ಕ್ಷೇತ್ರದ ಅಭಿವೃದ್ಧಿಗೆ ಒತ್ತು


Team Udayavani, Oct 18, 2018, 3:34 PM IST

18-october-22.gif

ಬಾಗಲಕೋಟೆ: ಬಾಗಲಕೋಟೆ ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಿ ವೈಜ್ಞಾನಿಕ ನಾಗರಿಕ ಸೌಕರ್ಯ ಕಲ್ಪಿಸಬೇಕೆಂಬುದು ನನ್ನ ಆಶಯ. ರಾಜ್ಯದ ಸಮ್ಮಿಶ್ರ ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ. ಇದರಿಂದ ನಿಗದಿತ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕ ಡಾ| ವೀರಣ್ಣ ಚರಂತಿಮಠ ಆರೋಪಿಸಿದರು. ನಗರದ ಮಿರ್ಜಿ ಗಲ್ಲಿಯ ನಾಡಹಬ್ಬ ಆಚರಣಾ ಸಮಿತಿ ಆಯೋಜಿಸಿದ್ದ ನಗರಸಭೆ ಸದಸ್ಯರ, ಹಿರಿಯ ನಾಗರಿಕರ ಹಾಗೂ ಸಾಧಕರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ವಿದ್ಯಾಗಿರಿ, ನವನಗರಕ್ಕೆ ನಿರಂತರ ನೀರು ಪೂರೈಕೆ ಯೋಜನೆ ವಿಳಂಬವಾಗುತ್ತಿದೆ. ಹೆರಕಲ್ಲ ನೀರು ಸರಬರಾಜು ಯೋಜನೆ ಕುಂಠಿತಗೊಂಡಿದೆ. ಈ ಹಿಂದೆ ನಾನು ಶಾಸಕನಾಗಿದ್ದಾಗ ಮಂಜೂರಿಯಾಗಿದ್ದ ಯೋಜನೆಗಳೇ ಇನ್ನೂ ಅನುಷ್ಠಾನದ ಹಂತದಲ್ಲಿವೆ. ಮತ್ತೆ ನಾನು ಶಾಸಕನಾಗಿ ಆಯ್ಕೆಯಾಗಿ ಬಂದಾಗಲೂ ಇನ್ನೂ ಅವು ಪೂರ್ಣಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿದರು. ನವರಾತ್ರಿ ಉತ್ಸವ ಕ್ಷೇತ್ರದ ಅಭಿವೃದ್ಧಿಗೆ ದಿಕ್ಸೂಚಿಯಾಗಲಿ. ಸಮ್ಮಿಶ್ರ ಸರ್ಕಾರ ಹೋಗಿ ಯಡಿಯೂರಪ್ಪನವರ ನಾಯಕತ್ವದ ಸರಕಾರ ಅಸ್ತಿತ್ವಕ್ಕೆ ಬಂದು ಅಭಿವೃದ್ಧಿಗೆ ಚೈತನ್ಯ ಸಿಗಲಿ ಎಂದರು.

ಸಮಾರಂಭದಲ್ಲಿ ಸುಮಾರು 25ಕ್ಕೂ ಹೆಚ್ಚು ನಗರಸಭೆ ಸದಸ್ಯರನ್ನು ಅಭಿನಂದಿಸಲಾಯಿತು. ಪ್ರತಿ ಕ್ಷೇತ್ರದಲ್ಲಿ ಸದಸ್ಯರು ಆಗಬೇಕಾಗಿರುವ ರಚನಾತ್ಮಕ ಕಾರ್ಯ ಗುರುತಿಸಿ ನಗರಸಭೆ ಮೂಲಕ ಜಾರಿಗೆ ತರಲು ಸಂಘಟಿತ ಪ್ರಯತ್ನ ಮಾಡೋಣ ಎಂದು ಹೇಳಿದರು. ಖೊಟ್ಟಿ ಪೈಸೆ ಚಿತ್ರದ ನಿರ್ಮಾಪಕಿ ಗೀತಾ ಗಿರಿಜಾ, ಎಸ್ಸೆಸ್ಸೆಲ್ಸಿಯಲ್ಲಿ ಶೇ. 96ರಷ್ಟು ಅಂಕ ಪಡೆದ ದಿವ್ಯಾ ಪೂಜಾರ, ಎಂಟು ಜನ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು.

ಪ್ಲಾಸ್ಟಿಕ್‌ ಚೀಲ ಬಳಕೆ ನಿಷೇಧವಾಗಿದ್ದರೂ ಎಗ್ಗಿಲ್ಲದೇ ನಡೆಯುತ್ತಿರುವ ಬಗ್ಗೆ ನಾಗರಿಕ ಪ್ರಜ್ಞೆ ಮೂಡಿಸಲು ನಾಡಹಬ್ಬ ಆಚರಣಾ ಸಮಿತಿ ಪ್ರತಿ ಮನೆಗೆ ಎರಡು ಕೈಚೀಲ ನೀಡಿ ಪ್ಲಾಸ್ಟಿಕ್‌ ಕ್ಯಾರಿಬ್ಯಾಗ್‌ ಬಳಕೆ ನಿಷೇಧಿ ಸಲು ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೂ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಯಿತು.

ನಗರಸಭೆ ಮಾಜಿ ಉಪಾಧ್ಯಕ್ಷ ಜಯಂತ ಕುರಂದವಾಡ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾಗಿರಿ ಹಾಗೂ ನವನಗರಕ್ಕೆ ಸೀಮಿತವಾಗಿರುವ ನಿರಂತರ ನೀರು ಪೂರೈಕೆ ಯೋಜನೆ ಬಾಗಲಕೋಟೆ ಮುಳುಗಡೆಯಾಗದ ನಗರಕ್ಕೂ ವಿಸ್ತರಿಸಬೇಕು, ಕಾರಿಹಳ್ಳದ ಕ್ವಾರಿ ನೀರು ಇಲ್ಲಿ ಸರಬರಾಜು ಮಾಡಿದರೆ ಬೋರ್‌ವೆಲ್ ಗಳ ಬಳಕೆ ನಿಲ್ಲಿಸಿ ಶುದ್ಧ ನೀರು ಬಳಕೆಗೆ ಅವಕಾಶವಾಗುತ್ತದೆ. ಇದರಿಂದ ನಗರಸಭೆಗೆ ಕನಿಷ್ಠ ಮಾಸಿಕ 5 ಲಕ್ಷ ರೂ. ಉಳಿತಾಯವಾಗಲಿದೆ ಎಂದು ಹೇಳಿದರು. ಸಮಿತಿ ಅಧ್ಯಕ್ಷ  ಶ್ರೀನಿವಾಸ ಮನಗೂಳಿ, ಕಾರ್ಯದರ್ಶಿ ದೀಪಕ ಹೆಬ್ಟಾರೆ ವೇದಿಕೆಯಲ್ಲಿದ್ದರು. ಸುಷ್ಮಾ ಕುಂಟೋಜಿ ಪ್ರಾರ್ಥಿಸಿದರು. ಭಾಸ್ಕರ ಮನಗೂಳಿ ನಿರೂಪಿಸಿದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.