ಇನ್ನು ಹಳ್ಳಿ ಮನೆಯಿಂದಲೂ ಕಸ ಸಂಗ್ರಹ


Team Udayavani, Nov 30, 2019, 1:13 PM IST

bk-tdy-1

ಬಾಗಲಕೋಟೆ: ನಗರ ಪ್ರದೇಶದಲ್ಲಿ ಮನೆ-ಮನೆಗೆ ತೆರಳಿ ಕಸ ಸಂಗ್ರಹಿಸಿ, ಬಳಿಕ ಅದನ್ನು ಬೇರ್ಪಡಿಸಿ ಸಾವಯವ ಗೊಬ್ಬರ ತಯಾರಿಸುವ ಯೋಜನೆ, ಇನ್ನು ಗ್ರಾಮ ಮಟ್ಟದಲ್ಲೂ ನಡೆಯಲಿದೆ. ಇದಕ್ಕಾಗಿ ಬಹುಗ್ರಾಮ ಯೋಜನೆಯಡಿ ಈ ಕಾರ್ಯ ಕೈಗೊಳ್ಳಲು ಜಿಪಂ ಮುಂದಾಗಿದೆ.

ಜಿಲ್ಲೆಯ 15 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮನೆ-ಮನೆಗೆ ತೆರಳಿ ಕಸ ಸಂಗ್ರಹಿಸುವ ವ್ಯವಸ್ಥೆ ಜಾರಿಯಲ್ಲಿದೆ. ಆ ಕಸವನ್ನು ಘನ ತ್ಯಾಜ್ಯ ನಿರ್ವಹಣೆ ಕೇಂದ್ರಕ್ಕೆ ತಂದು, ಹಸಿ ಮತ್ತು ಒಣ ಕಸ ಬೇರ್ಪಡಿಸಲಾಗುತ್ತದೆ. ಹಸಿ-ಒಣ ಕಸದಿಂದ ಸಾವಯವ ಗೊಬ್ಬರ ತಯಾರಿಸುವ ಕಾರ್ಯವೂ ನಡೆಯುತ್ತಿದೆ. ಈ ಕಾರ್ಯದಲ್ಲಿ ಬಾಗಲಕೋಟೆಯ ನಗರಸಭೆ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯದ ಇತರೆ ನಗರಸಭೆಗಳಿಗೆ ಮಾದರಿಯಾಗಿದೆ. ಅಂತಹದ್ದೇ ಮಾದರಿ ಯೋಜನೆಯನ್ನು ಗ್ರಾಮೀಣ ಭಾಗದಲ್ಲೂ ಕೈಗೊಳ್ಳಲು ಈಗ ಜಿಪಂ ಮುಂದಾಗಿದೆ. ಇದಕ್ಕಾಗಿ ನಾಲ್ಕು ಗ್ರಾಪಂ ವ್ಯಾಪ್ತಿಯಲ್ಲಿ ಒಂದು ಘನತ್ಯಾಜ್ಯ ನಿರ್ವಹಣ ಘಟಕ ಸ್ಥಾಪಿಸಲು ಯೋಜನೆ ಹಾಕಿಕೊಂಡಿದೆ.

