ಗುಳೇದಗುಡ್ಡ: ನಿತ್ಯವೂ ಧೂಳಿನ ಮಜ್ಜನ; ಬೇಸತ್ತ ಜನ!


Team Udayavani, Jan 31, 2024, 5:35 PM IST

ಗುಳೇದಗುಡ್ಡ: ನಿತ್ಯವೂ ಧೂಳಿನ ಮಜ್ಜನ; ಬೇಸತ್ತ ಜನ!

ಉದಯವಾಣಿ ಸಮಾಚಾರ
ಗುಳೇದಗುಡ್ಡ: ಕಲ್ಲುಪುಡಿ ಘಟಕದ ಧೂಳಿನಿಂದ ನಾಲ್ಕೂರಿನ ಜನರಿಗೆ ನಿತ್ಯವೂ ಧೂಳಿನ ಮಜ್ಜನವಾಗುತ್ತಿದ್ದು, ಧೂಳು ಹೊರ ಬರದಂತೆ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ.

ಹೌದು. ಸಮೀಪದ ಮುರಡಿ ಬಳಿ ಇರುವ ಸ್ಟೋನ್‌ ಮತ್ತು ಸಿಲ್ಕ್ ಸ್ಯಾಂಡ್‌ ಕಾರ್ಖಾನೆಯಿಂದ ನಡೆಯುತ್ತಿರುವ ಗಣಿಗಾರಿಕೆಯಿಂದ ಸಾಕಷ್ಟು ಪ್ರಮಾಣದಲ್ಲಿ ಧೂಳು ಬರುತ್ತಿದ್ದು, ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳ ಗಮನಕ್ಕೂ ತಂದರೂ ಪ್ರಯೋಜನವಾಗಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ.

ಮುರುಡಿ ಗ್ರಾಮದ ಹೊರ ವಲಯದ ಗುಡ್ಡದಲ್ಲಿ ನಡೆಯುತ್ತಿರುವ ಈ ಕಾರ್ಖಾನೆಯಿಂದ ಹೊರ ಬರುವ ಧೂಳಿನಿಂದ ಹಾನಾಪೂರ, ಖಾನಾಪೂರ, ಮುರುಡಿ, ಹುಲ್ಲಿಕೇರಿ ಎಸ್‌.ಪಿ. ಗ್ರಾಮಸ್ಥರು ರೋಸಿ ಹೋಗಿದ್ದು, ಸಂಜೆಯಾದರೆ ಸಾಕು ಧೂಳು ಆವರಿಸಿಕೊಳ್ಳುತ್ತದೆ.

ಗುಳೇದಗುಡ್ಡ ಹೋಬಳಿಯ ಕೋಟೆಕಲ್‌ ಪಂಚಾಯಿತಿ ವ್ಯಾಪ್ತಿಯ ಈ ಕಲ್ಲು ಗಣಿಗಾರಿಕೆಯಿಂದ ಪರಿಸರ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ಸಾರ್ವನಿಕರಿಗೆ, ಪ್ರಾಣಿ ಸಂಕುಲಗಳಿಗೆ ಹಾನಿಯಾಗದ ರೀತಿಯಲ್ಲಿ ಕ್ರಷರ್‌ ನಡೆಸಬೇಕೆಂಬ ನಿಯಮವಿದ್ದರೂ ಬೇಕಾಬಿಟ್ಟಿಯಾಗಿ ಈ ಕ್ರಷರ್‌ ನಡೆಸಲಾಗುತ್ತಿದೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ. ಸುಮಾರು ಮೂರು ಕಿಮೀ ವ್ಯಾಪ್ತಿ ಧೂಳು ಆವರಿಸಿಕೊಂಡಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಅಸ್ತಮಾ ಭೀತಿ: ಈ ಕ್ರಷರ್‌ ಕಾರ್ಖಾನೆಯಿಂದ ಹೊರ ಸೂಸುವ ಧೂಳು ನೇರವಾಗಿ ಮುರುಡಿ, ಖಾನಾಪೂರ ಎಸ್‌.ಪಿ, ಹುಲ್ಲಿಕೇರಿ, ಹಾನಾಪೂರ ಎಸ್‌.ಪಿ ಗ್ರಾಮಗಳ ಸುತ್ತ ಬೀಳುತ್ತಿದೆ. ಹೀಗಾಗಿ ಇಲ್ಲಿಯ ಜನ ಅಸ್ತಮಾದಂತಹ ಕಾಯಿಲೆ ಬರುವ
ಭೀತಿಯಲ್ಲಿ ವಾಸಿಸುತ್ತಿದ್ದಾರೆ.

