ಕನಿಷ್ಟ 2 ದಿನಕ್ಕೊಮ್ಮೆಯಾದ್ರೂ ನೀರು ಕೊಡಿ
ಶುದ್ಧ ನೀರಿನ ಘಟಕ ಕೂಡಲೇ ಆರಂಭಿಸಿ
Team Udayavani, Nov 27, 2020, 4:11 PM IST
ಬೀಳಗಿ: ಕಳೆದ ಐದು ವರ್ಷಗಳಿಂದ ಸ್ಥಗಿತಗೊಂಡಿರುವ ಶುದ್ಧ ಕುಡಿವ ನೀರಿನ ಘಟಕವನ್ನು ಕೂಡಲೇ ಆರಂಭಿಸಬೇಕು, ವಾರಕ್ಕೊಮ್ಮೆ ನೀರು ಬಿಡುತ್ತಿದ್ದು, ಕನಿಷ್ಠ ಎರಡು ದಿನಕ್ಕೊಮ್ಮೆಯಾದ್ರೂ ನೀರು ಬಿಡುವ ಮೂಲಕ ನೀರಿನ ಸಮಸ್ಯೆ ನೀಗಿಸಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪಟ್ಟಣದ ಕಿಲ್ಲಾಗಲ್ಲಿಯ ವೀರಭದ್ರೇಶ್ವರ ಮಹಿಳಾ ಮಂಡಳದ ಮಹಿಳೆಯರು ಪಪಂ ಅಧ್ಯಕ್ಷರಿಗೆ ಗುರುವಾರ ಮನವಿ ಸಲ್ಲಿಸಿದರು.
ವೀರಭದ್ರೇಶ್ವರ ಮಹಿಳಾ ಮಂಡಳ ಅಧ್ಯಕ್ಷೆ ಕಮಲಾ ಹಳ್ಳೂರ ಮಾತನಾಡಿ, ಕಿಲ್ಲಾ ಗಲ್ಲಿಯ ವೀರಭದ್ರೇಶ್ವರ ದೇವಸ್ಥಾನ ಮುಂದೆ ಅರ್ಧಕ್ಕೆ ನಿಂತ ಸಮುದಾಯ ಭವನ ನಿರ್ಮಿಸಲು ಶೀಘ್ರವೇ ಮುಂದಾಗಬೇಕು. ಈ ಮೊದಲು ಎರಡು ದಿನಕ್ಕೊಮ್ಮೆ ಕುಡಿವ ನೀರು ಸರಬರಾಜಾಗುತ್ತಿತ್ತು. ಸದ್ಯ, ವಾರಕ್ಕೊಮ್ಮೆ ನೀರು ಸಿಕ್ಕರೆ ಪುಣ್ಯ ಎನ್ನುವಂತಾಗಿದೆ. ಕುಡಿಯುವ ನೀರಿಗೆ ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಇದನ್ನೂ ಓದಿ:ಸಕ್ಕರೆ ಗೊಂಬೆಗೆ ಹೆಚ್ಚುತ್ತಿದೆ ಬೇಡಿಕೆ
ತಾಲೂಕಿನ ಎಡ-ಬಲ ಕೃಷ್ಣೆ, ಘಟಪ್ರಭೆ ಮೈದುಂಬಿಕೊಂಡಿದ್ದರೂ ಪಟ್ಟಣದ ಜನತೆ ಹನಿ ನೀರಿಗಾಗಿ ಈಗಲೂ ಪರಿತಪಿಸುತ್ತಿರುವುದು ಪಪಂ ಆಡಳಿತ ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕುಡಿಯುವ ನೀರಿನ ಸಮಸ್ಯೆ ಶೀಘ್ರವೇ ಪರಿಹರಿಸಬೇಕು. ಇಲ್ಲದಿದ್ದರೆ ಪಪಂ ಎದುರು ಖಾಲಿ ಕೊಡಗಳನ್ನಿಟ್ಟು ಪ್ರತಿಭಟಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪಪಂ ಅಧ್ಯಕ್ಷ ಶಿದ್ಲಿಂಗೇಶ ನಾಗರಾಳ ಮನವಿ ಸ್ವೀಕರಿಸಿ, ಈ ಎಲ್ಲ ಸಮಸ್ಯೆಗಳಿಗೆ ವಿಶೇಷ ಕಾಳಜಿ ವಹಿಸುವ ಮೂಲಕ ಸಮಸ್ಯೆ ಪರಿಹರಿಸಲಾಗುವುದು. ಎರಡು ದಿನಕ್ಕೊಮ್ಮೆ ನೀರು ಬಿಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮಹಿಳಾ ಸಂಘದ ಮಹಾದೇವಿ ಡಂಗಿ, ಶಾರದಾ ಪಾಟೀಲ, ಸಂಗಮ್ಮ ಪಾಟೀಲ, ನೀಲಮ್ಮ ಮಮದಾಪುರ, ಕಮಲಾಕ್ಷಿ ಬಾಗೇವಾಡಿ, ಶಾಂತವ್ವ ನಾವಿ, ಶೋಭಾ ಬಗಲಿ, ಚನ್ನಮ್ಮ ಬಾಗೇವಾಡಿ, ಪಪಂ ಸದಸ್ಯ ವಿಠಲ ಬಾಗೇವಾಡಿ, ಪರಶುರಾಮ ಮಮದಾಪುರ ಇತರರು ಇದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರೈತರು- ಜನರ ಅಭಿವೃದ್ದಿಗೆ ಯಡಿಯೂರಪ್ಪ ಯಾವುದೇ ರೀತಿ ಹಿಂದೆ ಬಿದ್ದಿಲ್ಲ: ಅಮಿತ್ ಶಾ
ಮುಚ್ಚಿದ ಸಕ್ಕರೆ ಕಾರ್ಖಾನೆ ಆರಂಭಿಸಿ :ಕಾರ್ಖಾನೆ ಬಂದ್ನಿಂದ ಸಾವಿರಾರು ಕಾರ್ಮಿಕರು ಬೀದಿಪಾಲು
ರೈತರಿಗೆ ಅನ್ಯಾಯವಾಗಲು ಬಿಡಲ್ಲ: ಸಚಿವ ಮುರುಗೇಶ ನಿರಾಣಿ ಅಭಯ
ಹನಗಂಡಿಯಲ್ಲಿ “ವ್ಯೋಮಕಾಯ ಸಿದ್ಧ ಶ್ರೀ ಅಲ್ಲಮಪ್ರಭು’ ಚಿತ್ರೀಕರಣ
ನಿರಾಣಿ ಸಕ್ಕರೆ ಕಾರ್ಖಾನೆ ಉದ್ಘಾಟನೆಗೆ ಅಮಿತ್ ಶಾ
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಕೃಷಿ ಸಚಿವರಿಂದ ಬಿಡುಗಡೆಕಾರ್ಲಕಜೆ ಅಕ್ಕಿ
ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ
ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು
2ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ, 447 ಫಲಾನುಭವಿಗಳಲ್ಲಿ ಅಡ್ಡಪರಿಣಾಮ ಪತ್ತೆ: ಕೇಂದ್ರ
ಮಹಾರಾಷ್ಟ್ರದಲ್ಲಿ ಸಾವಿರ ಮುಖ್ಯಮಂತ್ರಿ ಬಂದರೂ ಬೆಳಗಾವಿ ಕರ್ನಾಟದಲ್ಲೇ ಇರುತ್ತದೆ: ಸವದಿ