ಐದು ಗ್ರಾಪಂ ಆಯ್ಕೆ: ಕೇಂದ್ರ ಸರ್ಕಾರದ ಎಸ್‌ಡಬ್ಲ್ಯೂಎಂ (ಘನ ತ್ಯಾಜ್ಯ ನಿರ್ವಹಣೆ) ಯೋಜನೆಯಡಿ ಮುಧೋಳ ತಾಲೂಕಿನ ಲೋಕಾಪುರದಲ್ಲಿ ಈ ಘಟಕ ಸ್ಥಾಪಿಸಲು ಉದ್ದೇಶಿಸಲಾಗಿದೆ. ಲೋಕಾಪುರ, ದಾದನಹಟ್ಟಿ, ಹೆಬ್ಟಾಳ, ಬಂಟನೂರ ಮತ್ತು ಲಕ್ಷಾನಹಟ್ಟಿ ಗ್ರಾಪಂಗಳನ್ನು ಈ ಪ್ರಾಯೋಗಿಕ ಯೋಜನೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ಘನ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರದಿಂದ ಗ್ರಾಪಂವೊಂದಕ್ಕೆ 20 ಲಕ್ಷ ರೂ. ಅನುದಾನ ಬರಲಿದ್ದು, ಅದನ್ನು ಗ್ರಾಪಂಗೆ ಒಂದು ಸ್ಥಾಪಿಸಲು ಅನುದಾನದ ಕೊರತೆ ಎದುರಾಗಲಿದೆ. ಹೀಗಾಗಿ ಬಹುಗ್ರಾಮ ಯೋಜನೆಯಡಿ ಅವುಗಳನ್ನು ನಿರ್ವಹಣೆ ಮಾಡಲು ಜಿಪಂ ಯೋಜನೆ ರೂಪಿಸಿದೆ. ಇದಕ್ಕಾಗಿ ಎಲ್ಲ ರೀತಿಯ ತಯಾರಿ ನಡೆದಿದ್ದು, ಹೊಸ ವರ್ಷದಿಂದ ಈ ಐದು ಗ್ರಾಮಗಳಲ್ಲಿ ಮನೆ-ಮನೆಯ ಕಸ ಸಂಗ್ರಹ ಆರಂಭಗೊಳ್ಳು ಸಾಧ್ಯತೆ ಇದೆ.

ಲೋಕಾಪುರ ಅತಿದೊಡ್ಡ ಗ್ರಾಪಂ: ಜಿಲ್ಲೆಯ 198 ಗ್ರಾಪಂಗಳಲ್ಲಿ ಲೋಕಾಪುರ ಅತಿ ಹೆಚ್ಚು ಆದಾಯ ಇರುವ ಹಾಗೂ ದೊಡ್ಡ ಪಂಚಾಯಿತಿ ಎಂಬ ಖ್ಯಾತಿ ಪಡೆದಿದೆ. ಪಟ್ಟಣ ಪಂಚಾಯಿತಿ ಆಗುವ ಎಲ್ಲ ಅರ್ಹತೆ ಇದ್ದರೂ, ಕೆಲವು ಒತ್ತಡ-ಸಮಸ್ಯೆಗಳಿಂದ ಇನ್ನೂ ಗ್ರಾಪಂ ಆಗಿಯೇ ಮುಂದುವರಿದಿದೆ. ಇಲ್ಲಿ 13ರಿಂದ 15 ಸಾವಿರ ಜನಸಂಖ್ಯೆ ಹೊಂದಿದ್ದು, ಎರಡು ರಾಜ್ಯ ಹೆದ್ದಾರಿ ಹಾದು ಹೋಗಿದೆ.  ಅಲ್ಲದೇ ಪಕ್ಕದ ಬಂಟನೂರ ಗ್ರಾಪಂ ವ್ಯಾಪ್ತಿಯಲ್ಲಿ ಚಿಕ್ಕೂರ, ಬದನೂರ, ಜುನ್ನೂರ ಸೇರಿ ನಾಲ್ಕು ಗ್ರಾಮಗಳಿದ್ದು, 7500 ಜನಸಂಖ್ಯೆ ಇದೆ. ದಾದನಕಟ್ಟಿ ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು 5 ಸಾವಿರ ಜನಸಂಖ್ಯೆ ಇದ್ದು, ದಾದನಟ್ಟಿ, ಹೊಸಕೋಟಿ, ಮಲ್ಲಾಪುರ, ಕನಸಗೇರಿ ಗ್ರಾಮ ಒಳಗೊಂಡಿವೆ. ಲಕ್ಷಾನಟ್ಟಿ ಗ್ರಾಪಂ ವ್ಯಾಪ್ತಿಯಲ್ಲಿ ವರ್ಚಗಲ್‌, ಚೌಡಾಪುರ, ಜಾಲಿಕಟ್ಟಿ ಬಿಕೆ, ಜಾಲಿಕಟ್ಟಿ ಕೆ.ಡಿ, ಪಾಲ್ಕಿಮಾನ್ಯ, ನಾಗನಾಪುರ, ಬ್ಯಾಡರ ಅರಳಿಕಟ್ಟಿ ಗ್ರಾಮ ಒಳಗೊಂಡಿದ್ದು, 9 ಸಾವಿರ ಜನಸಂಖ್ಯೆ ಹೊಂದಿದೆ. ಹೆಬ್ಟಾಳ ಗ್ರಾಪಂ ವ್ಯಾಪ್ತಿಯಲ್ಲಿ 6892 ಜನಸಂಖ್ಯೆ ಇದೆ.

