ಸಾಕ್ಷಿ ಕೊಡಿ, ಇಲ್ಲವೇ ಪೀಠ ತ್ಯಜಿಸಿ ರಾಜಕೀಯಕ್ಕೆ ಬನ್ನಿ: ಸಚಿವ ನಿರಾಣಿ ಸವಾಲು


Team Udayavani, Dec 25, 2022, 6:30 AM IST

ಸಾಕ್ಷಿ ಕೊಡಿ, ಇಲ್ಲವೇ ಪೀಠ ತ್ಯಜಿಸಿ ರಾಜಕೀಯಕ್ಕೆ ಬನ್ನಿ: ಸಚಿವ ನಿರಾಣಿ ಸವಾಲು

ಬಾಗಲಕೋಟೆ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಪ್ಪಿಸಲು ಯತ್ನಿಸಿರುವ ಬಗ್ಗೆ ಕೂಡಲಸಂಗಮ ಪಂಚಮಸಾಲಿ ಸಮಾಜದ ಜಗದ್ಗುರುಗಳು ಸಾಕ್ಷಿ ನೀಡಿ ಸಾಬೀತುಪಡಿಸಬೇಕು. ಇಲ್ಲದಿದ್ದರೆ ಖಾವಿ ಬಿಚ್ಚಿ , ಖಾದಿ ತೊಟ್ಟು ರಾಜಕೀಯಕ್ಕೆ ಬರಲಿ ಎಂದು ಸಚಿವ ಮುರುಗೇಶ ನಿರಾಣಿ ಸವಾಲು ಹಾಕಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಗದ್ಗುರುಗಳ ಬಗ್ಗೆ ಬಹಳ ಗೌರವವಿದೆ. ಬೆಳಗಾವಿ ಸಮಾವೇಶದಲ್ಲಿ ಅವರು ನೀಡಿರುವ ಹೇಳಿಕೆಗೆ ಬದ್ಧರಾಗಿ, ಸಾಕ್ಷಿ ನೀಡಬೇಕು. 2ಎ ಮೀಸಲಾತಿ ಸಿಗುವುದನ್ನು ಬಾಗಲಕೋಟೆಯ ಯಾವ ಸಚಿವರು ತಡೆದರೆಂಬುದು ಸಾಬೀತುಪಡಿಸಲಿ. ಇನ್ನೊಂದು ಹೆಜ್ಜೆ ಮುಂದೆ ಹೋಗಿ ನಮ್ಮದೇ ಸಮಾಜದ ಸಚಿವರೆಂದು ಉಲ್ಲೇಖಿಸಿದ್ದಾರೆ. ಹೀಗಾಗಿ ಅವರು ಈ ಬಗ್ಗೆ ಸಾಕ್ಷಿ ನೀಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಜತೆಗೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರು.

ಸಮಸ್ತ ವೀರಶೈವ ಲಿಂಗಾಯತ ಸಮಾಜದ ಎಲ್ಲ ಪಂಗಡಗಳಿಗೂ 2ಎ ಮೀಸಲಾತಿ ಸಿಗಬೇಕೆಂದು ಮೊದಲಿನಿಂದಲೂ ಹೇಳುತ್ತ ಬಂದಿದ್ದೇನೆ. ಈಗಲೂ ಅದಕ್ಕೆ ಬದ್ಧನಾಗಿ, ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕಿದ್ದೇನೆ. ಈ ಕುರಿತು ಜಯಪ್ರಕಾಶ ಹೆಗ್ಡೆ ನೇತೃತ್ವದ ಸಮಿತಿ ಮಧ್ಯಾಂತರ ವರದಿ ನೀಡಿದೆ. ಇದೇ ಡಿ. 29ರಂದು ಮುಖ್ಯಮಂತ್ರಿಗಳು 2ಎ ಮೀಸಲಾತಿ ಘೋಷಿಸುತ್ತಾರೆಂಬ ವಿಶ್ವಾಸವಿದೆ ಎಂದರು.

