ಬೆಳ್ಳಗೆ ಹರಿಯುತ್ತಿದ್ದ ಘಟಪ್ರಭೆಗೆ ಕಪ್ಪುಕಳಂಕ

ರೈತರ ಜೀವನಾಡಿಯ ಮಡಿಲಲ್ಲಿ ಕಪ್ಪು ಕೊಳೆ | ಒದ್ದಾಡಿ ಸಾಯುತ್ತಿವೆ ಜಲಚರಗಳು | ಜನ-ಜಾನುವಾರು ಕುಡಿಯಲು ಹಿಂದೇಟು  

Team Udayavani, Jul 4, 2021, 8:36 PM IST

2kldg-1a

ವರದಿ: ಚಂದ್ರಶೇಖರ ಹಡಪದ

ಕಲಾದಗಿ: ನಿರಂತರವಾಗಿ ಬೆಳ್ಳಗೆ, ಮಳೆಯಾದರೆ ನಸು ಕೆಂಪಾಗಿ (ರಾಡಿನೀರು) ಹರಿಯುತ್ತಿದ್ದ, ಅನೇಕ ಹಳ್ಳಿಗಳ ಜನ-ಜಾನುವಾರು, ರೈತರಿಗೆ ಜೀವನಾಡಿ ಘಟಪ್ರಭೆ ಯಾಕೋ ಏನೋ ಕಳೆದ ಮೂರು ದಿನಗಳಿಂದ “ಕಪ್ಪಾಗಿ’ ಹರಿಯುತ್ತಿದ್ದು, ಈ ಭಾಗದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹಿಂದೆಂದೂ ಕಪ್ಪಾಗಿ ಹರಿಯದ ಘಟಪ್ರಭೆ ಇತ್ತೀಚಿನ ದಿನಗಳಲ್ಲಿ ಕಪ್ಪಾಗಿ ಮಲೀನಗೊಂಡು ಹರಿಯುತ್ತಿರುವುದಕ್ಕೆ ಕಾರ್ಖಾನೆಗಳಿಂದ ನದಿಗೆ ಬಿಡುತ್ತಿರುವ ತ್ಯಾಜ್ಯವೇ ಕಾರಣ ಎನ್ನಲಾಗುತ್ತಿದೆ.

ಉದಗಟ್ಟಿ, ಶಾರದಾಳ, ಅಂಕಲಗಿ, ಕಲಾದಗಿ, ಚಿಕ್ಕಸಂಶಿ ಮುಂತಾದ ಊರುಗಳ ಸಮೀಪ ಘಟಪ್ರಭೆಯ ನದಿಯ ಹರಿವಿನಲ್ಲಿ ಕಣ್ಣು ಹಾಯಿಸಿದರೆ ನೀರು ಕಪ್ಪು ಕಪ್ಪಾಗಿ ಕಾಣುತ್ತಿದೆ. ಇದರಿಂದಾಗಿ ನದಿ ನೀರನ್ನು ಜಾನುವಾರುಗಳಿಗೆ ಕುಡಿಸಲು ಜನ ಹಿಂದೇಟು ಹಾಕುತ್ತಿದ್ದಾರೆ.

ಒದ್ದಾಡಿ ಸಾಯುತ್ತಿವೆ ಜಲಜೀವಿಗಳು: ನದಿ ನೀರು ಕಪ್ಪಾಗಿರುವುದರಿಂದ ಮೀನು, ಕಪ್ಪೆ, ಹಾವು, ಏಡಿ ಇನ್ನಿತರೆ ಜಲಜೀವಿಗಳು ವಿಲ ವಿಲ ಒದ್ದಾಡಿ ಸಾಯುತ್ತಿವೆ. ಸಣ್ಣ ಸಣ್ಣ ಮೀನುಗಳು, ಏಡಿಗಳು ಸತ್ತು ನದಿ ದಂಡೆ ಬಳಿ ಬಿದ್ದಿವೆ. ಇವುಗಳನ್ನು ನೋಡಿ ಜನ ಮತ್ತಷ್ಟು ಆತಂಕಗೊಂಡಿದ್ದಾರೆ. ಕುಡಿಯುವ ನೀರೂ ವಿಷ: ನದಿ ನೀರು ಕಪ್ಪಾಗಿ ಹರಿಯುತ್ತಿರುವುದರಿಂದ ಅಂತರ್ಜಲ ವಿಷಕಾರಿಯಾಗುವುದನ್ನು ತಳ್ಳಿ ಹಾಕುವಂತಿಲ್ಲ ಎನ್ನುತ್ತಾರೆ ನದಿ ಪಾತ್ರದ ಜನ.

ನದಿ ಪಾತ್ರದ ಗ್ರಾಮದಲ್ಲಿ ಕುಡಿಯುನ ನೀರಿನ ಕೊಳವೆ ಬಾವಿಗಳು ನದಿ ಜಲಮೂಲದಿಂದಲೇ ಅಂತರ್ಜಲ ಮಟ್ಟ ಹೆಚ್ಚಿಸಕೊಳ್ಳುತ್ತವೆ. ಬಾವಿಗಳಿಂದ ನದಿ ಸ್ವಲ್ಪ ದೂರದಲ್ಲಿಯೇ ಇದೆ. ಇದರಿಂದ ಕುಡಿಯುವ ನೀರಿನ ಕೊಳವೆ ಬಾವಿಗಳಲ್ಲಿ ತಾಜ್ಯ ವಿಷಯುಕ್ತ ನೀರು ಮಿಶ್ರಣವಾಗುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ.

ಎಚ್ಚೆತ್ತುಕೊಳ್ಳಬೇಕಿದೆ: ಘಟಪ್ರಭೆಯ ನೀರಿನಿಂದ ಏನಾದರೂ ಜನ-ಜಾನುವಾರುಗಳಿಗೆ ಅನಾಹುತಗಳು ಸಂಭವಿಸುವ ಮೊದಲೇ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ. ಮುಖ್ಯವಾಗಿ ಜಲ ಮಾಲಿನ್ಯ ನಿಯಂತ್ರಣಾ ಮಂಡಳಿ ಅಧಿಕಾರಿಗಳು ಘಟಪ್ರಭೆಯ ಒಡಲು ಹೀಗೆ ಕಪ್ಪಾಗಿರುವುದಕ್ಕೆ ಕಾರಣ ಗುರುತಿಸಬೇಕು. ಕಾರ್ಖಾನೆ ತ್ಯಾಜ್ಯ ನದಿಗೆ ಬಿಡುತ್ತಿರುವುದೇ ನಿಜವಾದರೆ ಕೂಡಲೆ ಅದನ್ನು ತಡೆಯುವ ಪ್ರಯತ್ನವನ್ನು ಜಿಲ್ಲಾಡಳಿತ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.