ಏನು ಲಾಭ?: ಘನ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪನೆಯಿಂದ ಇಡೀ ಗ್ರಾಮವನ್ನು ಸ್ವಚ್ಛವಾಗಿಡಬಹುದು. ಎಸ್‌ಡಬ್ಲ್ಯೂಎಂ ಯೋಜನೆಯಡಿ ಪ್ರತಿ ಪಂಚಾಯಿತಿಗೆ 20 ಲಕ್ಷ ಅನುದಾನ ದೊರೆಯಲಿದ್ದು, ಆ ಅನುದಾನ ಬಳಕೆಗೆ ಸರ್ಕಾರನಿಯಮ ರೂಪಿಸಿದೆ. 5 ಲಕ್ಷ ವೆಚ್ಚದಲ್ಲಿ ಗ್ರಾಪಂಗೆ ಒಂದು ಕಸ ಸಂಗ್ರಹ ವಾಹನ, ಶೆಡ್‌ ನಿರ್ಮಾಣ, ಬ್ಯಾಟರಿ ಚಾಲಿತ ಟ್ರೈ ಸಕಲ್‌, ಕಸ ವಿಂಗಡಣೆಗೆ ಸಿಬ್ಬಂದಿ ನೇಮಕ ಒಳಗೊಂಡಿದೆ. ಲೋಕಾಪುರ ಸಹಿತ ಬಹುಗ್ರಾಮಘಟನ ತ್ಯಾಜ್ಯ ನಿರ್ವಹಣೆ ಯೋಜನೆಯಡಿ ಐದು ಗ್ರಾಪಂ ಆಯ್ಕೆ ಮಾಡಿಕೊಂಡಿದ್ದು, 1 ಕೋಟಿ ಅನುದಾನ ಲಭ್ಯವಾಗಲಿದೆ.

ಇದರಡಿ ಒಂದೇ ಕಡೆಶೆಡ್‌ ನಿರ್ಮಿಸಿ, ಎಲ್ಲ ಗ್ರಾಮಗಳ ಕಸವನ್ನು ಒಂದೆಡೆ ಸಂಗ್ರಹಿಸಿ, ಅದರಿಂದ ಗೊಬ್ಬರ ತಯಾರಿಸಲು ಅನುಕೂಲವಾಗಲಿದೆ. ಒಟ್ಟಾರೆ, ನಗರ ಪ್ರದೇಶದಂತೆ ಗ್ರಾಮೀಣ ಭಾಗದಲ್ಲೂ ಮನೆ-ಮನೆಯ ಕಸ ಸಂಗ್ರಹ ಯೋಜನೆಗೆ ಜಿಪಂ ಯೋಜನೆ ರೂಪಿಸಿದ್ದು, ಇದು ಲೋಕಾಪುರದಲ್ಲಿ ಮೊದಲು ಆರಂಭಗೊಳ್ಳಲಿದೆ.

 

-ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.