ಕಳೆದ 2008ರಲ್ಲಿ ಪಂಚಮಸಾಲಿ ಸಮಾಜದ ಎರಡು ಪೀಠಗಳಾಗಿವೆ. ಆಗ ಎರಡೂ ಪೀಠ ಮಾಡಲು ಶ್ರಮಿಸಿದ್ದೇನೆ. ಅಲ್ಲದೇ ಅಲ್ಲಿಂದ 2021ರವರೆಗೆ ಎರಡೂ ಪೀಠದ ಜಗದ್ಗುರುಗಳನ್ನು ಒಂದೇ ವೇದಿಕೆಯಡಿ ತರಲು ಸಾಕಷ್ಟು ಸಮಯ ಕೊಟ್ಟಿದ್ದೇನೆ. 2008ಕ್ಕೂ ಮುಂಚೆ ಕೂಡಲಸಂಗಮ ಜಗದ್ಗುರುಗಳು ಎಲ್ಲಿದ್ದರು. ಅವರಿಗೆ ನನ್ನಿಂದ ಏನು ಸಹಾಯ-ಸಹಕಾರ ಆಗಿದೆ ಎಂಬುದು ಅವರೇ ಆತ್ಮಾವಲೋಕನ ಮಾಡಿಕೊಳ್ಳಲಿ. ಪಂಚಮಸಾಲಿ ಸಮಾಜ ಅಷ್ಟೇ ಅಲ್ಲ , ಸಮಸ್ತ ವೀರಶೈವ ಲಿಂಗಾಯತ ಒಳಪಂಗಡಗಳಿಗೆ 2ಎ ಮೀಸಲಾತಿ ಸಿಗಬೇಕೆಂಬುದು ನಮ್ಮ ಹೋರಾಟ. ಇದು ಕಳೆದ 30 ವರ್ಷಗಳಿಂದಲೂ ನಡೆದಿದೆ. ಅದಕ್ಕೆ ಈಗ ಸೂಕ್ತ ಸಮಯ ಬಂದಿದೆ ಎಂದರು.

ಪಂಚಮಸಾಲಿ ಸಮಾಜ ಜಾತಿ ಕಾಲಂನಲ್ಲಿಯೇ ಇರಲಿಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಸಿ.ಎಂ. ಉದಾಸಿ, ಬಸವರಾಜ ಬೊಮ್ಮಾಯಿ, ಆಗಿನ ಸಮಾಜ ಕಲ್ಯಾಣ ಸಚಿವ ನಾರಾಯಣಸ್ವಾಮಿ ಒಳಗೊಂಡ ಸಚಿವ ಸಂಪುಟ ಉಪ ಸಮಿತಿ ರಚಿಸಿ, ಆ ಸಮಿತಿ ಶಿಫಾರಸಿನ ಮೇರೆಗೆ ಸಮಾಜವನ್ನು 3ಬಿ ಕಾಲಂಗೆ ಸೇರಿಸಿದ್ದರು. ಇದನ್ನು ಎಂದೂ ಮರೆಯಬಾರದು ಎಂದರು.

ಪಂಚಮಸಾಲಿ ಸಮಾಜದ ಮೂರು ಪೀಠಗಳಿವೆ. ಆ ಮೂರೂ ಪೀಠಗಳ ಸ್ಥಾಪನೆಗೆ ನಾನೂ ಸಾಕಷ್ಟು ಶ್ರಮಿಸಿದ್ದೇನೆ. ಸಮಾಜ ಬಾಂಧವರಿಗೆ ನಮ್ಮ ಜಗದ್ಗುರುಗಳು ಸಿಗಬೇಕು. ಮದುವೆ ಸಹಿತ ಯಾವುದೇ ಒಳ್ಳೆಯ ಕಾರ್ಯಕ್ಕೆ ಆಯಾ ಭಾಗದಲ್ಲಿ ನಮ್ಮ ಜಗದ್ಗುರುಗಳು ತತ್‌ಕ್ಷಣಕ್ಕೆ ದೊರೆಯಲಿ ಹಾಗೂ ಸಮಾಜ ಸಂಘಟನೆ-ಧಾರ್ಮಿಕ ಕಾರ್ಯಗಳಿಗಾಗಿ ಈ ಪೀಠಗಳನ್ನು ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಇನ್ನೂ ಎರಡು ಪೀಠಗಳು ಶೀಘ್ರವೇ ಸ್ಥಾಪನೆಯಾಗಲಿವೆ.
-ಮುರುಗೇಶ ನಿರಾಣಿ, ಸಚಿವ

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.