ಪ್ಲಾಸ್ಟಿಕ್ ತಂದರೆ ಅಕ್ಕಿ ಉಚಿತ!
Team Udayavani, Dec 4, 2019, 4:47 PM IST
ಬನಹಟ್ಟಿ: ಪ್ಲಾಸ್ಟಿಕ್ ಬಳಕೆ ನಿಲ್ಲಿಸಲು ಸರಕಾರ ಏನೆಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಅಂತೆಯೇ ಬನಹಟ್ಟಿ ನಗರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸ್ಥಳೀಯ ಅನ್ನಪೂರ್ಣೇಶ್ವರಿ ಹೋಟೆಲ್ ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ. ಹೋಟೆಲ್ನ ಮಲ್ಲಯ್ಯ ಬಸಲಿಂಗಯ್ಯ ಕಲ್ಯಾಣಿ “ಒಂದು ಕೇಜಿ ಪ್ಲಾಸ್ಟಿಕ್ ತಂದರೆ ಒಂದು ಕೇಜಿ ಅಕ್ಕಿ ಉಚಿತ‘ ಎಂದು ಘೋಷಣೆ ಮಾಡುವ ಮೂಲಕ ಪ್ಲಾಸ್ಟಿಕ್ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
ಪರಿಸರಕ್ಕೆ ಮಾರಕ ಎನಿಸಿದ ಪ್ಲಾಸ್ಟಿಕ್ ಬಳಕೆಯನ್ನು ಕೇಂದ್ರ ಸರ್ಕಾರ ಅಕ್ಟೋಬರ್ 2 ರಂದೇ ನಿಷೇಧಿಸಿದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ಲಾಸ್ಟಿಕ್ ಆಯ್ದು ಸ್ವಚ್ಛಗೊಳಿಸಿದ ಚಿತ್ರದೊಂದಿಗೆ ಹೊಟೇಲ್ಗೆ ಬರುವವರಿಗೆ ಸೋಮವಾರದಿಂದಗುರುವಾರದವರೆಗೆ ಉಚಿತವಾಗಿ1ಕೇಜಿ ಅಕ್ಕಿ ನೀಡುತ್ತಿದ್ದಾರೆ.
ಬಾಳೆ ಎಲೆಯಲ್ಲಿ ಪಾರ್ಸಲ್: ನಮ್ಮ ಹೋಟೆಲ್ನಿಂದ ಪಾರ್ಸೆಲ್ ತೆಗೆದುಕೊಂಡು ಹೋಗುವವರಿಗೆ ಬಾಳೆ ಎಲೆಯಲ್ಲೇ ಊಟ ಕಟ್ಟಿ ಕೊಡುತ್ತಿದ್ದೇವೆ. ಸಾಂಬಾರ್ನಂತಹ ಪದಾರ್ಥಗಳನ್ನು ರಟ್ಟಿನ ಡಬ್ಬದಲ್ಲಿ ಹಾಕಿ ಕೊಡುತ್ತೇವೆ ಎನ್ನುತ್ತಾರೆ ಮಲ್ಲಯ್ಯ. ಬನಹಟ್ಟಿ ಸೇರಿದಂತೆ ಅಥಣಿ, ಜಮಖಂಡಿ, ಗಲಗಲಿ ಹೀಗೆ 6 ಕಡೆಗಳಲ್ಲಿ ಹೊಟೇಲ್ಗಳಿದ್ದು, ಎಲ್ಲ ಕಡೆಗಳಲ್ಲಿಯೂ ಇಂತಹ ಅಭಿಯಾನ ನಡೆಸುವ ಮೂಲಕ ಬಂದ ಪ್ಲಾಸ್ಟಿಕ್ ಗಳನ್ನು ನಗರಸಭೆ ಸುಪರ್ದಿಗೆ ನೀಡಲಾಗುತ್ತಿದೆ ಎಂದು ದಾನಯ್ಯ ಕಲ್ಯಾಣಿ ತಿಳಿಸಿದರು.
-ಕಿರಣ ಶ್ರೀಶೈಲ ಆಳಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