ಕೋವಿಡ್ ಹಿಮ್ಮೆಟ್ಟಿಸಲು ಮಾನಸಿಕ ಸಿದ್ಧರಾಗಿ: ಡಿಸಿ


Team Udayavani, Jun 25, 2020, 1:50 PM IST

ಕೋವಿಡ್ ಹಿಮ್ಮೆಟ್ಟಿಸಲು ಮಾನಸಿಕ ಸಿದ್ಧರಾಗಿ: ಡಿಸಿ

ಬೀಳಗಿ: ಕೋವಿಡ್‌-19 ತಾರ್ಕಿಕ ಅಂತ್ಯ ಕಾಣುವವರೆಗೆ ಕೋವಿಡ್ ಸೋಂಕು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮಾನಸಿಕವಾಗಿ ಸಿದ್ಧರಾಗಬೇಕಿರುವುದು ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಕ್ಯಾ.ಡಾ| ರಾಜೇಂದ್ರ ಹೇಳಿದರು.

ಪಟ್ಟಣದ ಕೊರ್ತಿ ಸಮುದಾಯ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಆಶಾ, ಅಂಗನವಾಡಿ ಕಾರ್ಯರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಪಂ ಪಿಡಿಒ, ಬಿಲ್‌ ಕಲೆಕ್ಟರ್‌ಗಳಿಗಾಗಿ ಕೋವಿಡ್‌-19 ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್ ಸೇನಾನಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಜಾಗರೂಕತೆಯಿಂದ ಮತ್ತು ನಿರ್ಭೀತಿಯಿಂದ ಕೆಲಸ ನಿರ್ವಹಿಸಿ. ಕರ್ತವ್ಯಕ್ಕೆ ಯಾವುದೆ ತೊಂದರೆ ಎದುರಾದರೆ ಜಿಲ್ಲಾಡಳಿತ ನಿಮ್ಮ ಬೆನ್ನಿಗೆ ನಿಂತು ಕೆಲಸ ಮಾಡಲಿದೆ ಎಂದು ಭರವಸೆ ನೀಡಿದರು.

ಜಾಗೂರಕತೆಯಿಂದ ಒಂದೇ ಒಂದು ಸಾವು ಸಂಭವಿಸಕೂಡದು. ಈ ನಿಟ್ಟಿನಲ್ಲಿ ಸ್ಥಳೀಯ ಎಲ್ಲ ಕೋವಿಡ್ ಸೇನಾನಿಗಳು ಪ್ರಾಮಾಣಿಕ ಸೇವೆಗೆ ಪಣ ತೊಡಬೇಕಿರುವುದು ಅವಶ್ಯ. ಆಶಾ, ಅಂಗನವಾಡಿ ಕಾರ್ಯಕರ್ತೆಯರ ಶ್ರಮ ಶ್ಲಾಘನೀಯ. ಎಲ್ಲ ಸಿಬ್ಬಂದಿಯ ಪರಿಶ್ರಮ ಫಲವಾಗಿಯೇ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಬಹಳಷ್ಟು ಪ್ರಮಾಣದಲ್ಲಿ ತಡೆಯಲು ಸಾಧ್ಯವಾಗಿದೆ ಎಂದರು.

ಮಹಾರಾಷ್ಟ್ರ, ದೆಹಲಿ, ತಮಿಳನಾಡು ರಾಜ್ಯಗಳಿಂದ ಆಗಮಿಸುವವರಿಗೆ ಸಾಂಸ್ಥಿಕ ಕ್ವಾರಂಟೈನ್‌ ಹಾಗೂ ಇತರೆ ರಾಜ್ಯಗಳಿಂದ ಬಂದವರಿಗೆ ಹೋಂ ಕ್ವಾರಂಟೈನ್‌ ಕಡ್ಡಾಯ. ಕ್ವಾರಂಟೈನ್‌ ಉಲ್ಲಂಘಿಸುವವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು. ಪ್ರತಿ ಮನೆ-ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸುವುದರ ಜತೆಗೆ ಕೊರೊನಾ ಜಾಗೃತಿ ಮೂಡಿಸಬೇಕು. 60 ವರ್ಷ ಮೇಲ್ಪಟ್ಟ ವೃದ್ಧರ, ಗರ್ಭಿಣಿಯರ, ರಕ್ತದೊತ್ತಡ, ಸಕ್ಕರೆ ಕಾಯಿಲೆ, ಎಚ್‌ಐವಿ ಸೋಂಕು ಇರುವವರ ಕುರಿತು ಅಗತ್ಯ ಮಾಹಿತಿ ಕಲೆ ಹಾಕಬೇಕು. ಇನ್ನೆರಡು ತಿಂಗಳು ಕಾಲ ನಿಮ್ಮ ಮೇಲೆ ಜವಾಬ್ದಾರಿ ಹೆಚ್ಚಿಗಿದೆ. ಇಲ್ಲಿ ನೀವೇ ಡಿಸಿ, ಎಸ್ಪಿಯಂತೆ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ಕೊರೊನಾ ವಾರಿಯರ್ಸ್ ಗಳಿಗೆ ಮನವಿ ಮಾಡಿದರು. ಡಿಎಚ್‌ಒ ಡಾ| ಅನಿಲ ದೇಸಾಯಿ ಮಾತನಾಡಿ, ಮದುವೆ, ಇತರೆ ಸಮಾರಂಭಗಳಿಗೆ 50ಕ್ಕೂ ಹೆಚ್ಚು ಜನ ಸೇರುವಂತಿಲ್ಲ. ಅಂತ್ಯಸಂಸ್ಕಾರದಲ್ಲಿ 20ಕ್ಕೂ ಹೆಚ್ಚು ಜನ ಭಾಗವಹಿಸುವಂತಿಲ್ಲ. ಕಾನೂನು ಉಲ್ಲಂಘಿಸಿದರೆ ಕ್ರಮ ಖಂಡಿತ ಎಂದರು.

ಎನ್‌ಐಸಿ ಜಿಲ್ಲಾ ಸಮನ್ವಯಾಧಿಕಾರಿ ಗಿರಿಯಾಚಾರ್ಯ, ಎಸಿ ಡಾ| ಸಿದ್ದು ಹುಲ್ಲಳ್ಳಿ, ತಹಶೀಲ್ದಾರ್‌ ಭೀಮಪ್ಪ ಅಜೂರ, ತಾಪಂ ಇಒ ಎಂ.ಕೆ.ತೊದಲಬಾಗಿ, ತಾಲೂಕು ಆರೋಗ್ಯಾಧಿಕಾರಿ ಡಾ| ದಯಾನಂದ ಕರೆಣ್ಣವರ, ಪಪಂ ಮುಖ್ಯಾಧಿಕಾರಿ ದೇವೀಂದ್ರ ಧನಪಾಲ, ಸಿಪಿಐ ಸಂಜೀವ ಬಳೆಗಾರ ಇದ್ದರು. ಗುರುರಾಜ ಲೂತಿ ನಿರೂಪಿಸಿದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.