ಸರ್ಕಾರಿ ಸೌಲಭ್ಯ: ಮನೆ ಬಾಗಿಲಿಗೆ ಪ್ರತಿನಿಧಿಗಳು

ಯಾವ ಯಾವ ಸೌಲಭ್ಯಗಳು ನೀಡಬಹುದೆಂಬುದನ್ನು ಒಂದು ಮೈಕ್ರೋ ಪ್ಲಾನ್‌ ಮಾಡಿಕೊಳ್ಳಬೇಕು

Team Udayavani, Feb 15, 2022, 6:00 PM IST

ಸರ್ಕಾರಿ ಸೌಲಭ್ಯ: ಮನೆ ಬಾಗಿಲಿಗೆ ಪ್ರತಿನಿಧಿಗಳು

ಬಾಗಲಕೋಟೆ: ಜಿಲ್ಲೆಯಾದ್ಯಂತ ಗ್ರಾಮ-1 ಯೋಜನೆ ಜಾರಿಗೊಳಿಸುತ್ತಿದ್ದು, ಈ ಯೋಜನೆಯಡಿ ಆಯ್ಕೆಗೊಂಡ ಫ್ರಾಂಚೈಸಿಗಳ ಪ್ರತಿನಿಧಿಗಳು ಪ್ರತಿಯೊಂದು ಮನೆ ಮನೆಗೆ ಭೇಟಿ ನೀಡಿ, ಜನರಿಗೆ ದೊರೆಯಬೇಕಾದ ಸೌಲಭ್ಯಗಳ ಕುರಿತು ಪಟ್ಟಿ ಮಾಡಲಿದ್ದಾರೆ ಎಂದು ಗ್ರಾಮ-1 ಯೋಜನೆಯ ನಿರ್ದೇಶಕ ವರಪ್ರಸಾದ ರಡ್ಡಿ ಹೇಳಿದರು.

ಜಿಲ್ಲಾಡಳಿತ ಭವನದ ನೂತನ ಸಭಾ ಭವನದಲ್ಲಿ ಸೋಮವಾರ ಗ್ರಾಮ-1 ಕೇಂದ್ರದ ಪ್ರಾಂಚೈಸಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ನಾಗರಿಕರಿಗೆ ಸರಕಾರಿ ಸೌಲಭ್ಯಗಳನ್ನು ಸುಲಭವಾಗಿ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಸರಕಾರ ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮ-1 ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಪ್ರಾಯೋಗಿಕವಾಗಿ ಈಗಾಗಲೇ 12 ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಉತ್ತಮ ಸ್ಪಂದನೆ ದೊರೆತಿದೆ ಎಂದರು.

ರಾಜ್ಯದ ಉಳಿದ ಎಲ್ಲ ಜಿಲ್ಲೆಗಳಲ್ಲಿ ಗ್ರಾಮ-1 ಯೋಜನೆಯನ್ನು ಅನುಷ್ಠಾನಗೊಳಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಗರಿಕರಿಗೆ ವಿವಿಧ ಇಲಾಖೆಯ ಸೇವೆಗಳನ್ನು ತಮ್ಮ ಗ್ರಾಪಂ. ವ್ಯಾಪ್ತಿಯಲ್ಲಿಯೇ ನೀಡುವ ಉದ್ದೇಶ ಹೊಂದಲಾಗಿದೆ. ಗ್ರಾಮ-1 ಕೇಂದ್ರದ ಫ್ರಾಂಚೈಸಿಗಳು ನಾಗರಿಕರಿಗೆ ಉತ್ತಮ ಸೇವೆ ಒದಗಿಸುವ ಕೆಲಸವಾಗಬೇಕು.

ಸರಕಾರ ನಿಗದಿಪಡಿಸಿದ ದರ ಹೊರತು ಪಡಿಸಿ ಹೆಚ್ಚಿನದ ದರ ಪಡೆಯಲು ಅವಕಾಶವಿರುವದಿಲ್ಲ. ಈ ಬಗ್ಗೆ ದೂರುಗಳನ್ನು ಬಂದಲ್ಲಿ ಅಂತಹ ಫ್ರಾಂಚೈಸಿಗಳ ಅನುಮತಿಯನ್ನು ರದ್ದುಪಡಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಆಯ್ಕೆಯಾದ 206 ಫ್ರಾಂಚೈಸಿಗಳು ಪ್ರಥಮವಾಗಿ 2-3 ದಿನಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಿಗಬೇಕಾದ ಸೌಲಭ್ಯಗಳ ಪಟ್ಟಿಯನ್ನು ಮಾಡಿಕೊಳ್ಳಬೇಕು. ಅವರಿಗೆ ಯಾವ ಯಾವ ಸೌಲಭ್ಯಗಳು ನೀಡಬಹುದೆಂಬುದನ್ನು ಒಂದು ಮೈಕ್ರೋ ಪ್ಲಾನ್‌ ಮಾಡಿಕೊಳ್ಳಬೇಕು ಎಂದರು. ಇದರಿಂದ ತಮಗೆ ಬರುವ ಆದಾಯವನ್ನು ಸಹ ಲೆಕ್ಕಾಚಾರ ಮಾಡಬಹುದಾಗಿದೆ. ಆದ್ದರಿಂದ ನ್ಯಾಯಬದ್ಧವಾಗಿ ಕೆಲಸ ನಿರ್ವಹಿಸುವ ಮೂಲಕ ಸರಕಾರಿ ಸೌಲಭ್ಯ ನಾಗರಿಕರಿಗೆ ಒದಗಿಸುವ ಕಾರ್ಯ ಮಾಡಬೇಕು ಎಂದರು.

ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ.ರಾಜೇಂದ್ರ ಮಾತನಾಡಿ, ಸರಕಾರಿ ಸೇವೆಗಳನ್ನು ಪಡೆಯಲು ನಾಗರಿಕರು ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಮನೆ ಬಾಗಲಿಗೆ ಸೌಲಭ್ಯ ಒದಗಿಸಲು ಗ್ರಾಮ-1 ಯೋಜನೆ ಸರಕಾರ ಜಾರಿಗೆ ತಂದಿದೆ. 798 ಸೌಲಭ್ಯಗಳನ್ನು ಈ ಯೋಜನೆಯಿಂದ  ಪಡೆಯಬಹುದಾಗಿದೆ. ಸರಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣ ಪಡೆಯುವಂತಿಲ್ಲ. ಪಡೆದಲ್ಲಿ ಅವರ ಮೇಲೆ ಕ್ರಮವಹಿಸುವುದರ ಜತೆಗೆ ಫ್ರಾಂಚೈಸಿಯನ್ನು ರದ್ದುಪಡಿಸುವ ಅಧಿಕಾರವು ಸಹ ಇದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಗ್ರಾಮ-1 ಯೋಜನೆಯ ಜಿಲ್ಲಾ ವ್ಯವಸ್ಥಾಪಕ ಸ್ವಾಗತ ಗುಡಗುಡಿ ಸೇರಿದಂತೆ ಜಿಲ್ಲೆಯಲ್ಲಿ ಆಯ್ಕೆಯಾದ 206 ಫ್ರಾಂಚೈಸಿಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.