂಜಯ್ಯನಮಠ, ಮಾಜಿ ಸಚಿವ ಎಚ್‌.ವೈ. ಮೇಟಿ, ಕೆಪಿಸಿಸಿ ಕಾರ್ಯದರ್ಶಿ ಬಸವಪ್ರಭು ಸರನಾಡಗೌಡ, ಜಿಪಂ ಮಾಜಿ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ಮುಧೋಳದ ಕಾಂಗ್ರೆಸ್‌ ಮುಖಂಡ ಸತೀಶ ಬಂಡಿವಡ್ಡರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ ಹದ್ಲಿ, ಸಂತ್ರಸ್ತರ ಹೋರಾಟ ಸಮಿತಿಯ ಪ್ರಕಾಶ ಅಂತರಗೊಂಡ ಮುಂತಾದವರು ಉಪಸ್ಥಿತರಿದ್ದರು.

ಕಾವೇರಿ ಮತ್ತು ಮಹದಾಯಿ ನೀರು ಹಂಚಿಕೆ ಅಂತಿಮ ತೀರ್ಪಿನ ವಿಷಯ ಕೋರ್ಟ್‌ನಲ್ಲಿತ್ತು. ಆದರೂ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಈಗ ಕೃಷ್ಣಾ ನದಿ ನೀರು ಹಂಚಿಕೆಯ ಬ್ರಿಜೇಶಕುಮಾರ ನೇತೃತ್ವದ ನ್ಯಾಯಾಧಿಕರಣದ ಐತೀರ್ಪಿಗೆ ಅಧಿಸೂಚನೆ ಹೊರಡಿಸಲು ಮನವಿ ಮಾಡಿದರೆ, ವಿವಾದ ಕೋರ್ಟ್‌ನಲ್ಲಿದೆ ಎಂಬ ಸಬೂಬು ಹೇಳಲಾಗುತ್ತಿದೆ. ಅಧಿಸೂಚನೆ ಹೊರಡಿಸಲು ಯಾವುದೇ ತೊಂದರೆ ಇಲ್ಲ. ಕೇಂದ್ರ ಸರ್ಕಾರ ಕೂಡಲೇ ಅಧಿಸೂಚನೆ ಹೊರಡಿಸಬೇಕು.
*ಎಸ್‌.ಆರ್‌. ಪಾಟೀಲ,
ವಿರೋಧ ಪಕ್ಷದ ನಾಯಕ, ವಿಧಾನ ಪರಿಷತ್‌

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.