ಸರ್ಕಾರದಿಂದ ಕಾರ್ಮಿಕರ ಕಷ್ಟಕ್ಕೆ ನೆರವು
ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ವಿದ್ಯಾರ್ಥಿಗಳು ಅಧ್ಯಯನದ ಕಡೆಗೆ ಗಮನ ನೀಡಲಿ
Team Udayavani, Jun 25, 2021, 4:25 PM IST
ಮುಧೋಳ: ಕೊರೊನಾ ಕಾಲದಲ್ಲಿ ಸಂಕಷ್ಟಕ್ಕೀಡಾಗಿರುವ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ನೆರವಾಗುವ ದೃಷ್ಟಿಯಿಂದ ಸರ್ಕಾರದ ವತಿಯಿಂದ ಆಹಾರಧಾನ್ಯಗಳ ಕಿಟ್ ವಿತರಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ನಗರದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ ಒಟ್ಟು 7020 ನೋಂದಾಯಿತ ಕಟ್ಟಡ ಕಾರ್ಮಿಕರಿದ್ದು, ಅವರ ಪೈಕಿ ಮೊದಲ ಹಂತದ ಪ್ರಕ್ರಿಯಲ್ಲಿ 2500 ಕಾರ್ಮಿಕರಿಗೆ ಕಿಟ್ ವಿತರಿಸಲಾಗುತ್ತಿದೆ ಎಂದು ತಿಳಿಸಿದರು. ಕಿಟ್ನಲ್ಲಿ 5ಕೆ.ಜಿ. ಅಕ್ಕಿ, 1 ಕೆ.ಜಿ. ತೊಗರಿಬೇಳೆ, 1 ಲೀ. ಸೂರ್ಯಕಾಂತಿ ಎಣ್ಣೆ, 1 ಕೆ.ಜಿ. ರವಾ ಸೇರಿದಂತೆ ಇನ್ನು ಹಲವು ಅಗತ್ಯ ವಸ್ತುಗಳನ್ನು ಸೇರಿಸಲಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಲಾಕ್ಡೌನ್ನಿಂದ ಹಾಗೂ ಮುಂದಿನ ದಿನಗಳಲ್ಲಿ ತೊಂದರೆಯಾಗದಿರಲಿ ಎನ್ನುವ ಉದ್ದೇಶದಿಂದ ಟ್ಯಾಬ್ ವಿತರಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಅಧ್ಯಯನದ ಕಡೆಗೆ ಹೆಚ್ಚು ಗಮನ ನೀಡಬೇಕು ಎಂದು ಸಲಹೆ ನೀಡಿದರು. ಬಿಜೆಪಿ ಮುಖಂಡರಾದ ಕೆ.ಆರ್. ಮಾಚಪ್ಪನವರ, ಹನಮಂತ ತುಳಸಿಗೇರಿ, ನಾಗಪ್ಪ ಅಂಬಿ, ತಹಶೀಲ್ದಾರ್ ಸಂಗಮೇಶ ಬಾಡಗಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿ ಕಾರಿ ಕಿರಣ ಘೋರ್ಪಡೆ, ಲೋಕೋಪಯೋಗಿ ಇಲಾಖೆ ಎಇಇ ಸೋಮಶೇಖರ ಸಾವನ್, ಸಮಾಜಕಲ್ಯಾಣ ಇಲಾಖೆ ಅಧಿ ಕಾರಿ ಮೋಹನ ಕೋರಡ್ಡಿ, ತೋಟಗಾರಿಕೆ ಇಲಾಖೆ ಅಧಿಕಾರಿ ಮಹೇಶ ದಂಡನ್ನವರ, ಪಂಚಾಯತ್ ರಾಜ್ ಇಲಾಖೆ ಅಧಿ ಕಾರಿ ಎಲ್.ಎಸ್. ಜೋಗಿನ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್