ಉತ್ತಮ ಮಳೆ; ಬಿತ್ತನೆಗೆ ಅಣಿಯಾದ ರೈತ


Team Udayavani, Jun 8, 2021, 2:34 PM IST

Untitled-1

ಜಮಖಂಡಿ: ತಾಲೂಕಿನಲ್ಲಿ ಮುಂಗಾರು ಮಳೆ ಉತ್ತಮವಾಗಿ ಸುರಿದಿರುವ ಹಿನ್ನೆಲೆಯಲ್ಲಿ ರೈತರು ಬಿತ್ತನೆಯಲ್ಲಿ ತೊಡಗಿದ್ದಾರೆ. ಸರಿಯಾದ ಸಮಯಕ್ಕೆ ಮುಂಗಾರು ಆಗಮಿಸಿದ್ದರಿಂದ ರೈತರು ಜಮೀನು ಹದಗೊಳಿಸಿದ್ದಾರೆ. ಬಿತ್ತನೆಗೆ ಎತ್ತುಗಳ ಕೊರತೆಯ ಹಿನ್ನೆಲೆಯಲ್ಲಿ ರೈತರು ಟ್ರ್ಯಾಕ್ಟರ್‌ ಮೂಲಕ ಬಿತ್ತನೆಗೆ ಮುಂದಾಗಿದ್ದಾರೆ.

ಸಾವಳಗಿ, ಜಮಖಂಡಿ ಮತ್ತು ತೇರದಾಳ ರೈತ ಸಂಪರ್ಕ ಕೇಂದ್ರಗಳಲ್ಲಿ 32.72 ಕ್ವಿಂಟಲ್‌ ಗೋವಿನಜೋಳ, 2.73 ಕ್ವಿಂಟಲ್‌ ಸಜ್ಜೆ, 117.2 ಕ್ವಿಂಟಲ್‌ ತೊಗರಿ, 184.2 ಕ್ವಿಂಟಲ್‌ ಉದ್ದು, 387.7 ಕ್ವಿಂಟಲ್‌ ಸೋಯಾಬಿನ್‌, 46 ಕ್ವಿಂಟಲ್‌ ಹೆಸರು ಮಾರಾಟವಾಗಿದೆ.

ಮುಂಗಾರು ಉತ್ತಮವಾಗಿದ್ದರಿಂದ ಅಂದಾಜು 5 ರಿಂದ 10 ಸೆ.ಮೀ. ಭೂಮಿ ಹಸಿಯಾಗಿದ್ದು ಬಿತ್ತನೆಯ ಕೆಲಸ ಚುರುಕಿನಿಂದ ನಡೆದಿದೆ. ರಬಕವಿ-ಬನಹಟ್ಟಿ ಮತ್ತು ಜಮಖಂಡಿ ತಾಲೂಕು ಸೇರಿದಂತೆ ಮುಂಗಾರು ಹಂಗಾಮಿನಲ್ಲಿ ಅಂದಾಜು 66.350 ಹೆಕ್ಟೇರ್‌ ಬಿತ್ತನೆಯಾಗಿದ್ದು, ಜೂ.5ರಂದು ಎರಡೂ ತಾಲೂಕಿನಲ್ಲಿ ಕಬ್ಬು ಬೆಳೆ ಸೇರಿದಂತೆ ಅಂದಾಜು 34.475 ಹೆಕ್ಟೇರ್‌ ಜಮೀನು ಬಿತ್ತನೆಯಾಗಿದೆ.

ಜೂ.6-7ರಂದು ಮಳೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ರೈತರು ಬಿತ್ತನೆಯಲ್ಲಿ ತೊಡಗಿದ್ದಾರೆ. ಒಂದು ವಾರದಲ್ಲಿ ನಿರೀಕ್ಷಿತ ಬಿತ್ತನೆಯ ಗುರಿ ತಲುಪಲಿದೆ.

ಬೀಜ ದಾಸ್ತಾನು ಲಭ್ಯ: ರಬಕವಿ-ಬನಹಟ್ಟಿ ಮತ್ತು ಜಮಖಂಡಿ ತಾಲೂಕಿನ ಮೂರು ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಸಕ್ತ ವರ್ಷದಲ್ಲಿ ಬಿತ್ತನೆ ಬೀಜಗಳ ದಾಸ್ತಾನು ಸಂಗ್ರಹ ಮಾಡಲಾಗಿದ್ದು, ಈಗಾಗಲೇ ರೈತರು ಬಿತ್ತನೆ ಬೀಜ ಖರೀದಿಸಿದ್ದು, ಕಳೆದೆರಡು ದಿನಗಳಿಂದ ಬಿತ್ತನೆ ಕೆಲಸ ಚುರುಕುಗೊಂಡಿದೆ. ಬೀಜ ನಾಟಿ ಮಾಡುವ ಮುನ್ನ ಸರಬರಾಜುಗೊಂಡ ಬಿತ್ತನೆ ಬೀಜಗಳನ್ನು ಪರೀಕ್ಷಿಸಿಕೊಳ್ಳಬೇಕು. ಎರಡೂ ತಾಲೂಕಿನಲ್ಲಿ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬಿತ್ತನೆ ಭೂಮಿ ಹದವಾಗಿದೆ ಎನ್ನುತ್ತಾರೆ ಜಮಖಂಡಿ ಸಹಾಯಕ ಕೃಷಿ ನಿರ್ದೇಶಕ ರವಿಶಂಕರ ಬಿದರಿ.

ಕೃಷಿ ಇಲಾಖೆ ನಿರ್ದೇಶನದಂತೆ ಸಾವಳಗಿ, ತೇರದಾಳ ಮತ್ತು ಜಮಖಂಡಿ ರೈತ ಸಂಪರ್ಕ ಕೇಂದ್ರಗಳಲ್ಲಿ ಖರೀದಿ ಸಿರುವ ಬಿತ್ತನೆ ಬೀಜಗಳು ಗುಣಮಟ್ಟದ್ದಾಗಿವೆ. ಬಿತ್ತನೆಗೂ ಮುಂಚೆ ಭೂಮಿ ಚೆನ್ನಾಗಿ ಹದವಾಗಿದ್ದನ್ನು ಗಮನದಲ್ಲಿ ಇಟ್ಟುಕೊಂಡು ರೈತರು ಬಿತ್ತನೆ ಮಾಡಬೇಕು. ತಮ್ಮ ಜಮೀನಿನ ಮಣ್ಣು ಪರೀಕ್ಷೆ ಮಾಡಿಸಿಕೊಂಡು ಅದರ ಅನುಗುಣವಾಗಿ ಬೀಜಗಳನ್ನು ಬಿತ್ತಬೇಕು. ಎರಡೂ ತಾಲೂಕಿನಲ್ಲಿ ಮುಂಗಾರು ಮಳೆ ಉತ್ತಮವಾಗಿ ಸುರಿದಿದ್ದು ಬಿತ್ತನೆಗೆ ಸಕಾಲವಾಗಿದೆ. –ಎಂ.ಎಸ್‌.ಬುಜರುಕ, ಕೃಷಿ ಅಧಿಕಾರಿ, ಜಮಖಂಡಿ

 

– ಮಲ್ಲೇಶ ಆಳಗಿ

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.