ದೇವರ ಮಕ್ಕಳಿಗೆ ಕಂಕಣಭಾಗ್ಯ
Team Udayavani, Jun 14, 2019, 5:06 AM IST
ಬಾಗಲಕೋಟೆ: ಯಾವುದೋ ಸಮಸ್ಯೆ ಅಥವಾ ಒತ್ತಡಕ್ಕೆ ಮಣಿದು ದೇವದಾಸಿ ಎಂಬ ಪದ್ಧತಿಗೆ ಸಿಲುಕಿ, ಬಳಿಕ ಆ ಅನಿಷ್ಠ ಪದ್ಧತಿಯಿಂದ ಹೊರ ಬಂದಿರುವ ಮಹಿಳೆಯರ ಮಕ್ಕಳಿಗೆ ಗುರುವಾರ ಕಂಕಣಭಾಗ್ಯ ಕಲ್ಪಿಸಲಾಯಿತು.
ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಇಲ್ಲಿನ ಜ್ಯೋತಿ ಜಿಲ್ಲಾ ಮಟ್ಟದ ಮಹಿಳಾ ಅಭಿವೃದ್ಧಿ ಸಂಸ್ಥೆಯ 12ನೇ ವಾರ್ಷಿಕೋತ್ಸವದ ನಿಮಿತ್ತ ತಾಲೂಕಿನ ಗದ್ದನಕೇರಿ ಕ್ರಾಸ್ ಬಳಿ ಇರುವ ಲಡ್ಡುಮುತ್ಯಾನ ದೇವಸ್ಥಾನದಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ 18 ಮಂದಿ ಮಾಜಿ ದೇವದಾಸಿಯರ ಮಕ್ಕಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ವಿಶೇಷವೆಂದರೆ 18 ಮಂದಿ ವಧು-ವರರು ಮಾಜಿ ದೇವದಾಸಿಯರ ಮಕ್ಕಳೇ ಆಗಿದ್ದರು. ದೇವದಾಸಿಯರ ಮಕ್ಕಳು ಎಂಬ ಪ್ರತ್ಯೇಕ ದೃಷ್ಟಿಯಲ್ಲಿ ನೋಡುವುದನ್ನು ಬಿಟ್ಟು ಅವರೂ ಸಮಾಜದಲ್ಲಿ ಉತ್ತಮವಾಗಿ ಬದುಕು ನಡೆಸಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಲಾಗಿದೆ ಎಂದು ಸಂಘಟಕರಲ್ಲಿ ಒಬ್ಬರಾದ ಸತೀಶ ಮಾದರ (ಸೂಳಿಕೇರಿ) ‘ಉದಯವಾಣಿ’ಗೆ ತಿಳಿಸಿದರು. ನೂತನ ವಧು-ವರರಿಗೆ ಹಿರಿಯೂರಿನ ಆದಿಜಾಂಬವ ಮಠದ ಶ್ರೀ ಷಡಕ್ಷರಿಮನಿ ಸ್ವಾಮೀಜಿ ಅಕ್ಷತೆ ಹಾಕಿ, ಆಶೀರ್ವದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