ದಲಿತ ಕುಟುಂಬಗಳಿಗೆ ಹಕ್ಕು ಪತ್ರ ನೀಡಿ; ಯಮನಪ್ಪ ಗುಣದಾಳ

ನೊಂದ ಕುಟುಂಬಗಳಿಗೆ ನಿವೇಶನ ಗುರುತಿಸಿ ಅವರಿಗೆ ನ್ಯಾಯ ಒದಗಿಸಿಕೊಡಬೇಕು

Team Udayavani, Sep 3, 2022, 1:19 PM IST

ದಲಿತ ಕುಟುಂಬಗಳಿಗೆ ಹಕ್ಕು ಪತ್ರ ನೀಡಿ; ಯಮನಪ್ಪ ಗುಣದಾಳ

ರಬಕವಿ-ಬನಹಟ್ಟಿ: ರಬಕವಿಯ ನಗರದ ಸರ್ವೆ ನಂ. 64/1+2 ರಲ್ಲಿ ಅಂದಾಜು 100 ದಲಿತ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡದೆ ಇರುವುದರಿಂದ ಈ ದಲಿತ ಕುಟುಂಬಗಳು ಜೀವನ ನಿರ್ವಹಿಸುವುದು ಕಠಿಣವಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಗಮನ ನೀಡಿ ಹದಿನೈದು ದಿನಗಳ ಒಳಗಾಗಿ ನಿವೇಶನ ನೀಡದೆ ಹೋದರೆ ನಗರಸಭೆ ಹಾಗೂ ಸ್ಥಳೀಯ ಶಾಸಕರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘದ ಮುಖಂಡ ಯಮನಪ್ಪ ಗುಣದಾಳ ಹೇಳಿದರು. ಸ್ಥಳೀಯ ನಗರಸಭೆ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಭೀಮವಾದ ಸಂಘವು ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಈಗಾಗಲೇ ಇಲ್ಲಿಯ 900ಕ್ಕೂ ಹೆಚ್ಚು ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ, ದಲಿತ ಕುಟುಂಬಗಳಿಗೆ ಮಾತ್ರ ನಿವೇಶನ ನೀಡಿಲ್ಲ. ಈ ಕುರಿತು ಇಲ್ಲಿಯ ಜನರು ಜಿಲ್ಲಾ ಧಿಕಾರಿಗಳಿಗೆ, ಪೌರಾಯುಕ್ತರಿಗೆ, ತಹಶೀಲ್ದಾರ್‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ನೀಡಿದರೂ ಪ್ರಯೋಜನವಾಗಿಲ್ಲ.

ಬಾಗಲಕೋಟೆಯ ಪೊಲೀಸ್‌ ವರಿಷ್ಠಾಧಿಕಾರಿಗಳು ಕರೆದ ದಲಿತರ ಕುಂದುಕೊರತೆ ಸಭೆಯಲ್ಲೂ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ದಲಿತ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಯಮನಪ್ಪ ಗುಣದಾಳ ತಿಳಿಸಿದರು.

ಮತ್ತೋರ್ವ ಮುಖಂಡ ಪರಶುರಾಮ ನೀಲನಾಯಕ ಮಾತನಾಡಿದರು. ನಿವೇಶನರಹಿತರಿಗೆ ಆದಷ್ಟು ಬೇಗನೆ ಹಕ್ಕು ಪತ್ರಗಳನ್ನು ನೀಡಬೇಕು, ನಕಾಶೆಯನ್ನು ತಿದ್ದುಪಡಿ ಮಾಡಿದ ಕಾರಣ ನಿವೇಶನಗಳನ್ನು ನೀಡಲು ವಿಳಂಬವಾಗಿದೆ. ಈ ಕುಟುಂಬಗಳಿಗೆ ಅನ್ಯಾಯವಾಗಲು ಕಾರಣರಾದ ನಗರಸಭೆಯ ಅ ಧಿಕಾರಿ ಮುಖೇಶ ಬನಹಟ್ಟಿಯವರನ್ನು ಅಮಾನತು ಮಾಡಬೇಕು. ನೊಂದ ಕುಟುಂಬಗಳಿಗೆ ನಿವೇಶನ ಗುರುತಿಸಿ ಅವರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ತಮ್ಮ ಹಕ್ಕೊತ್ತಾಯಗಳನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಭೀಮವಾದ ಕಾರ್ಯಕರ್ತರು ಮಂಡಿಸಿದರು. ಪ್ರತಿಭಟನಾಕಾರರು ರಬಕವಿಯ ಹೊಸ ಬಸ್‌ ನಿಲ್ದಾಣದಿಂದ ರಬಕವಿ ಬನಹಟ್ಟಿ ನಗರಸಭೆಯವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡರು. ಪ್ರತಿಭಟನಾಕಾರರು ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಸಂಘದ ಮುಖಂಡರಾದ ಶಾಮ ಕಾಳೆ, ಸುನೀಲ ಹರಿಜನ, ಸುರೇಶ ನಡುವಿನಮನಿ, ಮಾರುತಿ ಮಾದರ, ಯಮನಪ್ಪ ಮಹಾಜನ, ಕುಮಾರ ಬುದ್ನಿ ಸದಸ್ಯರು ಇದ್ದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಭೀಮವಾದ ಸಂಘದ ಸದಸ್ಯರು ನೀಡಿದ ಮನವಿಯನ್ನು ಆಶ್ರಯ ಸಮಿತಿಯ ಮುಂಡಿಡಲಾಗುವುದು. ಸಮಿತಿಯ ಕೈಗೊಂಡ ನಿರ್ಣಯದಂತೆ ಕ್ರಮ ಕೈಗೊಳ್ಳಲಾಗುವುದು.
ಅಶೋಕ ಗುಡಿಮನಿ,
ಪೌರಾಯುಕ್ತರು, ರಬಕವಿ ಬನಹಟ್ಟಿ ನಗರಸಭೆ

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.