ಬೆಳೆ ಗಿಡ ಧೂಳುಮಯ: ಖಾನಾಪುರ ವ್ಯಾಪ್ತಿಯಲ್ಲಿ ಸುಮಾರು 100 ಹೆಕ್ಟೇರ್‌ ಪ್ರದೇಶ ವ್ಯಾಪ್ತಿಯಲ್ಲಿ ಈ ಧೂಳು ಆವರಿಸುತ್ತಿದ್ದು ಬೆಳೆದ ಬೆಳೆಯಲ್ಲ ಧೂಳುಮಯವಾಗುತ್ತಿದೆ. ಮುರುಡಿ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿನ ಅನೇಕ ಗಿಡಗಳಿಗೂ ಈ ಧೂಳು ಆವರಿಸಿದೆ. ಧೂಳು ನಿಯಂತ್ರಿಸಿ, ಪರಿಸರ ಕಾಳಜಿ ತೋರುವ ನಿಟ್ಟಿನಲ್ಲಿ ಕಾರ್ಖಾನೆ ಆಡಳಿತ ಮಂಡಳಿ ಮುಂದಾಗಬೇಕಿದೆ ಎಂಬ ಒತ್ತಾಯ ಕೇಳಿ ಬಂದಿದೆ.

ಮುರುಡಿ ಗ್ರಾಮದ ಕ್ರಷರ್‌ ಕಾರ್ಖಾನೆಯಿಂದ ಹೊರ ಬರುವ ಧೂಳು ನಿಯಂತ್ರಿಸಲು ಕಾರ್ಖಾನೆ ಮಾಲೀಕರು ಜನವರಿ  ಅಂತ್ಯದೊಳಗೆ ಯಂತ್ರ ಅಳವಡಿಸುತ್ತೇವೆಂದು ತಿಳಿಸಿದ್ದಾರೆ. ನಾನು ಕೂಡಾ ಮತ್ತೆ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ. ಮಾಲಿನ್ಯ ನಿಯಂತ್ರಣ ಮಂಡಳಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೂ ಈ ಕುರಿತು ಮಾತನಾಡುತ್ತೇನೆ.
*ಮಂಗಳಾ ಎಂ, ತಹಸೀಲ್ದಾರ್‌, ಗುಳೇದಗುಡ್ಡ.

ಮುರುಡಿ, ಹುಲ್ಲಿಕೇರಿ ಎಸ್‌.ಪಿ, ಹಾನಾಪುರ ಎಸ್‌.ಪಿ. ಕೋಟೆಕಲ್‌, ಖಾನಾಪುರ ಗ್ರಾಮದಲ್ಲಿ ಎಲ್ಲವೂ ಧೂಳಮಯವಾಗುತ್ತಿದೆ.
ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ತಹಸೀಲ್ದಾರರು ಈ ಕುರಿತು ಕ್ರಮ ಕೈಗೊಳ್ಳುತ್ತಿಲ್ಲ. ಸರಕಾರದ ನಿಯಮ ಪಾಲನೆಯಾಗುತ್ತಿಲ್ಲ. ಜನರ ಆರೋಗ್ಯ ಹದಗೆಟ್ಟರೆ ಅಧಿಕಾರಿಗಳೇ ಹೊಣೆ.
*ಪಿಂಟು ರಾಠೊಡ, ಹುಲ್ಲಿಕೇರಿ ಎಸ್‌ಪಿ,
ಶಿವು ವಾಲಿಕಾರ, ಮುರುಡಿ ಗ್ರಾಮಸ್ಥರು

ಜನರ ದೇಹದೊಳಗೆ ಧೂಳಿನ ಖಣಗಳು ಸೇರುತ್ತಿದ್ದು, ಇದರಿಂದ ಅನಾರೋಗ್ಯ ಸಮಸ್ಯೆ ಕಾಡುತ್ತಿದೆ. ಕೂಡಲೇ ಕ್ರಷರ್‌ನಿಂದ ಉಂಟಾಗುತ್ತಿರುವ ಸಮಸ್ಯೆ ಬಗೆಹರಿಸಬೇಕು. ಧೂಳು ಗ್ರಾಮಗಳಿಗೆ ಬರದಂತೆ ಮಾಲಿಕರಿಗೆ ಸೂಚನೆ ನೀಡಬೇಕು.
*ಮಾರುತಿ ದ್ಯಾಮನಗೌಡ್ರ,
ಪಾಂಡು ಗೌಡರ, ಮುರುಡಿ ಗ್ರಾಮಸ್ಥರು.

ಕಾರ್ಖಾನೆಗೆ ಸದ್ಯ ಒಂದು ವಾಟರ್‌ ಫಾಗ್‌ ಅಳವಡಿಸಲಾಗಿದ್ದು, ಇನ್ನೊಂದು ವಾಟರ್‌ ಫಾಗ್‌ ಆರ್ಡರ್‌ ಕೊಡಲಾಗಿದೆ. ಮುಂಬೈನಿಂದ ಆ ಯಂತ್ರ ಬರಲಿದೆ. 2-3 ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ.
*ಮುರುಗೇಶ ಕಡ್ಲಿಮಟ್ಟಿ,
ಕ್ರಷರ್‌ ಮಾಲಿಕರು

*ಮಲ್ಲಿಕಾರ್ಜುನ ಕಲಕೇರಿ

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.