ಗುಳೇದಗುಡ್ಡಕ್ಕೆ ಪದವಿ ಕಾಲೇಜು ಮಂಜೂರು

ರೋಣ ಡಿಗ್ರಿ ಕಾಲೇಜು ಸ್ಥಳಾಂತರ•ಆಶ್ವಾಸನೆ ಈಡೇರಿಸಿದ ಶಾಸಕ ಸಿದ್ದು•ವಿದ್ಯಾರ್ಥಿಗಳಲ್ಲಿ ಹೊಸ ಆಶಾಕಿರಣ

Team Udayavani, Jun 1, 2019, 12:21 PM IST

bk-tdy-1..

ಗುಳೇದಗುಡ್ಡ: ಪಟ್ಟಣಕ್ಕೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಡೆಗೂ ಮಂಜೂರಿಯಾಗಿದ್ದು, ಈ ಮೂಲಕ ಗುಳೇದಗುಡ್ಡ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

ಮೇ 3ರಂದು ಉದಯವಾಣಿ ದಿನಪತ್ರಿಕೆ ಇನ್ನೂ ಆರಂಭವಾಗದ ಡಿಗ್ರಿ ಕಾಲೇಜು ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ಮಾಜಿ ಮುಖ್ಯಮಂತ್ರಿ, ಶಾಸಕ ಸಿದ್ದರಾಮಯ್ಯನವರ ಪ್ರಯತ್ನ, ಸರಕಾರದ ಮೇಲೆ ಅವರ ಸತತ ಒತ್ತಡದಿಂದ ಸದ್ಯ ಗುಳೇದಗುಡ್ಡಕ್ಕೆ ಉನ್ನತ ಶಿಕ್ಷಣ ಇಲಾಖೆ ಉಪಕಾರ್ಯದರ್ಶಿ ಎನ್‌.ಆರ್‌. ಎರೆಕುಪ್ಪಿ ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಜೂರು ಮಾಡಿ ಆದೇಶಿಸಿದ್ದಾರೆ. (ಸರಕಾರದ ಆದೇಶ ಸಂಖ್ಯೆ ಇಡಿ113 ಎಚ್ಪಿಸಿ,2018, ಬೆಂಗಳೂರು ದಿನಾಂಕ 20.05.2019)

ಕಳೆದ ಹಲವು ವರ್ಷಗಳಿಂದ ಗುಳೇದಗುಡ್ಡದಲ್ಲಿ ಪದವಿ ಕಾಲೇಜು ಆರಂಭಿಸುವ ಬಗ್ಗೆ ಬೇಡಿಕೆಯಿತ್ತು. ಪದವಿ ಕಾಲೇಜು ಇಲ್ಲದಿರುವುದರಿಂದ ಸಾಕಷ್ಟು ವಿದ್ಯಾರ್ಥಿಗಳು ಪದವಿ ಶಿಕ್ಷಣ ಪಡೆಯಲು ಪರದಾಡುವಂತಾಗಿತ್ತು. ಬಾದಾಮಿ, ಬಾಗಲಕೋಟೆಗೆ ತೆರಳಿ ಶಿಕ್ಷಣ ಪಡೆಯುವಂತಹ ಸ್ಥಿತಿಯಿತ್ತು. ಸದ್ಯ ಕಾಲೇಜು ಮಂಜೂರಿಯಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೊಸ ಆಶಾಕಿರಣ ಮೂಡಿದಂತಾಗಿದೆ.

ಉನ್ನತ ಶಿಕ್ಷಣ ಇಲಾಖೆ ಉಪಕಾರ್ಯದರ್ಶಿ ಅವರು ಗದಗ ಜಿಲ್ಲೆಯ ರೋಣ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸತತ ಮೂರು ವರ್ಷಗಳ ವಿದ್ಯಾರ್ಥಿಗಳ ಪ್ರವೇಶಾತಿ ಕೊರತೆಯಿರುವುದರಿಂದ ರೋಣದ ಕಾಲೇಜನ್ನು ಗುಳೇದಗುಡ್ಡಕ್ಕೆ ಸ್ಥಳಾಂತರಿಸುವ ಮೂಲಕ ಪಟ್ಟಣಕ್ಕೆ ಪದವಿ ಕಾಲೇಜು ಮಂಜೂರು ಮಾಡಿದ್ದಾರೆ.

ಬಡ ವಿದ್ಯಾರ್ಥಿಗಳಿಗೆ ಅನುಕೂಲ: ಪಟ್ಟಣದಲ್ಲಿಯೇ ಸುಮಾರು ಐದು ಪಿಯು ಕಾಲೇಜುಗಳಿವೆ. ವರ್ಷಕ್ಕೆ ಏನಿಲ್ಲ ಅಂದರೂ ಸುಮಾರು 300-400 ವಿದ್ಯಾರ್ಥಿಗಳು ಪಿಯುಸಿ ತೇರ್ಗೆಡೆ ಹೊಂದಿ ಪದವಿ ಕಲಿಯಲು ಬರುತ್ತಾರೆ. ಅವರೆಲ್ಲರಿಗೂ ಇರುವ ಒಂದೇ ಕಾಲೇಜಿನಲ್ಲಿ ಪ್ರವೇಶ ದೊರೆಯುವುದು ಕಷ್ಟವಾಗಿತ್ತು. ಹೆಚ್ಚಿನ ಡೊನೇಶನ್‌ ಕೊಟ್ಟು ಶಿಕ್ಷಣ ಪಡೆಯುವುದು ಕಷ್ಟವಾಗಿತ್ತು. ಸದ್ಯ ಗುಳೇದಗುಡ್ಡಕ್ಕೆ ಪದವಿ ಕಾಲೇಜು ಮಂಜೂರಿಯಾಗಿರುವುದರಿಂದ ಪಟ್ಟಣದ ಬಡ ನೇಕಾರರ ಹಾಗೂ ಪರ್ವತಿ, ಹಾನಾಪೂರ, ಹಾನಾಪೂರ ಎಸ್‌.ಪಿ, ತೆಗ್ಗಿ, ತಿಮ್ಮಸಾಗರ ಖಾಜಿಬೂದಿಹಾಳ, ಹಂಗರಗಿ, ಮುರುಡಿ, ಕಟಗಿನಹಳ್ಳಿ, ಪಾದನಕಟ್ಟಿ, ಲಾಯದಗುಂದಿ, ತೋಗುಣಸಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಬಡ ರೈತರ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಲಿದೆ.

ಮೂರು ಷರತ್ತು: ತಾತ್ಕಾಲಿಕವಾಗಿ ಗುಳೇದಗುಡ್ಡದ ಪಪೂ ಕಾಲೇಜಿನ ಕಟ್ಟದಲ್ಲಿ ಪದವಿ ಕಾಲೇಜು ಪ್ರಾರಂಭಿಸುವುದು, 2019-20ನೇ ಸಾಲಿನಲ್ಲಿ ಬಂಡವಾಳ ಲೆಕ್ಕ ಶೀರ್ಷಿಕೆಯಡಿ ಹಂಚಿಕೆಯಾಗಿರುವ ಆಯವ್ಯಯದಲ್ಲಿ ಕಟ್ಟಡ ಹಾಗೂ ಇತರೆ ಅಗತ್ಯ ಮೂಲ ಸೌಕರ್ಯಗಳ ನಕ್ಷೆ, ಅಂದಾಜು ಪ್ರತಿ ಸಿದ್ಧಪಡಿಸಿ ಸಲ್ಲಿಸುವುದು. ರೋಣ ಕಾಲೇಜಿಗೆ ಮಂಜೂರಾಗಿರುವ ಕೋರ್ಸ್‌, ಸಂಯೋಜನೆ, ಹುದ್ದೆಗಳನ್ನು ಸ್ಥಳಾಂತರಿಸಿರುವ ಗುಳೇದಗುಡ್ಡ ಪ್ರಥಮ ದರ್ಜೆ ಕಾಲೇಜಿಗೆ ಸ್ಥಳಾಂತರಿಸಿ ಮುಂದುವರಿಸುವುದು ಈ ಮೂರು ಷರತ್ತುಗಳನ್ನು ಹಾಕಿ ಗುಳೇದಗುಡ್ಡಕ್ಕೆ ಡಿಗ್ರಿ ಕಾಲೇಜನ್ನು ಮಂಜೂರಿ ನೀಡಲಾಗಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.